ಯಾದಗಿರಿ | ಜಾತಿ ದೌರ್ಜನ್ಯ: ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ದಲಿತರಿಗೆ ಬಹಿಷ್ಕಾರ

Date:

Advertisements

ಜಾತೀಯತೆ ಆಚರಣೆಯನ್ನು ತಡೆಯಲು ಹಲವಾರು ಕಾನೂನುಗಳಿದ್ದರೂ, ಜಾತಿಯ ಕಾರಣಕ್ಕೆ ದೌರ್ಜನ್ಯ ಎಸಗುವ ಕೃತ್ಯಗಳು ನಡೆಯುತ್ತಲೇ ಇವೆ. ಬೈಕ್ ಖರೀದಿಸಿದ್ದಕ್ಕೆ, ಮೀಸೆಬಿಟ್ಟಿದ್ದಕ್ಕೆ, ಕಾಲು ಮೇಲೆ ಕಾಲು ಹಾಕಿ ಕುಳಿತಿದ್ದಕ್ಕೆ ದಲಿತರ ಮೇಲೆ ಹಲ್ಲೆ ಮಾಡಿದ, ಹತ್ಯೆಗೈದ ಹಲವಾರು ಘಟನೆಗಳು ನಡೆದಿವೆ. ಇದೀಗ, ದೇವರಿಗೆ ಬಲಿ ಕೊಟ್ಟ ಕೋಣದ ಮಾಂಸ ತಿನ್ನದಿದ್ದರೆ ಗ್ರಾಮದ ಎಲ್ಲ ದಲಿತರಿಗೂ ಬರಿಷ್ಕಾರ ಹಾಕಿ ದೌರ್ಜನ್ಯ ಎಸಗಲಾಗುತ್ತದೆ ಎಂಬ ವಿಚಾರ ಬೆಳಕಿಗೆ ಬಂದಿದೆ.

ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವಿಕೇರಾ ಜಾತ್ರೆಯಲ್ಲಿ ಇಂತಹ ಅನಿಷ್ಟ ಪದ್ದತಿಯನ್ನು ಗ್ರಾಮದ ಜನರು ಆಚರಿಸುತ್ತಿದ್ದಾರೆ ಎಂದು ವರದಿಯಾಗಿದೆ. ಜಾತ್ರೆಯಲ್ಲಿ ಹಲವರು ಕೋಣಗಳನ್ನು ದೇವರಿಗೆ ಬಲಿ ಕೊಡುತ್ತಾರೆ. ಆ ಕೋಣಗಳ ಮಾಂಸವನ್ನು ದಲಿತರು ತಿನ್ನಬೇಕು. ತಿನ್ನಲು ನಿರಾಕರಿಸಿದರೆ ಅವರಿಗೆ ಗ್ರಾಮದಿಂದ ಬಹಿಷ್ಕಾರ ಹಾಕುವ, ಗ್ರಾಮದೊಳಗೆ ಪ್ರವೇಶವಿಲ್ಲ ಎಂಬ ಜಾತೀಯತೆ ಅನುಕರಣೆಯ ನಿಯಮವನ್ನು ಹೇರಲಾಗಿದೆ ಎಂದು ತಿಳಿದುಬಂದಿದೆ.

ಈ ವರ್ಷ ಡಿಸೆಂಬರ್ 18ರಿಂದ ಗ್ರಾಮದಲ್ಲಿ ಜಾತ್ರೆ ನಡೆಯಲಿದೆ. ಜಾತ್ರೆಯಲ್ಲಿ ಕೋಣ ಬಲಿಕೊಡಲು ಗ್ರಾಮದ ಎಲ್ಲ ಮನೆಗಳಿಂದಲೂ ಚಂದಾ ವಸೂಲಿ ಮಾಡಲಾಗುತ್ತದೆ ಎಂದೂ ಕೂಡ ಹೇಳಲಾಗಿದೆ.

Advertisements

ದಲಿತರಿಗೆ ಬಹಿಷ್ಕಾರ ಹಾಕುವ ಬೆದರಿಕೆಯ ಬಗ್ಗೆ ದಲಿತ ಸಂಘರ್ಷ ಸಮಿತಿಯ ಮುಖಂಡ ಮಲ್ಲಿಕಾರ್ಜುನ ಕ್ರಾಂತಿ ಅವರು ಜಿಲ್ಲಾಧಿಕಾರಿ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗೆ ದೂರು ನೀಡಿದ್ದಾರೆ. ಕೋಣದ ಬಲಿ ಹೆಸರಿನಲ್ಲಿ ನಡೆಯುತ್ತಿರುವ ಮೌಡ್ಯಾಚರಣೆಯನ್ನು ತಡೆಯಬೇಕು. ದಲಿತರಿಗೆ ಬಹಿಷ್ಕಾರ ಹಾಕುವವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Download Eedina App Android / iOS

X