ಮೇಕೆದಾಟು ಯೋಜನೆ | ಸಕ್ಷಮ ಪ್ರಾಧಿಕಾರಿಗಳಿಂದ ಅನುಮೋದನೆ ಪಡೆದು ಅನುಷ್ಠಾನ: ಡಿ ಕೆ ಶಿವಕುಮಾರ್

Date:

Advertisements

ಮೇಕೆದಾಟು ಯೋಜನೆಗೆ ಸಕ್ಷಮ ಪ್ರಾಧಿಕಾರಗಳಿಂದ ಅಗತ್ಯ ತೀರುವಳಿ ಅನುಮೋದನೆ ಪಡೆದು ಯೋಜನೆಯನ್ನು ಅನುಷ್ಠಾನಗೊಳಿಸಲು ಕ್ರಮ ವಹಿಸಲಾಗುವುದು ಎಂದು ಉಪ ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ತಿಳಿಸಿದರು.

ವಿಧಾನ ಪರಿಷತ್‌ನಲ್ಲಿ ಸದಸ್ಯ ಟಿ ಎ ಶರವಣ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಪ್ರತಿಕ್ರಿಯಿಸಿದ ಉಪ ಮುಖ್ಯಮಂತ್ರಿಗಳು, “ಮೇಕೆದಾಟು ಯೋಜನೆಗೆ ಇದುವರೆಗೆ ಯಾವುದೇ ಭೂಮಿಯನ್ನು ವಶಪಡಿಸಿಕೊಂಡಿರುವುದಿಲ್ಲ. ಕರ್ನಾಟಕ ಮತ್ತು ತಮಿಳುನಾಡು ಅಂತರ ರಾಜ್ಯ ಗಡಿಯಲ್ಲಿರುವ ಸಿಡಬ್ಲೂಸಿ ಬಿಳಿಗುಂಡ್ಲುವಿನಲ್ಲಿ ಜುಲೈ 2023ರಿಂದ ನವೆಂಬರ್ 2023ರವರೆಗೆ 10.658 ಟಿಎಂಸಿ ನೀರನ್ನು ಹರಿಸಲಾಗಿದೆ” ಎಂದರು.

“ಸಂಕಷ್ಟ ಜಲ ವರ್ಷಗಳಲ್ಲಿ ನೀರಿನ ಹಂಚಿಕೆ ಕುರಿತು ಸೂತ್ರ ರೂಪಿಸುವ ಬಗ್ಗೆ ಕಾವೇರಿ ಜಲ ನಿಯಂತ್ರಣಾ ಸಮಿತಿಯ ಕಾವೇರಿ ಜಲ ನಿರ್ವಹಣಾ ಪ್ರಾಧಿಕಾರದ ಸಭೆಗಳಲ್ಲಿ ಚರ್ಚಿಸಲಾಗುತ್ತಿದ್ದು ಸಂಕಷ್ಟ ಹಂಚಿಕೆ ಸೂತ್ರವು ಅಂತಿಮವಾಗಬೇಕಿದೆ” ಎಂದು ಸಚಿವರು ಸ್ಪಷ್ಟಪಡಿಸಿದರು.

