ಕಾಂಗ್ರೆಸ್ ಶಾಸಕಾಂಗ ಸಭೆ | ಲೋಕಸಭೆಗೆ ಸನ್ನದ್ಧರಾಗಲು ಸಿದ್ದರಾಮಯ್ಯ ಸೂಚನೆ

Date:

Advertisements
  • ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಸಿಎಂ ಘೋಷಣೆ
  • ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ತೀವ್ರ ಅಸಮಾಧಾನ

ಬೆಳಗಾವಿಯ ಬೆಳಗುಂದಿ ಶೂನ್ಯಫಾರಂನಲ್ಲಿ ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆ ಬುಧವಾರ ರಾತ್ರಿ ನಡೆದಿದ್ದು, ಲೋಕಸಭಾ ಚುನಾವಣೆ ಬಗ್ಗೆ ಗಂಭೀರ ಚರ್ಚೆ ನಡೆದಿದೆ.

ಮುಖ್ಯಮಂತ್ರಿಗಳೂ ಮತ್ತು ಶಾಸಕಾಂಗ ಪಕ್ಷದ ನಾಯಕರೂ ಆಗಿರುವ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಸಭೆ ನಡೆದ ಸಭೆಯಲ್ಲಿ ಮುಂಬರುವ ಲೋಕಸಭೆ ಚುನಾವಣೆಗೆ ಎಲ್ಲ ರೀತಿಯಲ್ಲೂ ಸಿದ್ಧರಾಗುವಂತೆ ಸಭೆಯಲ್ಲಿ ಶಾಸಕರಿಗೆ ಸಲಹೆ ನೀಡಿದ್ದಾರೆ.

“ವಿಧಾನಸಭೆ ಚುನಾವಣೆಯಲ್ಲಿ ಪಕ್ಷ ಘೋಷಿಸಿದ ‘ಗ್ಯಾರಂಟಿ’ ಯೋಜನೆಗಳು ಯಶಸ್ವಿಯಾಗಿವೆ. ಈ ಯೋಜನೆಗಳ ಬಗ್ಗೆ ಜನವರಿಯಲ್ಲಿ ಎಲ್ಲ ಜಿಲ್ಲೆಗಳಲ್ಲಿ ಮತ್ತು ವಿಧಾನಸಭಾ ಕ್ಷೇತ್ರವಾರು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬೇಕು. ‘ಗ್ಯಾರಂಟಿ’ ಯೋಜನೆಗಳ ಪ್ರಯೋಜನದ ಪಡೆದ ಫಲಾನುಭವಿಗಳನ್ನು ಒಂದೆಡೆ ಸೇರಿಸಬೇಕು. ಆ ಮೂಲಕ, ಲೋಕಸಭಾ ಚುನಾವಣೆಗೆ ಸಜ್ಜಾಗಬೇಕು” ಎಂದು ಸಿದ್ದರಾಮಯ್ಯ ಸೂಚಿಸಿದ್ದಾರೆ.

Advertisements

“ಗ್ಯಾರಂಟಿಗಳ ಬಗ್ಗೆ ಪಂಚಾಯತಿ ಮಟ್ಟದಲ್ಲಿ ಸಮಾವೇಶ ಮಾಡಿ ಸರ್ಕಾರದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು. ಗ್ಯಾರಂಟಿ ಯೋಜನೆಗಳ ಬಗ್ಗೆ ಹೆಚ್ಚೆಚ್ಚು ಪ್ರಚಾರ ಮಾಡುವ ಮೂಲಕ ಜನರಿಗೆ ಜಾಗೃತಿ ಮತ್ತು ಅರಿವು ಮೂಡಿಸಬೇಕು” ಎಂದು ತಿಳಿಸಿದ್ದಾರೆ.

“ಬೂತ್ ಮತ್ತು ಬ್ಲಾಕ್ ಮಟ್ಟದಲ್ಲಿ ಹೆಚ್ಚೆಚ್ಚು ಕೆಲಸ ಮಾಡುವ ಮೂಲಕ ಪಕ್ಷವನ್ನು ಬಲಗೊಳಿಸಬೇಕು. ಆಯಾ ಕ್ಷೇತ್ರದಲ್ಲಿ ಹೆಚ್ಚಿನ ಮತಗಳನ್ನು ತಂದುಕೊಡುವಂತೆ ಪ್ರಯತ್ನ ನಡೆಸಬೇಕು. ಆದಷ್ಟು ಬೇಗ ಸಂಭಾವ್ಯ ಅಭ್ಯರ್ಥಿಗಳ ವರದಿ ಸಿದ್ದಪಡಿಸಿ ಕೆಪಿಸಿಸಿಗೆ ರವಾನಿಸುವಂತೆ” ಸಿಎಂ ಸೂಚನೆ ನೀಡಿದ್ದಾರೆ.

