ಚಿತ್ರದುರ್ಗ | ಕೂಲಿ ಹಣ ಬಿಡುಗಡೆ ಒತ್ತಾಯಿಸಿ ಮನರೇಗಾ ಕಾರ್ಮಿಕರ ಪತ್ರ ಚಳುವಳಿ

Date:

Advertisements

ಮನರೇಗಾ ಯೋಜನೆಯಡಿ ಕೆಲಸ ಮಾಡಿದ ಕಾರ್ಮಿಕರಿಗೆ ಮೂರ್ನಾಲ್ಕು ತಿಂಗಳಿಂದ ಕೂಲಿ ಹಣ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕೆಂದು ಒತ್ತಾಯಿಸಿ ಮನರೇಗಾ ಕಾರ್ಮಿಕರು ಪ್ರಧಾನಿ ನರೇಂದ್ರ ಮೋದಿ ಅಂಚೆ ಪತ್ರ ಬರೆದಿದ್ದಾರೆ.

ಮನರೇಗಾ ಕಾರ್ಮಿಕರು ಪ್ರಧಾನಿ ಪತ್ರ ಬರೆಯುವ ಮೂಲಕ ರಾಜ್ಯಾದ್ಯಂತ ಪತ್ರ ಚಳುವಳಿ ನಡೆಸಿದ್ದಾರೆ. ಅಂತೆಯೇ, ಚಿತ್ರದುರ್ಗ ತಾಲೂಕಿನ ಐನಳ್ಳಿ, ಕೋಗುಂಡೆ, ಪಂಜಯ್ಯನಹಟ್ಟಿ ಸೇರಿದಂತೆ ಹಲವಾರು ಗ್ರಾಮಗಳ ಮನರೇಗಾ ಕಾರ್ಮಿಕರು ಪ್ರಧಾನಿಗೆ ಪತ್ರ ಬರೆದಿದ್ದಾರೆ.

“ಮೂರು ತಿಂಗಳಿಂದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಕೂಲಿ ಮಾಡಿದ ಹಣವನ್ನು ಸರ್ಕಾರ ಬಿಡುಗಡೆ ಮಾಡಿಲ್ಲ. ಕೂಡಲೇ ಹಣ ಬಿಡುಗಡೆ ಮಾಡಬೇಕು. ತಾಲೂಕುಗಳಲ್ಲಿ ಬರಗಾಲವೆಂದು ಘೋಷಣೆ ಮಾಡಲಾಗಿದೆ. ಹೀಗಾಗಿ, ಮನರೇಗಾ ಅಡಿಯಲ್ಲಿ ಹೆಚ್ಚುವರಿಯಾಗಿ 50 ಮಾನವ ದಿನಗಳ ಕೆಲಸ ಘೋಷಿಸಬೇಕು” ಎಂದು ಗ್ರಾಮೀಣ ಕೂಲಿ ಕಾರರ ಸಂಘದ ತಾಲೂಕು ಕಾರ್ಯದರ್ಶಿ ತೇಜೇಶ್ವರಿ ಒತ್ತಾಯಿಸಿದ್ದಾರೆ.

Advertisements

“ಇಡೀ ರಾಜ್ಯದಲ್ಲಿ ಮಳೆ ಇಲ್ಲದೆ ಬರೀ ಆವರಿಸಿ ಜನರು ಕಂಗಾಲಾಗಿದ್ದಾರೆ. ಜನರು ಜೀವನ ಮಾಡುವುದೇ ಕಷ್ಟಕರವಾಗಿದೆ. ಸರ್ಕಾರಗಳು ಕೂಡಲೇ ಹಣ ಬಿಡುಗಡೆ ಮಾಡಬೇಕು” ಎಂದು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಐನಳ್ಳಿ,ಕೋಗುಂಡೆ, ಪಂಜಯ್ಯನಹಟ್ಟಿಯ ಮತ್ತು ಇತರ ಗ್ರಾಮಗಳ ಗ್ರಾಮೀಣ ಕೂಲಿ ಕಾರ್ಮಿಕರು ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X