Advertisements

“ಪ್ರಸ್ತುತ ಜಲವರ್ಷ 2023-24 ಆರಂಭದಿಂದಲೂ ಸಂಕಷ್ಟ ವರ್ಷವಾಗಿದ್ದರೂ ಸಹ ಸರ್ವೋಚ್ಚ ನ್ಯಾಯಾಲಯದ 2018ರ ಆದೇಶದಲ್ಲಿ ಮಾರ್ಪಡಿಸಿರುವಂತೆ ಕಾವೇರಿ ಜಲ ವಿವಾದ ನ್ಯಾಯಾಧೀಕರಣ ಆದೇಶದಲ್ಲಿ ಸಾಮಾನ್ಯ ಜಲ ವರ್ಷಕ್ಕೆ ನಿಗದಿಪಡಿಸಿರುವ ಪ್ರಮಾಣದಂತೆ ನೀರು ಹರಿಸಬೇಕೆಂದು ತಮಿಳುನಾಡು ರಾಜ್ಯವು ಕೋರಿರುವುದನ್ನು ರಾಜ್ಯವು ವಿರೋಧಿಸಿರುತ್ತದೆ. ಈ ಪ್ರಕರಣದಲ್ಲಿ ಕರ್ನಾಟಕ ರಾಜ್ಯವು ಸಹ ಅರ್ಜಿಯನ್ನು ಸರ್ವೋಚ್ಚ ನ್ಯಾಯಾಲಯದಲ್ಲಿ ಸಲ್ಲಿಸಿದೆ” ಎಂದರು.

“ರಾಜ್ಯದ ಕಾನೂನು ತಂಡವು ನ್ಯಾಯಾಲಯದಲ್ಲಿ ರಾಜ್ಯದ ಪ್ರಸ್ತುತ ಜಲ ಸಂಕಷ್ಟದ ಕುರಿತು ಪ್ರತಿಪಾದಿಸಿದೆ. ಕರ್ನಾಟಕದ ಜಲಾಯಶಯಗಳಲ್ಲಿ ಕಡಿಮೆ ಪ್ರಮಾಣದ ನೀರಿನ ಶೇಖರಣೆ ಹಾಗೂ ಕಡಿಮೆ ಒಳ ಹರಿವು ಸೇರಿದಂತೆ ಹಲವು ಅಂಶಗಳನ್ನು ರಾಜ್ಯವು ನ್ಯಾಯಾಲಯದ ಮುಂದೆ ಪ್ರತಿಪಾದಿಸಿದೆ” ಎಂದು ಹೇಳಿದರು.

“ಕೇಂದ್ರ ಸರ್ಕಾರ ಹಾಗೂ ರಾಜ್ಯಗಳು ಮಂಡಿಸಿದ ವಾದಗಳನ್ನು ಆಲಿಸಿ ಸಿಡಬ್ಲೂಆರ್‌ಸಿ ಸಿಡಬ್ಲೂಎಂಎ ಇವುಗಳಲ್ಲಿ ನೀರಾವರಿ ಕೃಷಿ ಇತ್ಯಾದಿ ವಿಷಯಗಳಲ್ಲಿ ಪರಿಣಿತರು ಇರುವುದನ್ನು ಉಲ್ಲೇಖಿಸಿ ಅದರ ನಿರ್ದೇಶನಗಳನ್ನು ನಿರಾಕರಿಸಲು ಕಾರಣವಿಲ್ಲವೆಂದು ಹಾಗೂ ಸಿಡಬ್ಲೂಎಂಎ ನಿರ್ದೇಶನಗಳನ್ನು ಕರ್ನಾಟಕವು ಪಾಲಿಸಿದೆ ಎಂದು ಸಿಡಬ್ಲೂಎಂಯು ಸಲ್ಲಿಸಿದ ಅಫಿಡವಿಟ್‌ನಲ್ಲಿಯ ಅಂಶಗಳನ್ನು ಪರಿಗಣಿಸಿ ಸರ್ವೋಚ್ಚ ನ್ಯಾಯಾಲಯವು 2023ರ ಸೆಪ್ಟೆಂಬರ್ 21ರಂದು ಆದೇಶದಲ್ಲಿ ಪ್ರಕರಣಕ್ಕೆ ಸಂಬಂಧಿಸಿದ ತಮಿಳುನಾಡು ರಾಜ್ಯದ ಅರ್ಜಿಯನ್ನು ತಿರಸ್ಕರಿಸಿ ಇತ್ಯರ್ಥಗೊಳಿಸಿದೆ” ಎಂದು ಉಪ ಮುಖ್ಯಮಂತ್ರಿಗಳು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X