ಮಹಿಳೆ ವಿವಸ್ತ್ರ-ಹಲ್ಲೆ ಪ್ರಕರಣ: ಮೂಕರಂತೆ ನಿಂತಿದ್ದ ಜನರಿಗೆ ದಂಡ ವಿಧಿಸಲು ಹೈಕೋರ್ಟ್ ತಾಕೀತು

Date:

Advertisements

ಬೆಳಗಾವಿಯ ಹೊಸ ವಂಟಮುರಿ ಗ್ರಾಮದಲ್ಲಿ ಮಹಿಳೆಯನ್ನು ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದ ಪ್ರಕರಣವನ್ನು ಹೈಕೋರ್ಟ್‌ ತೀವ್ರವಾಗಿ ಖಂಡಿಸಿದೆ. ಇದೇ ಪ್ರಕರಣದ ವಿಚಾರಣೆ ವೇಳೆ ಈ ಹಿಂದೆ, ‘ಇದು ದುಶ್ಯಾಸನರ ರಾಜ್ಯ’ ಎಂದು ಕಿಡಿಕಾರಿದ್ದ ಹೈಕೋರ್ಟ್‌, ಈಗ “ಮಹಿಳೆ ಮೇಲೆ ದೌರ್ಜನ್ಯ ನಡೆಯುತ್ತಿದ್ದಾಗ ಆಕೆಯ ನೆರವಿಗೆ ಧಾವಿಸದೆ, ಮೂಕಪ್ರೇಕ್ಷಕರಂತೆ ನಿಂತಿದ್ದ ಗ್ರಾಮದ ಜನರಿಂದ ದಂಡ ಸಂಗ್ರಹಿಸಬೇಕು. ಆ ಮೊತ್ತವನ್ನು ಸಂತ್ರಸ್ತೆಗೆ ನೀಡಬೇಕು” ಎಂದು ತಾಕೀತು ಮಾಡಿದೆ.

ಗ್ರಾಮದ ಯುವಕ-ಯುವತಿ ಪರಸ್ಪರ ಪ್ರೀತಿಸಿದ್ದರು. ಡಿಸೆಂಬರ್ 10ರ ರಾತ್ರಿ ಊರು ಬಿಟ್ಟು ಹೋಗಿದ್ದರು. ಇದರಿಂದ ವಿಚಲಿತಗೊಂಡಿದ್ದ ಯುವತಿಯ ಕುಟುಂಬಸ್ಥರು ಅಂದು ರಾತ್ರಿ ಯುವಕನ ಮನೆಗೆ ನುಗ್ಗಿ, ಆತನ ತಾಯಿಯನ್ನು ಎಳೆದೊಯ್ದು, ವಿವಸ್ತ್ರಗೊಳಿಸಿ ಹಲ್ಲೆ ಮಾಡಿದ್ದರು.

ಘಟನೆ ಸಂಬಂಧ ಹೈಕೋರ್ಟ್‌ ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದೆ. ಹೈಕೋರ್ಟ್ ಮುಖ್ಯ ನ್ಯಾಯಾಧೀಶ ಪ್ರಸನ್ನ ಬಿ ವರಾಳೆ ಮತ್ತು ನ್ಯಾ. ಕೃಷ್ಣ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ ವಿಚಾರಣೆ ನಡೆಸುತ್ತಿದೆ. ಘಟನೆಯ ವೇಳೆ ಮಹಿಳೆಯ ನೆರವಿಗೆ ಬಾರದ ಜನರ ಕುರಿತು ಅಸಮಾಧಾನ ವ್ಯಕ್ತಪಡಿಸಿದೆ.

Advertisements

“ಘಟನೆ ವೇಳೆ ಮೂಕರಂತೆ ನಿಂತಿದ್ದ ವರ್ತನೆಗೆ ಬ್ರಿಟಿಷರು ಪುಂಡಕಂದಾಯ ಎಂಬ ಹೆಸರಿನಲ್ಲಿ ತೆರಿಗೆ ವಿಧಿಸುತ್ತಿದ್ದರು. ವಿಲಿಯಮ್ ಬೆಂಟಿಂಕ್‌ ವೈಸ್‌ರಾಯ್ ಆಗಿದ್ದಾಗ ಅಂತಹ ತೆರಿಗೆ ಇತ್ತು. ಈ ಘಟನೆಯಲ್ಲಿ ಮೂಕರಂತೆ ನೋಡುತ್ತ ನಿಂತಿದ್ದ ಗ್ರಾಮದ ಜನರಿಂದ ದಂಡ ಸಂಗ್ರಹಿಸಿ, ಸಂತ್ರಸ್ತೆಗೆ ನೀಡಬೇಕು” ಎಂದು ಹೈಕೋರ್ಟ್‌ ಹೇಳಿದೆ.

ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ಹಸ್ತಾಂತರಿಸಿ ಶನಿವಾರ ಆದೇಶ ಹೊರಡಿಸಿದೆ. ಸಿಐಡಿ ತಂಡ ಸೋಮವಾರ ಬೆಳಗಾವಿಗೆ ತೆರಳಿದ್ದು, ತನಿಖೆ ಆರಂಭಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಮಹಾರಾಷ್ಟ್ರದಲ್ಲಿ ಮಳೆ – ಬೆಳಗಾವಿ ಜಿಲ್ಲೆಯ ನದಿ ತೀರದ ಗ್ರಾಮಗಳಲ್ಲಿ ಪ್ರವಾಹದ ಆತಂಕ

ಮಹಾರಾಷ್ಟ್ರದ ಕೊಂಕಣ ಭಾಗದಲ್ಲಿ ಭಾರೀ ಮಳೆ ಸುರಿಯುತ್ತಿರುವ ಹಿನ್ನೆಲೆಯಲ್ಲಿ ಅಲ್ಲಿ ಇರುವ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X