ಎರಡು ವರ್ಷದೊಳಗೆ ಎತ್ತಿನಹೊಳೆ ಯೋಜನೆ ಪೂರ್ಣ: ಗೃಹ ಸಚಿವ ಡಾ. ಜಿ ಪರಮೇಶ್ವರ್

Date:

Advertisements

ಎತ್ತಿನ ಹೊಳೆ ಯೋಜನೆಗೆ ಕಳೆದ ನಾಲ್ಕು ವರ್ಷದ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನ ನೀಡಿಲ್ಲ. ಹೀಗಾಗಿ ಸ್ಥಗಿತಗೊಂಡಿದ್ದ ಯೋಜನೆಯ ಕೆಲಸವನ್ನು ನಮ್ಮ ಸರ್ಕಾರ ಆರಂಭಿಸಿದೆ ಎಂದು ಗೃಹ ಸಚಿವ ಡಾ.‌ಜಿ.ಪರಮೇಶ್ವರ್ ಹೇಳಿದರು.

ಸೋಮವಾರ ಬೆಳಗ್ಗೆ ಬೆಂಗಳೂರಿನ ಸದಾಶಿವನಗರದ ನಿವಾಸದಲ್ಲಿ ಎತ್ತಿನ ಹೊಳೆ ಯೋಜನೆ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಅವರು ಪ್ರತಿಕ್ರಿಯಿಸಿದರು.

“ಎತ್ತಿನ ಹೊಳೆ ಯೋಜನೆಯು ಪ್ರಾರಂಭದಲ್ಲಿ ಅಂದಾಜು ವೆಚ್ಚ 13,500 ಸಾವಿರ ಕೋಟಿ ರೂ. ಮಾಡಲಾಗಿತ್ತು. ಈ ಹಿಂದಿನ ಅವಧಿಯಲ್ಲಿ ಬಿಜೆಪಿ ಸರ್ಕಾರವು ಅನುದಾನವನ್ನು ನೀಡಿಲ್ಲ. ಇದೇ ಕಾರಣದಿಂದ ಕಾಮಗಾರಿ ಸ್ಥಗಿತಗೊಂಡಿತ್ತು. ಈಗ ನಮ್ಮ ಸರ್ಕಾರವು ಅನುದಾನ ಬಿಡುಗಡೆ ಮಾಡಲಾಗಿದೆ. ಯೋಜನೆಯ ಅಂದಾಜು ವೆಚ್ಚ ವರ್ಷದಿಂದ ವರ್ಷಕ್ಕೆ ಹೆಚ್ಚಾಗುತ್ತಿದೆ. ಪ್ರಸ್ತುತ 22 ಸಾವಿರ ಕೋಟಿ ರೂ. ಆಗುತ್ತಿದೆ. ಎರಡು ವರ್ಷದೊಳಗೆ ಪೂರ್ಣಗೊಳಿಸಲಾಗುವುದು. ತುಮಕೂರು, ಕೋಲಾರ ಮತ್ತು ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಸಲಾಗುವುದು” ಎಂದು ತಿಳಿಸಿದರು.

Advertisements

“ವಾಟರ್ ಸ್ಟೋರೆಜ್‌ಗಾಗಿ ಕೊರಟಗೆರೆ ರೈತರು ನೀಡಿರುವ ಭೂಮಿಗೆ ಎಕರೆಗೆ 8 ಲಕ್ಷ ರೂ. ಹಾಗೂ ದೊಡ್ಡಬಳ್ಳಾಪುರದಲ್ಲಿ ಎಕರೆ ಭೂಮಿಗೆ 32 ಲಕ್ಷ ರೂ. ಪರಿಹಾರ ನಿಗದಿಪಡಿಸಲಾಗಿದೆ. ಎಲ್ಲ ರೈತರಿಗೂ ಒಂದೇ ರೀತಿಯ ಸಮಾನ ಪರಿಹಾರ ಕಲ್ಪಿಸುವಂತೆ ಒತ್ತಾಯಿಸಲಾಗಿದೆ” ಎಂದರು.

ಎನ್‌ಐಎ ದಾಳಿ

“ಎನ್‌ಐಎ ಕಚೇರಿ ಬೆಂಗಳೂರಿನಲ್ಲಿ ಆಗಿದೆ. ಅಕ್ರಮ ಚಟುವಟಿಕೆಗಳ‌ ಬಗ್ಗೆ ಮಾಹಿತಿ ಆಧರಿಸಿ ದಾಳಿ ಮಾಡುತ್ತಿರುತ್ತಾರೆ. ಈ ಬಗ್ಗೆ ಎನ್‌ಐಎ ತಂಡವು ಕೆಲವು ಸಲ ರಾಜ್ಯ ಪೊಲೀಸರೊಂದಿಗೆ ಮಾಹಿತಿ ಹಂಚಿಕೊಳ್ಳುತ್ತಾರೆ. ಅವರ ಕರ್ತವ್ಯ ಅವರು ಮಾಡಲಿದ್ದಾರೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X