ರಾಯಚೂರು | ಜಾಗತಿಕ ಮಟ್ಟದಲ್ಲಿಯೇ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟದ ಕೃಷಿ ಶಿಕ್ಷಣ ನೀಡುತ್ತಿವೆ; ಕುಲಪತಿ ಡಾ. ಆರ್.ಸಿ.ಜಗದೀಶ್

Date:

Advertisements

ಜಾಗತಿಕ ಮಟ್ಟದಲ್ಲಿಯೇ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟದ ಕೃಷಿ ಶಿಕ್ಷಣ ನೀಡುತ್ತಿವೆ. ದೊರೆಯುತ್ತಿರುವ ವಿಫುಲ ಅವಕಾಶಗಳನ್ನು ಕೃಷಿ ವಿದ್ಯಾರ್ಥಿಗಳು ಸದ್ಬಳಕೆ ಮಾಡಿಕೊಳ್ಳಬೇಕು ಎಂದು ಶಿವಮೊಗ್ಗ ಕೃಷಿ ವಿಶ್ವವಿದ್ಯಾಲಯ ಕುಲಪತಿ ಡಾ. ಆರ್.ಸಿ.ಜಗದೀಶ್ ಹೇಳಿದರು.

ಕೃಷಿ ವಿಜ್ಞಾನ ವಿಶ್ವವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ 8ನೇ ಅಂತಾರಾಷ್ಟ್ರೀಯ ಸಮ್ಮೇಳನ ಉದ್ಘಾಟಿಸಿ ಅವರು ಮಾತನಾಡಿದರು. ಜಾಗತಿಕ ಮಟ್ಟದಲ್ಲಿ ದೇಶದ ಕೃಷಿ ವಿಶ್ವವಿದ್ಯಾಲಯಗಳು ಗುಣಮಟ್ಟ ಕೃಷಿ ಶಿಕ್ಷಣ ನೀಡುತ್ತಿವೆ. ಪ್ರತಿವರ್ಷ ಹತ್ತು ಸಾವಿರ ಕೃಷಿ ವಿದ್ಯಾರ್ಥಿಗಳ ಹೊರಬರುತ್ತಿದ್ದಾರೆ. ಸಂಶೋಧನೆ ಹಾಗೂ ಕೃಷಿ ಜ್ಞಾನ ಮಾದರಿಯಾಗಿದೆ. ಕೃಷಿ ಶಿಕ್ಷಣ ಆನ್‌ಲೈನ್ ಶಿಕ್ಷಣವಲ್ಲ.

ಕೌಶಲ್ಯವೃದ್ಧಿಯ ಮೇಲೆ ಕೃಷಿ ಪ್ರಾತ್ಯಕ್ಷಿತೆಯ ಮೂಲಕವೇ ಕಲಿಯಬೇಕಿದೆ. ಸುಸ್ಥಿರ ಕೃಷಿಯನ್ನು ಹೆಚ್ಚಿಸಲು ಇರುವ ಅವಕಾಶಗಳನ್ನು ಕೃಷಿ ವಿದ್ಯಾರ್ಥಿಗಳು ಬಳಕೆ ಮಾಡಿಕೊಳ್ಳಬೇಕಿದೆ. ಶೇ.50ರಷ್ಟು ವಿದ್ಯಾರ್ಥಿಗಳು ಉದ್ಯೋಗ ಅರಸಿ ಹೋಗುತ್ತಿದ್ದಾರೆ. ಕೃಷಿ ವಿಸ್ತರಣಾ ಕೇಂದ್ರಗಳ ಮೂಲಕ ಕೃಷಿಯನ್ನು ಮತ್ತಷ್ಟು ಉತ್ತೇಜಿಸಲು ಅನೇಕ ಅವಕಾಶಗಳಿವೆ. ಜೈವಿಕ, ತೋಟಗಾರಿಕೆ, ಕೃಷಿಯಲ್ಲಿ ನವೀನ ತಂತ್ರಜ್ಞಾನ ಅಳವಡಿಕೆ ಮೂಲಕ ಕೃಷಿ ಲಾಭದಾಯಕದತ್ತ ಕೊಂಡ್ಯೊಯುವ ಅವಕಾಶಗಳು ರೈತರಿಗೆ ತಲುಪಿಸಬೇಕಿದೆ.

