ಚಳಿಗಾಲದ ಅಧಿವೇಶನದ ಉಳಿದ ಅವಧಿವರೆಗೆ ಪ್ರತಿಪಕ್ಷದ 47 ಸಂಸದರ ಅಮಾನತು

Date:

Advertisements

ಸದನದಲ್ಲಿ ಗದ್ದಲ ಉಂಟು ಮಾಡಿದ್ದಕ್ಕಾಗಿ ಕಾಂಗ್ರೆಸ್ ಸೇರಿ ವಿವಿಧ ಪ್ರತಿ ಪಕ್ಷಗಳಿಂದ ಕಳೆದ ಎರಡು ಅಧಿವೇಶನದ ದಿನಗಳಿಂದ ಇಲ್ಲಿಯವರೆಗೆ 47 ಸಂಸದರನ್ನು ಅಮಾನತುಗೊಳಿಸಲಾಗಿದೆ.

ಇಂದು(ಡಿ.18) ಅಮಾನತುಗೊಂಡಿರುವ ಸಂಸದರಲ್ಲಿ ಕಾಂಗ್ರೆಸ್ ಪಕ್ಷದ ಅಧೀರ್ ರಂಜನ್ ಚೌಧರಿ, ಡಿಎಂಕೆ ಸಂಸದರಾದ ಟಿ ಆರ್ ಬಾಲು ಮತ್ತು ದಯಾನಿಧಿ ಮಾರನ್ ಮತ್ತು ಟಿಎಂಸಿಯ ಸೌಗತ ರಾಯ್ ಸೇರಿದ್ದಾರೆ.

31 ಮಂದಿಯನ್ನು ಚಳಿಗಾಲದ ಅಧಿವೇಶನದ ಉಳಿದ ಅವಧಿಗೆ ಅಮಾನತುಗೊಳಿಸಿದ್ದರೆ,  ಘೋಷಣೆಗಳನ್ನು ಕೂಗಲು ಸ್ಪೀಕರ್ ವೇದಿಕೆಯ ಮೇಲೆ ಹತ್ತಿದ ಕಾರಣಕ್ಕಾಗಿ ವಿಶೇಷಾಧಿಕಾರ ಸಮಿತಿಯ ಕೆ ಜಯಕುಮಾರ್, ವಿಜಯ್ ವಸಂತ್ ಮತ್ತು ಅಬ್ದುಲ್ ಖಲೀಕ್ ಅವರನ್ನು ಅಮಾನತುಗೊಳಿಸಲಾಗಿದೆ.

Advertisements

ಈ ಸುದ್ದಿ ಓದಿದ್ದೀರಾ? ‘ದೇಶಕ್ಕಾಗಿ ದೇಣಿಗೆ’ ಅಭಿಯಾನಕ್ಕೆ ಚಾಲನೆ ನೀಡಿದ ಮಲ್ಲಿಕಾರ್ಜುನ ಖರ್ಗೆ

ಈ ಸಂಸದರ ಅಮಾನತು ಪ್ರಸ್ತಾವನೆಯನ್ನು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸದನದಲ್ಲಿ ಮಂಡಿಸಿದರು. ನಂತರ ಅದನ್ನು ಧ್ವನಿ ಮತದ ಮೂಲಕ ಅಂಗೀಕರಿಸಲಾಯಿತು.

ಡಿಸೆಂಬರ್ 13 ರಂದು ಸಂಸತ್ತಿನ ಭದ್ರತಾ ಉಲ್ಲಂಘನೆಯ ವಿಷಯದ ಬಗ್ಗೆ ಪ್ರತಿಪಕ್ಷಗಳ ಸದಸ್ಯರು ನಿರಂತರ ಪ್ರತಿಭಟನೆ ನಡೆಸಿದ ನಂತರ ಅಮಾನತು ಪ್ರಕ್ರಿಯೆ ಮುಂದುವರೆದಿದೆ. ವಿರೋಧ ಪಕ್ಷದ ಸಂಸದರ ಪ್ರತಿಭಟನೆಯ ದೃಷ್ಟಿಯಿಂದ ಲೋಕಸಭೆಯನ್ನು ನಾಳೆಗೆ ಮುಂದೂಡಲಾಗಿದೆ.

ಡಿಸೆಂಬರ್ 14 ರಂದು, ಸಂಸತ್ತಿನ ಭದ್ರತಾ ಉಲ್ಲಂಘನೆಯ ಒಂದು ದಿನದ ನಂತರ, 13 ಲೋಕಸಭಾ ಸಂಸದರು ಮತ್ತು ಒಬ್ಬ ರಾಜ್ಯಸಭಾ ಸಂಸದರನ್ನು “ಅಶಿಸ್ತಿನ ನಡವಳಿಕೆ” ಕಾರಣಕ್ಕಾಗಿ ಅಮಾನತುಗೊಳಿಸಲಾಗಿದೆ.

ಲೋಕಸಭೆಯಿಂದ ಅಮಾನತುಗೊಂಡಿರುವ ಸಂಸದರಲ್ಲಿ ಮಾಣಿಕಂ ಟ್ಯಾಗೋರ್, ಕನಿಮೋಳಿ, ಪಿಆರ್ ನಟರಾಜನ್, ವಿಕೆ ಶ್ರೀಕಂದನ್, ಬೆನ್ನಿ ಬಹನನ್, ಕೆ ಸುಬ್ರಮಣ್ಯಂ, ಎಸ್ ವೆಂಕಟೇಶನ್ ಮತ್ತು ಮೊಹಮ್ಮದ್ ಜಾವೇದ್ ಸೇರಿದ್ದಾರೆ. ತೃಣಮೂಲ ಕಾಂಗ್ರೆಸ್‌ನ ಡೆರೆಕ್ ಒ ಬ್ರಿಯಾನ್ ರಾಜ್ಯಸಭೆಯಿಂದ ಅಮಾನತುಗೊಂಡ ಏಕೈಕ ಸಂಸದ.

 

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕ್ರಿಮಿನಲ್ ಪ್ರಕರಣಗಳಲ್ಲಿ ಪ್ರಧಾನಿ, ಸಿಎಂ ಪದಚ್ಯುತಿಗೆ ಅನುವು ಮಾಡಿಕೊಡುವ ಮಸೂದೆ ಸಂಸತ್ತಿನಲ್ಲಿ ಮಂಡನೆ

ಗಂಭೀರ ಕ್ರಿಮಿನಲ್ ಪ್ರಕರಣಗಳಲ್ಲಿ ಬಂಧಿಸಲ್ಪಟ್ಟ ಅಥವಾ ಬಂಧನದಲ್ಲಿರುವ ಚುನಾಯಿತ ಪ್ರತಿನಿಧಿಗಳನ್ನು ಅಧಿಕಾರದಿಂದ...

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X