ರಾಯಚೂರು | ಗ್ರಾಮೀಣ ಅಂಚೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ

Date:

Advertisements

ಗ್ರಾಮೀಣ ಅಂಚೆ ನೌಕರರಿಗೆ 08 ಗಂಟೆ ಕೆಲಸ ಹಾಗೂ ಪಿಂಚಣಿ ಯೋಜನೆ ಜಾರಿ ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ಗ್ರಾಮೀಣ ಅಂಚೆ ಸೇವಕರ ಸಂಘದಿಂದ ರಾಯಚೂರಿನ ಕೇಂದ್ರ ಅಂಚೆ ಕಚೇರಿ ಎದುರು ಅನಿರ್ದಿಷ್ಟಾವಧಿ ಧರಣಿ ಆರಂಭಿಸಿದ್ದಾರೆ.

“ಏಳನೇ ವೇತನ ಆಯೋಗದ ಕಮಲೇಶ ಚಂದ್ರ ನೇತೃತ್ವದ ಸಮಿತಿ ಶಿಫಾರಸುಗಳನ್ನು ಜಾರಿಗೊಳಿಸದೇ ಅಂಚೆ ಸೇವಕರಿಗೆ ವಂಚಿಸಲಾಗುತಿದೆ. 2014ರಿಂದ ನಿರಂತರ ಹೋರಾಟ ನಡೆಸುತ್ತಿದ್ದರೂ ಸೂಕ್ತ ಸ್ಪಂದನೆ ದೊರೆತಿಲ್ಲ. ಅಂಚೆ ಸೇವಕರ ಸೇವಾ ಹಿರಿತನ ಆಧಾರದ ಮೇಲೆ ವೇತನ ಹೆಚ್ಚಳ ಮಾಡುವುದು, ಮೇಳಗಳನ್ನು ನಡೆಸಿ ಅವೈಜ್ಞಾನಿಕ ಗುರಿಗಳನ್ನು ನೀಡುತ್ತಿರುವುದನ್ನು ಕೈ ಬಿಡಬೇಕು” ಎಂದು ಆಗ್ರಹಿಸಿದರು.

“ಜಿಡಿಎಸ್ ನೌಕರರಿಗೆ ಆಗುತ್ತಿರುವ ಕಿರುಕಳ ತಡೆದು, ಗ್ರೂಪ್ ಇನ್ಸೂರೆನ್ಸ್ ₹5 ಲಕ್ಷಕ್ಕೆ ವಿಸ್ತರಿಸಬೇಕು. ಗ್ರಾಚ್ಯೂಟಿ ಹಣವನ್ನು 5 ಲಕ್ಷ ರೂಗಳಿಗೆ ಹೆಚ್ಚಿಸಬೇಕು” ಎಂಬುದು ಸೇರಿದಂತೆ ಹಲವು ಬೇಡಿಕೆ ಈಡೇರಿಕೆಗೆ ಆಗ್ರಹಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಮೈಸೂರು | ಪ್ರತಾಪ್ ಸಿಂಹ ಕಚೇರಿಗೆ ಬಿಗಿ ಭದ್ರತೆ; ಸಂಸದನ ಅಮಾನತಿಗೆ ಆಗ್ರಹ

ಧರಣಿಯಲ್ಲಿ ಸಂಘದ ಅಧ್ಯಕ್ಷ ದೊಡ್ಡಯ್ಯಸ್ವಾಮಿ, ಕಾರ್ಯದರ್ಶಿ ನರಸಿಂಹಾಚಾರ್ಯ, ರಾಮನಗೌಡ, ಹನುಮಂತಪ್ಪ ಮಾವಿನಭಾವಿ, ಮಲ್ಲಯ್ಯ, ಬಸವರಾಜ, ಚೆನ್ನಾರೆಡ್ಡಿ, ಗೋಪಾಲಕೃಷ್ಣ, ತಿಮ್ಮಪ್ಪ, ಶರಣಪ್ಪ, ಈರಣ್ಣ, ಭೀಮಣ್ಣ, ಯಲ್ಲಪ್ಪ, ಬೂದೆಯ್ಯಸ್ವಾಮಿ, ಶರಣಬಸವ, ಪಂಪಾಪತಿ, ಸುಜಾತ, ಅಬ್ದುಲ್ ಖಾದರ, ಕೃಷ್ಣಪ್ಪ ನಾಯಕ, ಮಲ್ಲಿಕಾರ್ಜುನ, ಅಜೀಜಮಿಯಾ, ಚಿದಾನಂದ ಪಾಟೀಲ್ ಸೇರಿದಂತೆ ಇತರರು ಇದ್ದರು.

ವರದಿ : ಹಫೀಜುಲ್ಲ

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X