ಗದಗ | ಸ್ಮಶಾನ ದಾರಿ ಸಮಸ್ಯೆ; ಗ್ರಾಮ ಪಂಚಾಯತಿ ಎದುರು ಶವವಿಟ್ಟು ಆಕ್ರೋಶ

Date:

Advertisements

ಸ್ಮಶಾನಕ್ಕೆ ತೆರಳುವ ದಾರಿಯ ಸಮಸ್ಯೆ ಬಗೆಹರಿಯದ ಕಾರಣ ಗ್ರಾಮಸ್ಥರು ಗ್ರಾಮ ಪಂಚಾಯಿತಿ ಮುಂದೆ ಶವವಿಟ್ಟು ಆಕ್ರೋಶ ವ್ಯಕ್ತಪಡಿಸಿದ ಘಟನೆ ಗದಗ ಜಿಲ್ಲೆಯ ರೋಣ ತಾಲೂಕಿನ ಚಿಕ್ಕಮಣ್ಣೂರು ಗ್ರಾಮದಲ್ಲಿ ನಡೆದಿದೆ.

ಚಿಕ್ಕಮಣ್ಣೂರು ಗ್ರಾಮದ ಯಲ್ಲಮ್ಮ ತಳವಾರ ಎಂಬ ಮಹಿಳೆ ಭಾನುವಾರ ಮೃತಪಟ್ಟಿದ್ದು, ಅಂತ್ಯಸಂಸ್ಕಾರಕ್ಕೆ ತೆರಳುವ ವೇಳೆ ಗ್ರಾಮದ ಜಮೀನಿನ ಮಾಲೀಕರೊಬ್ಬರು ಬೆಳೆ ಹಾಳಾಗುವುದರಿಂದ ಸ್ಮಶಾನಕ್ಕೆ ತೆರಳಲು ಅವಕಾಶ ನೀಡಲಿಲ್ಲ. ಇದರಿಂದ ಆಕ್ರೋಶಗೊಂಡ ಗ್ರಾಮಸ್ಥರು, ಕುಟುಂಬಸ್ಥರು ಗ್ರಾಮ ಪಂಚಾಯತ್‌ ಕಚೇರಿ ಮುಂದೆ ಶವ ತೆಗೆದುಕೊಂಡು ಹೋಗಿ ಪ್ರತಿಭಟನೆ ನಡೆಸಿದರು.

ಸ್ಮಶಾನ ಭೂಮಿಗೆ ತೆರಳಲು ದಾರಿ ಸಮಸ್ಯೆಯಿದ್ದು, ಸರಿಪಡಿಸುವಂತೆ ತಹಶೀಲ್ದಾರ್‌ ಗಮನಕ್ಕೆ ತರಲಾಗಿತ್ತು. ಆದರೆ ಸಮಸ್ಯೆ ಬಗೆಹರಿಸುವ ಬಗ್ಗೆ ಯಾವುದೇ ಪ್ರಯತ್ನ ಮಾಡಿಲಿಲ್ಲ ಎಂದು ಸ್ಥಳಕ್ಕೆ ಭೇಟಿ ನೀಡಿದ ತಹಶೀಲ್ದಾರ್‌ ಕೆ.ನಾಗರಾಜ, ಸಿಪಿಐ ಸಿದ್ದಪ್ಪ ಬೀಳಗಿ ಅವರೊಂದಿಗೆ ಗ್ರಾಮಸ್ಥರು ವಾಗ್ವಾದ ನಡೆಸಿ ಪ್ರತಿಭಟನೆ ಮುಂದುವರೆಸಿದರು.

Advertisements

ಸ್ಮಶಾನ ಜಾಗದ ಸಮಸ್ಯೆ ಹಿಂದಿನ ತಹಶೀಲ್ದಾರ್‌ ಗಮನಕ್ಕೆ ಬಂದಿದ್ದು, ನನಗೆ ಗೊತ್ತಿಲ್ಲ. ಸ್ಮಶಾನಕ್ಕೆ ದಾರಿ ಇರುವ ಬಗ್ಗೆ ಯಾವುದೇ ದಾಖಲೆ ಲಭ್ಯವಿಲ್ಲ. ಸಮೀಕ್ಷೆ ನಡೆಸಿ ರಸ್ತೆಗೆ ಅಗತ್ಯವಾದ ಜಾಗ ಖರೀದಿಸಲು ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು” ಎಂದು ರೋಣ ತಹಶಿಲ್ದಾರ್ ಕೆ.ನಾಗರಾಜ ಭರವಸೆ ನೀಡಿದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X