ಅತ್ಯಾಚಾರ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ – ಗರ್ಭಪಾತ ಹಕ್ಕುಗಳ ವಿವರಣೆ ಕಡ್ಡಾಯ: ಹೈಕೋರ್ಟ್‌

Date:

Advertisements

ಅತ್ಯಾಚಾರ ಪ್ರಕರಣಗಳಲ್ಲಿ ಅತ್ಯಾಚಾರ ಅಥವಾ ಪೋಕ್ಸೋ ಕಾಯ್ದೆಯಡಿ ದೂರು ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆಯನ್ನು ಕಡ್ಡಾಯವಾಗಿ ಮಾಡಿಸಬೇಕು. ಗರ್ಭಪಾತ ಹಕ್ಕುಗಳ ಬಗ್ಗೆ ಸಂತ್ರಸ್ತೆ ಮತ್ತು ಆಕೆಯ ಪೋಷಕರಿಗೆ ಮಾಹಿತಿ ನೀಡಬೇಕು ಎಂದು ಕರ್ನಾಟಕ ಹೈಕೋರ್ಟ್‌ ನಿರ್ದೇಶನ ನೀಡಿದೆ.

ಅತ್ಯಾಚಾರ ಸಂತ್ರಸ್ತೆ, 17 ವರ್ಷದ ಬಾಲಕಿ 24 ವಾರಗಳ ಗರ್ಭಿಣಿಯಾಗಿದ್ದು, ಆಕೆಗೆ ಗರ್ಭಪಾತ ಮಾಡಿಸಲು ಅನುಮತಿ ಕೋರಿ ಸಂತ್ರಸ್ತೆಯ ತಂದೆ ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಹೈಕೋರ್ಟ್‌ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್‌ ಅವರಿದ್ದ ಪೀಠವು ಅರ್ಜಿಯ ವಿಚಾರಣೆ ನಡೆಸಿದೆ. ಅತ್ಯಾಚಾರ ಪ್ರಕರಣ ದಾಖಲಾದ ಕೂಡಲೇ ಸಂತ್ರಸ್ತೆಗೆ ವೈದ್ಯಕೀಯ ಪರೀಕ್ಷೆ ಮಾಡಿಸಬೇಕು ಎಂದು ಹೇಳಿದೆ.

17 ವರ್ಷದ ಬಾಲಕಿಯ ಪ್ರಕರಣದಲ್ಲಿ ದೂರು ದಾಖಲಾದಾಗಲೇ ಆಕೆಗೆ ಗರ್ಭಪಾತ ಹಕ್ಕುಗಳ ಕುರಿತು ತಿಳಿಸಿದ್ದರೆ, ಸಂತ್ರಸ್ತೆ ಹೈಕೋರ್ಟ್‌ ಮೆಟ್ಟಿಲೇರುವ ಅತ್ಯವೇ ಬರುತ್ತಿರಲಿಲ್ಲ. ಅತ್ಯಾಚಾರಕ್ಕೊಳಗಾಗಿ ಗರ್ಭಿಣಿಯಾದರೆ, ಸಂತ್ರಸ್ತರಿಗೆ ಇರುವ ಹಕ್ಕುಗಳ ಬಗ್ಗೆ ತಿಳಿಸಬೇಕು. ಆಗ ಸಂತ್ರಸ್ತೆಯರು ಗರ್ಭಪಾತಕ್ಕೆ ಅನುಮತಿ ಕೋರಿ ಕೋರ್ಟ್‌ವರೆಗೂ ಬರುವುದು ತಪ್ಪುತ್ತದೆ ಎಂದು ಕೋರ್ಟ್‌ ಹೇಳಿದೆ.