₹25 ಕೋಟಿ ವಿಶೇಷ ಅನುದಾನ

“ಕಳೆದ ಶಾಸಕಾಂಗ ಪಕ್ಷದ ಸಭೆಯಲ್ಲಿ ಎಲ್ಲ ಶಾಸಕರಿಗೆ ₹25 ಕೋಟಿ ವಿಶೇಷ ಅನುದಾನ ನೀಡುವುದಾಗಿ ಮುಖ್ಯಮಂತ್ರಿ ಘೋಷಿಸಿದ್ದರು. ಅದಕ್ಕೆ ಎಲ್ಲ ಶಾಸಕರು ಮುಖ್ಯಮಂತ್ರಿ ಅವರನ್ನು ಅಭಿನಂದಿಸಿದರು. ಮುಂದಿನ ಬಜೆಟ್‌ ಬಳಿಕ ಎಲ್ಲ ಶಾಸಕರ ಬೇಡಿಕೆಗಳ ಬಗ್ಗೆ ವಿಶೇಷ ಗಮನಹರಿಸಲಾಗುವುದು. ಅಲ್ಲದೆ ಇನ್ನಷ್ಟು ವಿಶೇಷ ಅನುದಾನ ನೀಡುವ ಬಗ್ಗೆಯೂ ಚಿಂತನೆ ನಡೆಸಲಾಗುವುದು” ಎಂದು ಮುಖ್ಯಮಂತ್ರಿ ಭರವಸೆ ನೀಡಿದ್ದಾರೆ ಎನ್ನಲಾಗಿದೆ.

“ಈ ಹಿಂದಿನ ಸಭೆಯಲ್ಲಿ ಮಾತನಾಡಲು ಅವಕಾಶ ಸಿಗದ ಕೆಲವು ಶಾಸಕರು ತಮ್ಮ ಕ್ಷೇತ್ರದಲ್ಲಿನ ಸಮಸ್ಯೆಗಳ ಬಗ್ಗೆ ಹೇಳಿಕೊಂಡರು. ಕ್ಷೇತ್ರದಲ್ಲಿ ಮನೆಗಳನ್ನು ಹಂಚಿಕೆ ಮಾಡಿಲ್ಲ ಎಂದು ಶಾಸಕರು ಅಹವಾಲು ತೋಡಿಕೊಂಡರು. ಆ ಸಮಸ್ಯೆಗಳನ್ನು ಬಗೆಹರಿಸುವ ಭರವಸೆಯನ್ನು ಮುಖ್ಯಮಂತ್ರಿ ನೀಡಿದರು” ಎಂದು ತಿಳಿದುಬಂದಿದೆ.

ಸಿದ್ದರಾಮಯ್ಯ ಅಸಮಾಧಾನ

ಕಾಂಗ್ರೆಸ್ ಶಾಸಕಾಂಗ ಪಕ್ಷದ ಸಭೆಗೆ ಗೈರಾದ ಸಚಿವರ ವಿರುದ್ಧ ಸಿಎಂ ಸಿದ್ದರಾಮಯ್ಯ ಅವರು ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದಾರೆ ಎನ್ನಲಾಗಿದೆ.

ಸಚಿವರಾದ ಪ್ರಿಯಾಂಕ್ ಖರ್ಗೆ, ಎಂ.ಬಿ.ಪಾಟೀಲ್, ಶರಣಪ್ರಕಾಶ್ ಪಾಟೀಲ್, ಜಮೀರ್ ಅಹಮದ್, ಸತೀಶ್ ಜಾರಕಿಹೊಳಿ, ಶರಣಬಸಪ್ಪ ದರ್ಶನಾಪುರ್ ಸೇರಿದಂತೆ ಕೆಲ ಸಚಿವರ ಗೈರಾಗಿದ್ದು, ಸಚಿವ ಸಂಪುಟ ಸಭೆಯಲ್ಲಿ ಸಚಿವರಿಗೆ ಎಚ್ಚರಿಕೆ ನೀಡುವುದಾಗಿ ಸಿದ್ದರಾಮಯ್ಯ ಹೇಳಿದ್ದಾರೆ.

ಸಚಿವರು, ಶಾಸಕರ ನಡುವೆ ಸಮನ್ವಯತೆಗಾಗಿ ಇರುವ ಶಾಸಕಾಂಗ ಸಭೆಗೆ ಸಚಿವರೇ ಗೈರಾದರೆ ಹೇಗೆ ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ಹೇಳಿವೆ.

ಡಿಸಿಎಂ ಹಾಗೂ ಕೆಪಿಸಿಸಿ ಅಧ್ಯಕ್ಷರಾದ ಡಿ.ಕೆ.ಶಿವಕುಮಾರ್, ಕಾರ್ಯಾಧ್ಯಕ್ಷರಾದ ಸಲೀಂ ಅಹಮದ್, ಸಚಿವರುಗಳಾದ ಕೆ.ಹೆಚ್.ಮುನಿಯಪ್ಪ, ರಾಮಲಿಂಗಾರೆಡ್ಡಿ, ಬೋಸರಾಜು, ಈಶ್ವರ ಖಂಡ್ರೆ, ದಿನೇಶ್ ಗುಂಡೂರಾವ್, ಕಾರ್ಯಾಧ್ಯಕ್ಷರಾದ ಚಂದ್ರಪ್ಪ, ಶಾಸಕಾಂಗ ಪಕ್ಷದ ಕಾರ್ಯದರ್ಶಿ ತುಕಾರಾಮ್ ಅವರು ಕಾಂಗ್ರೆಸ್‌ ಶಾಸಕಾಂಗ ಸಬೆಯಲ್ಲಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X