ಬೀದರ್ | ಕೆಲ ಕಚೇರಿಗಳನ್ನು ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿ ಮನವಿ

Date:

Advertisements

ಕಲ್ಯಾಣ ಕರ್ನಾಟಕದ ಜನರಿಗೆ ಅನುಕೂಲವಾಗಲು ಕೆಲ ಕಚೇರಿಗಳನ್ನು ಕಲಬುರಗಿಗೆ ಸ್ಥಳಾಂತರಿಸಲು ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯ ಜಿಲ್ಲಾಧ್ಯಕ್ಷ ಅನಂತರೆಡ್ಡಿ ಅವರ ನೇತೃತ್ವದಲ್ಲಿ ಇಂದು (ಡಿ.15) ಬೀದರ್ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಕರ್ನಾಟಕದಲ್ಲಿ ಅತೀ ಹಿಂದುಳಿದ ಪ್ರದೇಶವಾದ ಕಲ್ಯಾಣ ಕರ್ನಾಟಕದ ಜನರ ಶ್ರೇಯೋ ಅಭಿವೃದ್ಧಿಗಾಗಿ 371(ಜೆ) ಕಾಯ್ದೆಯನ್ನು ಕೇಂದ್ರ ಸರ್ಕಾರ ಜಾರಿಗೊಳಿಸಿದ್ದು, ಐತಿಹಾಸಿಕ ದಾಖಲೆಯಾಗಿದೆ. ದೇವರು ವರ ಕೊಟ್ಟರೂ ಪೂಜಾರಿ ಕೊಡಲಿಲ್ಲವೆಂಬ ಗಾದೆ ಈ ಭಾಗದ ಜನರಿಗೆ ಅನ್ವಯವಾಗುತ್ತದೆ.

ಬೀದರದಿಂದ ಬೆಂಗಳೂರು 800-850 ಕಿ.ಮೀ. ದೂರವಿದು, ಅದೇ ರೀತಿಯಾಗಿ ಬೆಳಗಾವಿ ಸುವರ್ಣ ಸೌಧ ಸಹ 500-550 ಕಿ.ಮೀ. ಅಂತರದಲ್ಲಿದೆ. ಈ ಕಾರಣಕ್ಕಾಗಿ ದೊಡ್ಡ-‌ ದೊಡ್ಡ ರಾಜ್ಯಗಳನ್ನು ಚಿಕ್ಕದಾಗಿ ಮಾಡಿದರೆ ಅಭಿವೃದ್ಧಿಯಾಗುತ್ತದೆ ಎಂಬ ಕೂಗು ಕೇಳಿ ಬರುತ್ತಿದೆ.

Advertisements

ದಕ್ಷಿಣ ಕರ್ನಾಟಕ, ಉತ್ತರ ಕರ್ನಾಟಕ, ಕಿತ್ತೂರು ಕರ್ನಾಟಕ, ಕಲ್ಯಾಣ ಕರ್ನಾಟಕ ಎಂಬ ತಾರತಮ್ಯವೇ ಬೇಡ. ಆದ್ದರಿಂದ, ಆಯಾ ಭಾಗದ ಜನರಿಗೆ ಅನುಕೂಲವಾಗುವಂತೆ ಕೆಲ ಕಚೇರಿಗಳು ಬೆಂಗಳೂರಿನಿಂದ ಆಯಾ ಭಾಗಕ್ಕೆ ಸ್ಥಳಾಂತರಿಸಿದರೆ, ಎಲ್ಲಾ ಭಾಗದ ಜನರು ಎಲ್ಲಾ ಕಡೆಯೂ ಸುತ್ತಲು ಮತ್ತು ಆ ಭಾಗದ ಜನಜೀವನ, ಸಂಸ್ಕೃತಿ, ಸಾಹಿತ್ಯ, ಊಟ, ಉಡುಗೆ ಅರಿಯಲು ಸಹ ಸಾಧ್ಯವಾಗುತ್ತದೆ.

ಹೀಗಾಗಿ, ಕಲ್ಯಾಣ ಕರ್ನಾಟಕದ ಕೇಂದ್ರ ಭಾಗವಾದ ಕಲಬುರಗಿಯಲ್ಲಿ ಕೆಲ ಕಚೇರಿಗಳನ್ನು ಸ್ಥಾಪಿಸಿ, ಈ ಭಾಗದ ಜನರು ಬೆಂಗಳೂರಿಗೆ ಹೋಗುವುದನ್ನು ತಪ್ಪಿಸಬೇಕೆಂದು ಮತ್ತು ಸರ್ಕಾರದ ಆಡಳಿತ ಜನರ ಅನುಕೂಲಕ್ಕೆ ಎಂಬ ಪ್ರಜಾಪ್ರಭುತ್ವದ ಆಶಯವನ್ನು ಸರ್ಕಾರ ಈಡೇರಿಸಬೇಕೆಂದು, ಕಲ್ಯಾಣ ಕರ್ನಾಟಕ ಜನಪರ ಸಂಘರ್ಷ ಸಮಿತಿಯು ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಿತು.

ಈ ಸಂದರ್ಭದಲ್ಲಿ ಬಕ್ಕಪ್ಪಾ ನಾಗೋರಾ, ಡಾ. ಸಿ.ಆನಂದರಾವ, ರಮೇಶ್‌ ಬಿರಾದಾರ, ವಿಶ್ವನಾಥ ಉಪ್ಪೆ, ವಿದ್ಯಾಸಾಗರ, ಕೃಷ್ಣರೆಡ್ಡಿ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

Download Eedina App Android / iOS

X