Advertisements

ಅತ್ಯಾಚಾರ ಪ್ರಕರಣದ ಎಫ್​ಐಆರ್​ ದಾಖಲಿಸುವ ಸಮಯದಲ್ಲೇ ಸಂತ್ರಸ್ತೆ ಮತ್ತು ಆಕೆಯ ಕುಟುಂಬಸ್ಥರಿಗೆ ವೈದ್ಯಕೀಯ ಗರ್ಭಪಾತದ ಕುರಿತು ಮಾಹಿತಿ ನೀಡಬೇಕು. ಆಗ, ತಡವಾಗಿ ಗರ್ಭಪಾತಕ್ಕೆ ಅನುಮತಿ ಕೋರುವಾಗ ಅವರು ಅನುಭವಿಸುವ ಮಾನಸಿಕ ಯಾತನೆಯನ್ನು ತಪ್ಪಿಸಲು ಸಾಧ್ಯವಾಗುತ್ತದೆ ಎಂದು ಕೋರ್ಟ್‌ ಒತ್ತಿ ಹೇಳಿದೆ.

ಈ ಸುದ್ದಿ ಓದಿದ್ದೀರಾ?: ಭ್ರೂಣ ಹತ್ಯೆ ಪ್ರಕರಣ | ರಾಜ್ಯದಲ್ಲಿ ದೊಡ್ಡ ಜಾಲವೇ ಇದ್ದು, ಎಸ್‌ಐಟಿ ತನಿಖೆಗೆ ನೀಡಬೇಕು: ಆರ್‌ ಅಶೋಕ್

ಪೋಕ್ಸೋ ಪ್ರಕರಣದಲ್ಲಿ ಪೋಕ್ಸೋ ಕಾಯ್ದೆಯ ಸೆಕ್ಷನ್ 376ರ ಅಡಿಯಲ್ಲಿ ಸಂತ್ರಸ್ತೆಯನ್ನು ವೈದ್ಯಕೀಯ ಪರೀಕ್ಷೆಗೆ ಒಳಪಡಿಸಬೇಕು. ಆಕೆ ಗರ್ಭಿಣಿಯಾಗಿದ್ದಾಳೆಯೇ, ಇಲ್ಲವೇ ಎಂಬುದನ್ನು ಖಚಿತಪಡಿಸಿಕೊಳ್ಳಬೇಕು. ಆಕೆ ಗರ್ಭಿಣಿಯಾಗಿದ್ದಲ್ಲಿ ಮಕ್ಕಳ ಕಲ್ಯಾಣ ಸಮಿತಿ (ಸಿಡಬ್ಲ್ಯೂಸಿ) ಅಥವಾ ಜಿಲ್ಲಾ ಮಕ್ಕಳ ರಕ್ಷಣಾ ಘಟಕಕ್ಕೆ ಮಾಹಿತಿ ನೀಡಬೇಕು. ಅವರು ಗರ್ಭಾವಸ್ಥೆಯ ಪರಿಣಾಮ, ಸಂತ್ರಸ್ತೆಯ ದೈಹಿಕ ಮತ್ತು ಮಾನಸಿಕ ಸ್ಥಿತಿ, ಗರ್ಭಾವಸ್ಥೆಯ ಮುಂದುವರಿಕೆ, ಗರ್ಭಾವಸ್ಥೆಯ ಮುಕ್ತಾಯ ಹಾಗೂ ಕಾರ್ಯವಿಧಾನಗಳ ಬಗ್ಗೆ ಸಂತ್ರಸ್ತರಿಗೆ ಇಳಿಸಿಕೊಡಬೇಕು ಎಂದು ಹೈಕೋರ್ಟ್‌ ತಿಳಿಸಿದೆ.

ಸಂತ್ರಸ್ತೆಗೆ ಗರ್ಭಪಾತದ ವೇಳೆ ಭ್ರೂಣದ ಅಂಗಾಂಶದ ಮಾದರಿಗಳನ್ನು ಸಂರಕ್ಷಿಸಬೇಕು. ಫೋರೆನ್ಸಿಕ್ ಸೈನ್ಸ್ ಲ್ಯಾಬೋರೇಟರಿ ಮತ್ತು ಡಿಎನ್‌ಎ ವಿಶ್ಲೇಷಣೆಗೆ ಕಳುಹಿಸಬೇಕು ಎಂದು ನ್ಯಾಯಾಲಯ ಹೇಳಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

Download Eedina App Android / iOS

X