ಕೇರಳ ತಕರಾರು ಅರ್ಜಿ ವಜಾ : ‘ಕೆ‌ಎಸ್‌ಆರ್‌ಟಿಸಿ’ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದ ಮದ್ರಾಸ್ ಹೈಕೋರ್ಟ್‌

Date:

Advertisements

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ‘ಕೆ‌ಎಸ್‌ಆರ್‌ಟಿಸಿ’ ಹೆಸರು‌ ಬಳಕೆಗೆ ಯಾವುದೇ ಅಭ್ಯಂತರವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಹೇಳಿದೆ. ಕೇರಳ ಸರ್ಕಾರದ ರಸ್ತೆ ಸಾರಿಗೆ ನಿಗಮವು (ಆರ್‌ಟಿಸಿ) ಸಲ್ಲಿಸಿದ್ದ ತಕರಾರು ಅರ್ಜಿಯನ್ನು ವಜಾಗೊಳಿಸಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ‘ಕೆಎಸ್ಆರ್‌ಟಿಸಿ’ ಎಂದು ಸಂಕ್ಷಿಪ್ತ ಬಳಕೆಗಾಗಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರವನ್ನು ನೀಡಲು ಅರ್ಜಿ ಸಲ್ಲಿಸಿದ್ದು, ಭಾರತ ಸರ್ಕಾರದ ಟ್ರೇಡ್ ಮಾರ್ಕ್ ರಿಜಿಸ್ಟ್ರಿಯಿಂದ 2013ರಲ್ಲಿ ಟ್ರೇಡ್ ಮಾರ್ಕ್ ಪ್ರಮಾಣ ಪತ್ರಗಳನ್ನು ಸಂಸ್ಥೆಯು 1973ರ ನವೆಂಬರ್ 1ರಿಂದ ಬಳಸುತ್ತಿರುವುದನ್ನು ಮಂಜೂರು ಮಾಡಲಾಗಿದೆ. ಭಾರತ ಸರ್ಕಾರದ ರಿಜಿಸ್ಟ್ರಾರ್ ಆಫ್ ಕಾಪಿ ರೈಟ್ಸ್ ಅವರಿಂದ ‘ಕೆಎಸ್‌ಆರ್‌ಟಿಸಿ’ ಲೋಗೋ ಮತ್ತು ‘ಗಂಡಭೇರುಂಡ ಗುರುತು’ ಬಳಕೆಗಾಗಿ ಕಾಪಿ ರೈಟ್‌ನ್ನು ಸಹ ಪಡೆಯಲಾಗಿದೆ.

ಇದಾದ ನಂತರ ಕೇರಳ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯು ಚೆನ್ನೈನಲ್ಲಿರುವ ಬೌದ್ಧಿಕ ಆಸ್ತಿ ಮೇಲ್ಮನವಿ ಮಂಡಳಿಯ ಮುಂದೆ ಇದನ್ನು ಪ್ರಶ್ನಿಸಿದೆ. ಕೇರಳ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ ಸಂಸ್ಥೆಯು 42 ವರ್ಷಗಳಿಂದ ಕೆಎಸ್‌ಆರ್‌ಟಿಸಿ ಹೆಸರನ್ನು ಬಳಸುತ್ತಿರುವ ಬಗ್ಗೆ ತಿಳಿದಿದೆ. ಆದ್ದರಿಂದ ಕೆಎಸ್‌ಆರ್‌ಟಿಸಿಯು ಪಡೆದಿರುವ ಟ್ರೇಡ್ ಮಾರ್ಕ್ ನೋಂದಣಿ ಅಮಾನ್ಯವಾಗಿದೆ ಎಂದು ಅರ್ಜಿ ಸಲ್ಲಿಸಲು ಅರ್ಹರಾಗಿರುವುದಿಲ್ಲ ಎಂದು ಕೆಎಸ್‌ಆರ್‌ಟಿಸಿ ವಾದಿಸಿದೆ.

Advertisements

ಕೇರಳ ಕೆಆರ್‌ಟಿಸಿ ಕೂಡ 2019ರಲ್ಲಿ ಕೆಎಸ್‌ಆರ್‌ಟಿಸಿಗೂ ಹಿಂದಿನಿಂದ ಸಂಕ್ಷಿಪ್ತ ಹೆಸರನ್ನು ಬಳಸುತ್ತಿರುವ ಕುರಿತು ನೋಂದಣಿ ಪಡೆದುಕೊಂಡಿದೆ.

ನಂತರ ಕೇಂದ್ರ ಸರ್ಕಾರವು ಐಪಿಎಬಿಯನ್ನು ರದ್ದುಗೊಳಿಸಿದ್ದು, ಐಪಿಎಬಿ ಮುಂದೆ ಬಾಕಿ ಉಳಿದಿದ್ದ ಪ್ರಕರಣಗಳನ್ನು ಚೆನ್ನೈನಲ್ಲಿರುವ ಮದ್ರಾಸ್ ಹೈಕೋರ್ಟ್‌ಗೆ ವರ್ಗಾಯಿಸಲಾಯಿತು.

ಈ ಸುದ್ದಿ ಓದಿದ್ದೀರಾ? ಬಿಬಿಎಂಪಿ | 202 ಕೆರೆಗಳ ಪೈಕಿ 159 ಕೆರೆಗಳಲ್ಲಿ ಒತ್ತುವರಿ: ಸರ್ವೇ ಕಾರ್ಯಕ್ಕಾಗಿ ಹೆಚ್ಚು ಭೂಮಾಪಕರನ್ನು ನಿಯೋಜಿಸಲು ಸೂಚನೆ

ಈ ಪ್ರಕರಣವು ಡಿ.12 ರಂದು ಮದ್ರಾಸ್ ಹೈಕೋರ್ಟ್ ಮುಂದೆ ಬಂದಿದ್ದು, ಕೇರಳ ಆರ್‌ಟಿಸಿ ಸಲ್ಲಿಸಿದ ಅರ್ಜಿಗಳನ್ನು ಹೈಕೋರ್ಟ್ ವಜಾಗೊಳಿಸಿದೆ.

ಕೇರಳ ಕೆಆರ್‌ಟಿಸಿ ಸಲ್ಲಿಸಿದ ಪ್ರಕರಣವನ್ನು ಮದ್ರಾಸ್ ಹೈಕೋರ್ಟ್ ವಜಾಗೊಳಿಸಿರುವ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ‌ (ಕೆಎಸ್‌ಆರ್‌ಟಿಸಿ) ಪ್ರಸಕ್ತ ಹಾಗೂ ಮುಂಬರುವ ದಿನಗಳಲ್ಲಿ ಸಹ ‘ಕೆಎಸ್ಆರ್‌ಟಿಸಿ’ ಹೆಸರನ್ನು ಬಳಸಲು ಯಾವುದೇ ಕಾನೂನು ಅಡಚಣೆಯಿರುವುದಿಲ್ಲ ಎಂದು ನಿಗಮ ತಿಳಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

ಬೀದರ್‌ | ಅತಿವೃಷ್ಟಿ : ತ್ವರಿತ ಬೆಳೆ ಹಾನಿ ಪರಿಹಾರಕ್ಕೆ ಕಿಸಾನ್‌ ಸಭಾ ಒತ್ತಾಯ

ಮೇ ತಿಂಗಳಿಂದ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಉದ್ದು, ಹೆಸರು, ತೊಗರಿ ಸೇರಿದಂತೆ ಹಲವು...

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

Download Eedina App Android / iOS

X