ಹಾಸನ | ಬೆಲೆ ಬಾಳುವ ಮರಗಳ ಮಾರಣಹೋಮ; ಸ್ಥಳಕ್ಕೆ ತಹಶೀಲ್ದಾರ್‌ ಭೇಟಿ – ಪರಿಶೀಲನೆ

Date:

Advertisements

ಕೋಟ್ಯಂತರ ರೂ. ಮೌಲ್ಯದ ಮರಗಳನ್ನು ಮಾರಣಹೋಮ ಮಾಡಿರುವ ಘಟನೆ ಹಾಸನ ಜಿಲ್ಲೆಯ ಬೇಲೂರು ತಾಲೂಕಿನ ನಂದಗೋಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ಸ್ಥಳಕ್ಕೆ ಬೇಲೂರು ತಹಶೀಲ್ದಾರ್ ಮಮತಾ ಅವರು ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಮರಗಳನ್ನು ಕತ್ತರಿಸಿರುವ ಆರೋಪಿಗಳ ವಿರುದ್ಧ ಕ್ರಮಕ್ಕೆ ಮುಂದಾಗಿದ್ದಾರೆ.

ಗ್ರಾಮಕ್ಕೆ ರೆವೆನ್ಯೂ ಇನ್‌ಸ್ಪೆಕ್ಟರ್‌ ಮತ್ತು ಗ್ರಾಮ ಲೆಕ್ಕಾಧಿಕಾರಿ ಭೇಟಿ ನೀಡಿದ್ದಾಗ ಮರ ಕಡಿದಿರುವ ಪ್ರಕರಣ ಬೆಳಕಿಗೆ ಬಂದಿದೆ. ಅವರು ತಹಶೀಲ್ದಾರ್‌ಗೆ ಮಾಹಿತಿ ನೀಡಿದ್ದು, ತಹಶೀಲ್ದಾರ್‌ ಮಮತಾ ಸ್ಥಳಕ್ಎಕ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಗ್ರಾಮದ ಸರ್ವೆ ನಂ.16ರ ಸರ್ಕಾರಿ ಭೂಮಿಯಲ್ಲಿ ಬೆಳೆದಿದ್ದ ಸುಮಾರು 300ಕ್ಕೂ ಹೆಚ್ಚು ಮರಗಳನ್ನು ಕತ್ತರಿಸಲಾಗಿದೆ. ಅವುಗಳಲ್ಲಿ ಬೆಲೆ ಬಾಳುವ ಸಾಗವಾನಿ, ಹೊನ್ನೆ, ಬೀಟೆ ಮರಗಳೂ ಕೂಡ ಸೇರಿವೆ ಎಂದು ತಿಳಿದುಬಂದಿದೆ.

Advertisements

ಮರಗಳು 1

ಸರ್ಕಾರಿ ಭೂಮಿಯಲ್ಲಿದ್ದ ಬೆಲೆ ಬಾಳುವ ಮರಗಳನ್ನು ಕಡಿದು ಹಾಕಿದ್ದರೂ, ಅರಣ್ಯ ಅಧಿಕಾರಿಗಳು ಮಾತ್ರ ಯಾವುದೇ ಕ್ರಮ ಕೈಗೊಂಡಿಲ್ಲ ಎಂದು ಆರೋಪಿಸಲಾಗಿದೆ.

“ಮರಗಳ್ಳರು ದಿನನಿತ್ಯ ಮರಗಳನ್ನು ಕಡಿದು, ಹೊತ್ತೊಯ್ದಿದ್ದಾರೆ. ಆದರೂ, ಅಧಿಕಾರಿಗಳು ಕ್ರಮ ಕೈಗೊಂಡಿಲ್ಲ. ಕೆಲವ ಪ್ರಭಾವಿಗಳು ಕೂಡ ಮರಗಳ್ಳತನ ಮಾಡಿದ್ದು, ಅವರೊಂದಿಗೆ ಅಧಿಕಾರಿಗಳು ಶಾಮೀಲಾಗಿದ್ದಾರೆ. ತಪ್ಪಿತಸ್ಥ ಅಧಿಕಾರಿಗಳ ವಿರುದ್ಧವೂ ಕ್ರಮ ಕೈಗೊಳ್ಳಬೇಕು” ಎಂದು ಸಾರ್ವಜನಿಕರು ತಹಶೀಲ್ದಾರ್‌ ಅವರನ್ನು ಒತ್ತಾಯಿಸಿದ್ದಾರೆ.

 

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಮೈಸೂರು | ಖಾಸಗಿ ಶಾಲೆಗಳಿಗೆ ಸೆಡ್ಡು ಹೊಡೆದ ಅತ್ತಿಗೋಡು ಸರ್ಕಾರಿ ಪ್ರೌಢಶಾಲೆ

ಕರ್ನಾಟಕದಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಕಡಿಮೆಯಾಗುತ್ತಿದೆ. ಸಾಕಷ್ಟು ಸವಾಲುಗಳನ್ನು ಸಹ ಎದುರಿಸುತ್ತಿದೆ....

ಗದಗ | ಹಾಸ್ಟೆಲ್‌ ವಿದ್ಯಾರ್ಥಿನಿ ಕೊಲೆ ಪ್ರಕರಣ; ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮಕ್ಕೆ ಎಸ್‌ಎಫ್‌ಐ ಆಗ್ರಹ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಕೋವೆರ ಹಟ್ಟಿಯ ವರ್ಷಿತಾ ಎಂಬ ಪದವಿ...

Download Eedina App Android / iOS

X