Advertisements

ವಾತಾವರಣದ ಬದಲಾವಣೆ, ಇಳುವರಿ ಹೆಚ್ಚಳ ಹಾಗೂ ಮಾರುಕಟ್ಟೆ ವ್ಯವಸ್ಥೆಯನ್ನು ಬಳಕೆ ಮಾಡುವ ನಿಟ್ಟಿನಲ್ಲಿ ಇನ್ನಷ್ಟು ಪ್ರಯತ್ನಗಳು ನಡೆಬೇಕಿದೆ. ಗ್ರಾಮೀಣ ಪ್ರದೇಶದಿಂದ ಕೃಷಿ ಪದವೀಧರರು ಈ ನಿಟ್ಟಿನಲ್ಲಿ ಚಿಂತಿಸಬೇಕಾದ ಅವಶ್ಯಕತೆಯಿದೆ. ಜಾಗತಿಕ ಸಂಶೋಧನಾ ಬೆಳವಣಿಗೆಗಳೊಂದಿಗೆ ಬದಲಾದ ಕೃಷಿಯ ಸವಾಲುಗಳನ್ನು ಎದುರಿಸಲು ಸಿದ್ಧರಾಗಬೇಕಿದೆ. ಹತ್ತಾರು ವರ್ಷದಿಂದ ನಡೆದುಕೊಂಡಿರುವ ಕೃಷಿ ಪದ್ಧತಿಯನ್ನು ಉಳಿಸಿಕೊಂಡು ಹೊಸತನವನ್ನು ರೂಢಿಸಿಕೊಳ್ಳಬೇಕಿದೆ ಎಂದರು. ಕೃಷಿ ಬೆಳವಣಿಗೆ ಇರುವ ಅವಕಾಶಗಳನ್ನು ಸದ್ಭಳಕೆ ಮಾಡಿಕೊಳ್ಳುವ ಮೂಲಕ ಕೃಷಿಯನ್ನು ಸುಸ್ಥಿರತೆಯನ್ನು ಹೆಚ್ಚಿಸಬೇಕೆಂದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕೃಷಿವಿಜ್ಞಾನ ವಿಶ್ವವಿದ್ಯಾಲಯ ಕುಲಪತಿ ಡಾ. ಹನುಮಂತಪ್ಪವಹಿಸಿದ್ದರು, ಅತಿಥಿಗಳಾಗಿ ವಿಶ್ರಾಂತ ಕುಲಪತಿ ಡಾ. ಬಿ.ವಿ. ಪಾಟೀಲ್, ಕೊಪ್ಪಳ ಅರಣ್ಯಾಧಿಕಾರಿ ಡಾ.ಎ. ಚಂದ್ರಶೇಖರ, ನೇಪಾಳ ಕೃಷಿ ಇಲಾಖೆ ನಿರ್ದೇಶಕ ಡಾ. ದಿಲೀಪ್ ಕುಮಾರ ಝಾ, ಬಾಂಗ್ಲಾದೇಶದ ಕೃಷಿ ನಿರ್ದೆಶಕ ಡಾ.ಬಿ.ಕೆ ಚಕ್ರವರ್ತಿ, ವಿಶ್ವವಿದ್ಯಾಲಯ ವ್ಯವಸ್ಥಾಪನಾ ಮಂಡಳಿ ಸದಸ್ಯರುಗಳಾದ ಮಲ್ಲಿಕಾರ್ಜುನ, ಡಾ. ಶ್ರೀನಿವಾಸ ರಾವ, ಕೃಷಿ ಸಂಶೋಧನಾ ನಿರ್ದೆಶಕ ಡಾ. ಎಂ.ಜಿ.ಪಾಟೀಲ್, ರಜಿಸ್ಟಾçರ್ ಡಾ. ಎಂ.ವೀರನಗೌಡ, ಡಾ. ಗುರುರಾಜ ಸುಂಕದ, ಡಾ. ಬಿ.ವಿ.ತೆಬುರೇನ್, ಡಾ. ಎಸ್.ಪಿ.ಸಿಂಗ್, ಡಾ. ಮಹೇಂದ್ರ ಸಿಂಗ್ ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X