ಮೈಸೂರು | ಪ್ರತಾಪ್ ಸಿಂಹ ಕಚೇರಿಗೆ ಬಿಗಿ ಭದ್ರತೆ; ಸಂಸದನ ಅಮಾನತಿಗೆ ಆಗ್ರಹ

Date:

Advertisements

ಸಂಸತ್‌ ಭವನದಲ್ಲಿ ಬುಧವಾರ ದಾಂಧಲೆ ನಡೆಸಿದ್ದ ಇಬ್ಬರು ಯುವಕರಿಗೆ ಸಂಸದ ಪ್ರತಾಪ್‌ ಸಿಂಹ ಪಾಸ್‌ ನೀಡಿದ್ದರು ಎಂದು ಹೇಳಲಾಗಿದೆ. ಈ ಹಿನ್ನೆಲೆಯಲ್ಲಿ ಮೈಸೂರಿನಲ್ಲಿರುವ ಸಂಸದ ಪ್ರತಾಪ್ ಸಿಂಹ ಅವರ ಕಚೇರಿ ಬಳಿ ಬಿಗಿ ಪೊಲೀಸ್ ಬಂದೋಬಸ್ತ್‌ ಮಾಡಲಾಗಿದೆ.

ಪ್ರತಾಪ್‌ ಸಿಂಹ ಅವರೇ ಪಾಸ್‌ ನೀಡಿದ್ದರು ಎಂಬುದನ್ನು ತಿಳಿದ ಕೂಡಲೇ ಕಾಂಗ್ರೆಸ್‌ ಕಾರ್ಯಕರ್ತರು ಮೈಸೂರಿನಲ್ಲಿ ಪ್ರತಾಪ್ ಸಿಂಹ ಕಚೇರಿ ಎದುರು ಪ್ರತಿಭಟನೆ ನಡೆಸಿದ್ದಾರೆ. ಕಾಂಗ್ರೆಸ್‌ ನಾಯಕರು ಪ್ರತಾಪ್ ಸಿಂಹ ಅಮಾನತಿಗೆ ಆಗ್ರಹಿಸಿದ್ದಾರೆ. ಪ್ರತಿಭಟನೆ ನಡೆದ ಹಿನ್ನೆಲೆ, ಮುಂಜಾಗ್ರತಾ ಕ್ರಮವಾಗಿ ಸಂಸದರ ಕಚೇರಿ ಮುಂದೆ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.

ಘಟನೆ ಕುರಿತು ಪ್ರತಿಕ್ರಿಯೆ ನೀಡಿರುವ ಸಚಿವ ಪ್ರಿಯಾಂಕ್‌ ಖರ್ಗೆ, “ಲೋಕಸಭೆಯಲ್ಲಿ ನಡೆದ ಘಟನೆಗೆ ಯಾರು ಹೊಣೆ? ಒಂದು ವೇಳೆ, ಕಾಂಗ್ರೆಸ್‌ ಸಂಸದರು ಪಾಸ್‌ ನೀಡಿದ್ದರೆ, ಬಿಜೆಪಿಗರು ನಮಗೆ ದೇಶವಿರೋಧಿ ಪಟ್ಟ ಕಟ್ಟುತ್ತಿದ್ದರು. ರಾತ್ರೋರಾತ್ರಿ ಗಲ್ಲಿಗೇರಿಸುತ್ತಿದ್ದರು. ಆದರೆ, ಈಗ ಬಿಜೆಪಿ ಸಂಸದರೇ ಪಾಸ್‌ ನೀಡಿದ್ದಾರೆ. ಈಗವರೆಗೆ ಅವರನ್ನು ಏಕೆ ವಿಚಾರಣೆ ಕರೆದಿಲ್ಲ” ಎಂದು ಹೇಳಿದ್ದಾರೆ.

Advertisements

ಗೃಹ ಸಚಿವ ಪರಮೇಶ್ವರ್ ಕೂಡ ಪ್ರತಿಕ್ರಿಯಿಸಿದ್ದು, “ಗದ್ದಲ ಸೃಷ್ಠಿಸಿದ ಯುವಕರಿಗೆ ಪ್ರತಾಪ್‌ ಸಿಂಹ ಅವರು ಪಾಸ್‌ ನೀಡಿದ್ದಾರೆ. ಅವರಿಗೆ ಯುವಕರ ಬಗ್ಗೆ ತಿಳಿದಿದ್ದರಿಂದಲೇ ಪಾಸ್‌ ನೀಡಿದ್ದಾರೆ. ಪ್ರತಾಪ್ ಸಿಂಹ ಅವರನ್ನು ಲೋಕಸಭೆಯಿಂದ ಅಮಾನತುಗೊಳಿಸಬೇಕು. ಘಟನೆಯ ಬಗ್ಗೆ ಪ್ರಧಾನಿ ಮತ್ತು ಗೃಹ ಸಚಿವರು ಪ್ರತಿಕ್ರಿಯೆ ನೀಡದೇ ಇರುವುದು ಆಶ್ಚರ್ಯ ತಂದಿದೆ” ಎಂದು ಹೇಳಿದ್ದಾರೆ

ಬುಧವಾರ ಸಂಸತ್​ನಲ್ಲಿ ನಡೆದ ಘಟನೆ ಸಂಬಂಧ ಇದೂವರೆಗೂ ಐವರನ್ನು ಪೊಲೀಸರು ಬಂಧಿಸಿದ್ದಾರೆ. ಅವರಲ್ಲಿ ಒಬ್ಬ ಮೈಸೂರು ಮೂಲದ ಮನೋರಂಜನ್ ಎಂದು ತಿಳಿದುಬಂದಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X