ಶಿವಮೊಗ್ಗ | ಅಕ್ರಮ ಕಟ್ಟಡ ಜಾಗ ಮಂಜೂರಿ ಹಕ್ಕುಪತ್ರ ನಕಲಿ; ಎಎಪಿ ಆರೋಪ

Date:

Advertisements

ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನಲ್ಲಿ ಇರುವ ಸರ್ಕಾರಿ ಜಾಗಗಳು, ಜಮೀನುಗಳು ಹಾಗೂ ಯಾರದ್ದೋ ಜಮೀನನ್ನು ಇನ್ನಾರಿಗೋ ಬರೆದುಕೊಡಲಾಗುತ್ತಿದೆ. ಹೊಸನಗರ ಕಂದಾಯ ಇಲಾಖೆಯ ಕೆಲವು ಸಿಬ್ಬಂದಿಗಳು ಅವ್ಯವಹಾರ ನಡೆಸುತ್ತಿದ್ದಾರೆ ಎಂದು ಎಎಪಿ ಆರೋಪಿಸಿದೆ.

ಶಿವಮೊಗ್ಗದಲ್ಲಿ ಪತ್ರಿಕಾಗೋಷ್ಠಿ ನಡೆಸಿ ಮಾತನಾಡಿದ ಎಎಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ನಜೀರ್ ಅಹಮದ್, “ಹೊಸನಗರ ತಾಲೂಕು ಕಚೇರಿಯಲ್ಲಿ ಅನಧಿಕೃತವಾಗಿ ಕೆಲವು ಬ್ರೋಕರ್‌ಗಳು ಸಾರ್ವಜನಿಕರಿಂದ ಹಣ ಪಡೆದು ಕೆಲಸ ಮಾಡಿಸಿಕೊಡುತ್ತಿದ್ದಾರೆ. ಈ ಬಗ್ಗೆ ತಾಲೂಕು ದಂಢಾಧಿಕಾರಿಗಳ ಗಮನಕ್ಕೆ ತರಲಾಗಿದೆ. ಆದರೆ, ಅವರು ಉಡಾಪೆಯ ಉತ್ತರ ನೀಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಹೊಸನಗರ ತಾಲೂಕಿನ ಕಸಬಾ ಹೋಬಳಿ ವರಕೋಡು ಗ್ರಾಮದ ಸರ್ವೆ ನಂಬರ್ 47ರಲ್ಲಿ 40*60 [2400 ಚದರ ಅಡಿ] ಅಳತೆಯ ಅಕ್ರಮ ಕಟ್ಟಡಕ್ಕೆ 15/11/2023ರಂದು ಮಂಜೂರಾತಿ ಹಕ್ಕುಪತ್ರ ನೀಡಲಾಗಿದೆ. ಆದರೆ, ಹಕ್ಕುಪತ್ರದಲ್ಲಿ 27/09/2002 ದಿನಾಂಕ ಹಾಕಲಾಗಿದೆ. ಇದಕ್ಕೆ ಸಂಬಂಧಿಸಿದ ಸರ್ವೆ ಇಲಾಖೆಯ ಜಿಪಿಎಸ್ ಸರ್ವೆ ಹಾಗೂ ಅರ್ಜಿಗಳ ಸೀರಿಯಲ್ ನಂಬರುಗಳು ಹಾಗೂ ಎಸ್‌ಬಿಐ ಚಲನ್ ಸಂಖ್ಯೆ ಕೂಡ ದೊರೆತಿವೆ” ಎಂದು ಹೇಳಿದ್ದಾರೆ.

Advertisements

“ಇಂತಹ ಪ್ರಕರಣಗಳು ಕಳೆದ 2 ವರ್ಷದಿಂದ ಬಂದಿವೆ. ಹಲವಾರು ಸಂತ್ರಸ್ತರು ನಮ್ಮ ಗಮನಕ್ಕೆ ತಂದಿದ್ದಾರೆ. ಆದರೆ, ಅಧಿಕೃತ ದಾಖಲಾತಿಗಳು ನಮಗೆ ಲಭ್ಯವಾಗಿರಲಿಲ್ಲ. ಈಗ ನಮಗೆ ದಾಖಲೆಗಳು ಲಭ್ಯವಾಗಿವೆ. ಆರ್.ಟಿ.ಐ ಮುಖೇನ ಮುಖ್ಯ ದಾಖಲೆಗಳನ್ನು ಪಡೆದು ಪರಿಶೀಲಿಸಿದ್ದೇವೆ. ನಕಲಿ ದಾಖಲೆಗಳು ಪತ್ತೆಯಾಗಿವೆ” ಎಂದು ತಿಳಿಸಿದ್ದಾರೆ.

“ನಕಲಿ ಖಾತೆಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ಸಲ್ಲಿಸಿದ್ದೇವೆ. ಅಕ್ರಮದ ವಿರುದ್ಧ ಕಂದಾಯ ಮಂತ್ರಿಗಳು ಹಾಗೂ ಜಿಲ್ಲಾಧಿಕಾರಿಗಳು ಕ್ರಮ ಕೈಗೊಳ್ಳಬೇಕು” ಎಂದು ಆಗ್ರಹಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿ ಶಿವಕುಮಾ‌ರ್ ಗೌಡ, ಸುರೇಶ್ ಕೌಟೇಕರ್, ಗಣೇಶ್ ಸೋಗೋಡು, ಹಸನಬ್ಬ, ಈಶ್ವರಪ್ಪ ಗೌಡ ಸೇರಿದಂತೆ ಹಲವರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

ಬೆಳ್ತಂಗಡಿ | ಸೌಜನ್ಯ ಹೋರಾಟಗಾರರ ಮೇಲೆ ನಿರಂತರ ಎಫ್‌ಐಆರ್: ಗಿರೀಶ್ ಮಟ್ಟಣ್ಣನವರ್ ಆಕ್ರೋಶ

ಗುರುವಾರ ಸೌಜನ್ಯಪರ ಹೋರಾಟಗಾರ ಮಹೇಶ್ ಶೆಟ್ಟಿ ತಿಮರೋಡಿ ಬಂಧನದ ವೇಳೆ ಪೊಲೀಸರ...

ಶಿವಮೊಗ್ಗ | ಅಡಿಕೆ ಬೆಳೆಗಾರರ ಸಮಸ್ಯೆ ಬಗ್ಗೆ ಕೇಂದ್ರ ಕೃಷಿ ಸಚಿವರೊಂದಿಗೆ ಸಭೆ

ಶಿವಮೊಗ್ಗ, ರಾಜ್ಯ ಅಡಿಕೆ ಬೆಳೆಗಾರರ ಸಮಸ್ಯೆಗಳ ಕುರಿತಂತೆ ಕೇಂದ್ರ ಕೃಷಿ...

Download Eedina App Android / iOS

X