ಲೋಕಸಭೆಗೆ ಜನರು ನಿಂತುಕೊಳ್ಳಿ ಎಂದರೆ ಯತೀಂದ್ರ ನಿಂತುಕೊಳ್ಳುತ್ತಾರೆ: ಸಿದ್ದರಾಮಯ್ಯ

Date:

Advertisements

“ಮೈಸೂರು ಲೋಕಸಭೆ ಚುನಾವಣೆಯಲ್ಲಿ ಪುತ್ರನನ್ನು ಗೆಲ್ಲಿಸಲು ಸಿದ್ದರಾಮಯ್ಯ ಅವರು ಪ್ರತಾಪ್ ಸಿಂಹ ವಿರುದ್ಧ ಷಡ್ಯಂತ ರೂಪಿಸಿದ್ದಾರೆ” ಎಂದು ಆರೋಪಿಸಿರುವ ರಾಜ್ಯಸಭಾ ಬಿಜೆಪಿ ಸದಸ್ಯ ಲೆಹರ್ ಸಿಂಗ್ ಸಿರೋಯಾ ಅವರಿಗೆ ಸಿದ್ದರಾಮಯ್ಯ ಹುಬ್ಬಳ್ಳಿಯಲ್ಲಿ ಪ್ರತಿಕ್ರಿಯಿಸಿದ್ದಾರೆ.

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿ, “ನಾನು ನನ್ನ ಮಗ ಯತೀಂದ್ರ ಅವರನ್ನು ಲೋಕಸಭೆ ಚುನಾವಣೆಗೆ ನಿಲ್ಲಿಸಲು ಹೋಗಲ್ಲ. ಆದರೆ, ಜನರು ನಿಂತುಕೊಳ್ಳಿ ಎಂದರೆ ಅವರೇ ನಿಂತುಕೊಳ್ಳುತ್ತಾರೆ. ಲೆಹರ್ ಸಿಂಗ್ ಸಿರೋಯಾ ಅವರು ಮೊದಲು ಸಂಸತ್‌ ನಲ್ಲಿ ಆದ ಭದ್ರತಾ ಲೋಪದ ಬಗ್ಗೆ ತಲೆಕೆಡಿಸಿಕೊಳ್ಳಲಿ” ಎಂದು ತಿರುಗೇಟು ನೀಡಿದರು.

“ಮಹಿಳೆಯನ್ನು ಬೆತ್ತಲೆಗೊಳಿಸಿರುವ ಪ್ರಕರಣದ ಬಗ್ಗೆ ಕಾನೂನು ರೀತಿಯಲ್ಲಿ ಏನೇನು ಕ್ರಮ ತೆಗೆದುಕೊಳ್ಳಬೇಕು ಅದನ್ನೆಲ್ಲ ತೆಗೆದುಕೊಂಡಿದ್ದೇವೆ. ನಮ್ಮ ಗೃಹ ಸಚಿವರು ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಹೋಗಿ ಭೇಟಿ ನೀಡಿದ್ದಾರೆ. ಪರಿಹಾರವೂ ಕೊಟ್ಟಿದ್ದೇವೆ” ಎಂದು ತಿಳಿಸಿದರು.

Advertisements

“ಜೆ ಪಿ ನಡ್ಡಾ ಮತ್ತು ಬಿಜೆಪಿಯವರು ಮಹಿಳಾ ವಿವಸ್ತ್ರ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳಲು ಹೊರಟಿದ್ದಾರೆ. ಅವರ ಕಾಲದಲ್ಲಿ ಎನ್‌ಸಿಬಿ (ನ್ಯಾಷನಲ್‌ ಕ್ರೈಮ್‌ ಬ್ಯೂರೊ ತೆಗೆದುನೋಡಿ ಎಷ್ಟು ಮಹಿಳೆಯರ ಮೇಲೆ ದೌರ್ಜನ್ಯ ಆಗಿದೆ ಎಂಬುದು ಗೊತ್ತಾಗುತ್ತದೆ” ಎಂದು ಹರಿಹಾಯ್ದರು.

ಉತ್ತರ ಪ್ರದೇಶಶ ಬಿಜೆಪಿ ಶಾಸಕನಿಗೆ ಜೈಲು ಆಗಿದೆ. ಬಿಜೆಪಿ ಎಂಎಲ್‌ಎ 9 ವರ್ಷದ ಹುಡುಗಿ ಮೇಲೆ ಅತ್ಯಾಚಾರ ಮಾಡಿದ್ದ. ಇದಕ್ಕೆ ನಡ್ಡಾ ಏನು ಹೇಳುತ್ತಾರೆ? ಪ್ರಲ್ಹಾದ್‌ ಜೋಶಿ ಏನು ಹೇಳುತ್ತಾರೆ? ಮಹಿಳೆಯ ವಿವಸ್ತ್ರ ಪ್ರಕರಣವನ್ನು ನಾನು ತೀವ್ರವಾಗಿ ಖಂಡಿಸುತ್ತೇನೆ” ಎಂದರು.

“ಜಾತಿ ಗಣತಿ ವರದಿಯೇ ಬಂದಿಲ್ಲ. ಎಲ್ಲರೂ ಊಹೆ ಮೇಲೆ ಮಾತನಾಡುತ್ತಿದ್ದಾರೆ. ಮುಂದೆ ನೋಡೋಣ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X