ಕಾಂಗ್ರೆಸ್, ಎನ್‌ಸಿಪಿ ಅಹಂ ಬದಿಗಿಡಲಿ: ಪ್ರಕಾಶ್ ಅಂಬೇಡ್ಕರ್‌ ನೇತೃತ್ವದ ವಿಬಿಎ ಆಕ್ರೋಶ

Date:

Advertisements

“ಕಾಂಗ್ರೆಸ್ ಮತ್ತು ಶರದ್ ಪವಾರ್ ನೇತೃತ್ವದ ಮಹಾ ವಿಕಾಸ್ ಅಘಾಡಿ (ಎಂವಿಎ) ಮೈತ್ರಿ ಕೂಟವು ಲೋಕಸಭೆ ಮತ್ತು ವಿಧಾನಸಭಾ ಚುನಾವಣೆಗಳು ಸಮೀಪಿಸುತ್ತಿರುವಾಗಲೂ ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಅಘಾಡಿ (ವಿಬಿಎ)ಯನ್ನು ನಿರ್ಲಕ್ಷಿಸಿದೆ” ಎಂದು ವಿಬಿಎ ಆಕ್ರೋಶ ಹೊರಹಾಕಿದೆ.

“ಕಾಂಗ್ರೆಸ್ ಮತ್ತು ಎನ್‌ಸಿಪಿ ಪಕ್ಷಗಳು ಮೈತ್ರಿ ಮಾಡಿಕೊಳ್ಳುವ ಮಹತ್ವವನ್ನು ಇತಿಹಾಸದಿಂದ ಕಲಿಯಬೇಕು. ವಿವಿಧ ದೇಶಗಳ ಮೈತ್ರಿಯಿಂದಾಗಿ ಹಿಟ್ಲರ್‌ ಸೋತನು. ಮಹಾ ವಿಕಾಸ್ ಅಘಾಡಿಯು ಇನ್ನೂ ಏಕೆ ವಿಬಿಎಯನ್ನು ಮೈತ್ರಿಗೆ ಆಹ್ವಾನಿಸಿಲ್ಲ ಎಂಬುದು ಮಹಾರಾಷ್ಟ್ರದ ಜನರಿಗೆ ದೊಡ್ಡ ನಿಗೂಢವಾಗಿಯೇ ಉಳಿದಿದೆ” ಎಂದು ವಿಬಿಎ ಆಶ್ಚರ್ಯ ವ್ಯಕ್ತಪಡಿಸಿದೆ.

“ವಿಬಿಎಗೆ ಇರುವ ಜನಪ್ರಿಯತೆ ಕುರಿತು ಎಂವಿಎ ಕುರುಡಾಗಿದೆ, ನಮ್ಮ ಶಕ್ತಿಯನ್ನು ಅವರು ನೋಡಿಲ್ಲ ಅಥವಾ ಅವರ ಅಹಂ ನಮ್ಮನ್ನು ಆಹ್ವಾನಿಸಲು ತಡೆಯಾಗಿ ನಿಂತಿದೆ. ಇಲ್ಲವಾಗಿದ್ದರೆ ತಾರತಮ್ಯ ಮತ್ತು ಅಂಚಿನಲ್ಲಿರುವ ಜನರನ್ನು ಪ್ರತಿನಿಧಿಸುವ ಪಕ್ಷದ ಸಹಾಯವನ್ನು ಪಡೆಯಲು ಈ ಎರಡೂ ಪಕ್ಷಗಳು ಹೆಮ್ಮೆಪಡುತ್ತಿದ್ದವು” ಎಂದಿದೆ.

Advertisements

“ನಮ್ಮ ಇತ್ತೀಚಿನ ಸಮಾರಂಭದಲ್ಲಿ ಸೇರಿದ್ದ ಜನರನ್ನು ಇಡೀ ಮಹಾರಾಷ್ಟ್ರವೇ ನೋಡಿದೆ. ಕಾಂಗ್ರೆಸ್ ಮತ್ತು ಎನ್‌ಸಿಪಿ ನಿಜವಾಗಿಯೂ ಬಿಜೆಪಿಯನ್ನು ಸೋಲಿಸಲು ಬಯಸಿದರೆ, ಅವರು ತಮ್ಮ ಅಹಂಕಾರವನ್ನು ಬದಿಗಿಟ್ಟು ಅಧಿಕೃತವಾಗಿ ವಿಬಿಎಯನ್ನು ಎಂವಿಎಗೆ ಆಹ್ವಾನಿಸಬೇಕು” ಎಂದು ತಿಳಿಸಿದೆ.

“ಒಂದು ಪಕ್ಷದ ಅಹಂ ಮತ್ತು ಮೈತ್ರಿಯಲ್ಲಿನ ವಿಫಲತೆ ಏನು ಮಾಡಬಹುದೆಂದು ನಾವೆಲ್ಲರೂ ನೋಡಿದ್ದೇವೆ; ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢ ಚುನಾವಣೆಗಳು ಇತ್ತೀಚಿನ ಉದಾಹರಣೆಗಳಾಗಿವೆ” ಎಂದು ಪಕ್ಷ ಎಚ್ಚರಿಸಿದೆ.

ಈ ವರ್ಷದ ಆರಂಭದಲ್ಲಿ ಪ್ರಕಾಶ್ ಅಂಬೇಡ್ಕರ್ ಮತ್ತು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಅವರು ಸರಣಿ ಸಭೆಗಳನ್ನು ನಡೆಸಿ ಮೈತ್ರಿಯನ್ನು ಘೋಷಿಸಿದ್ದರು. ಆದಾಗ್ಯೂ, ಮಹಾ ವಿಕಾಸ್ ಅಘಾಡಿಯಲ್ಲಿ ವಿಬಿಎ ಸೇರಿಕೊಳ್ಳಲು ಸಾಧ್ಯವಾಗಿಲ್ಲ.

ಇದನ್ನೂ ಓದಿರಿ: ಡಾ.ಬಿ.ಆರ್‌.ಅಂಬೇಡ್ಕರ್‌ ಅವರ ಕುರಿತ ’ಸಾಕ್ಷ್ಯಚಿತ್ರ’ ಪ್ರದರ್ಶನ ಇಂದು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X