ಬಾಗಲಕೋಟೆ | ಅತಿಥಿ ಉಪನ್ಯಾಸಕರ ಸಮಸ್ಯೆ ಪರಿಹರಿಸಿ; ವಿದ್ಯಾರ್ಥಿಗಳ ಆಗ್ರಹ

Date:

Advertisements

ಅತಿಥಿ ಉಪನ್ಯಾಸಕರ ಸಮಸ್ಯೆಯನ್ನು ಪರಿಹರಿಸಿ ನಮ್ಮ ತರಗತಿಗಳು ಸುಗಮವಾಗಿ ನಡೆಯುವಂತೆ ನ್ಯಾಯ ಒದಗಿಸಿ ಎಂದು ಬಾಗಲಕೋಟೆ ಜಿಲ್ಲೆಯ ನವನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ವಿದ್ಯಾರ್ಥಿಗಳು ಬಾಗಲಕೋಟೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ದಿ.23.11.2023ರಿಂದ ಇಲ್ಲಿಯವರೆಗೆ ನಮ್ಮ ಮಹಾವಿದ್ಯಾಲಯದಲ್ಲಿ ತರಗತಿಗಳು ನಡೆಯುತ್ತಿಲ್ಲ. ಏಕೆಂದರೆ ನಮ್ಮಲ್ಲಿ 73 ಜನ ಅತಿಥಿ ಉಪನ್ಯಾಸಕರಿದ್ದು, ಅವರು ತರಗತಿಗಳನ್ನು ಬಹಿಷ್ಕರಿಸಿ ಅನಿರ್ದಿಷ್ಠಾವದಿ ಧರಣಿ ಸತ್ಯಾಗ್ರಹದಲ್ಲಿ ಪಾಲ್ಗೊಂಡಿದ್ದಾರೆ. ಕಳೆದ 26ದಿನಗಳಿಂದ ನಮಗೆ ತರಗತಿಗಳು ನಡೆಯುತ್ತಿಲ್ಲ. ಇದರಿಂದ ನಮಗೆ ಶೈಕ್ಷಣಿಕ ಹಿನ್ನೇಡೆ ಆಗುತ್ತಿದೆ. ಇನ್ನೂ ನಮ್ಮ ಮೊದಲ ಹಾಗೂ 2ನೇ ಆಂತರಿಕ ಪರೀಕ್ಷೆಗಳು ನಡೆದಿಲ್ಲ ಮತ್ತು ನಮ್ಮ ಪಠ್ಯಕ್ರಮವು ಇನ್ನೂ ಒಂದು ಅಧ್ಯಾಯವು ಪೂರ್ಣಗೊಂಡಿಲ್ಲ.

ಇದೆ ರೀತಿ ಮುಂದೆ ವರೆದರೆ ನಮ್ಮ ಭವಿಷ್ಯ ಏನಾಗುತ್ತದೆ ಎಂದು ಇನ್ನೂ ವರೆಗೆ ಸರ್ಕಾರ ಚಿಂತನೆ ಮಾಡುತ್ತಿಲ್ಲ. ನಾವು ಬಡವರು ಕೂಲಿ ಕಾರ್ಮಿಕರು, ರೈತರ ಮಕ್ಕಳು, ಹಿಂದುಳಿದ ವರ್ಗಗಳ ಮಕ್ಕಳು ಹಾಗೂ ಆರ್ಥಿಕ ಪರಸ್ಥಿತಿಯಿಂದ ಹಿಂದುಳಿದ ಕುಟುಂಬದವರ ಮಕ್ಕಳಾಗಿದ್ದು ಇರುತ್ತದೆ. ಕಾರಣ ಕೂಡಲೇ ಅತಿಥಿ ಉಪನ್ಯಾಸಕರ ಸಮಸ್ಯೆ ಬಗೆಹರಿಸಿ ನಮಗೆ ನ್ಯಾಯ ಒದಗಿಸಬೇಕೆಂದು ಮನವಿ ಪತ್ರದಲ್ಲಿ ವಿದ್ಯಾರ್ಥಿಗಳು ವಿನಂತಿಸಿದ್ದಾರೆ.

Advertisements

ಈ ವೇಳೆ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾಧ್ಯಕ್ಷ ಬಸವರಾಜ ಧರ್ಮಂತಿ, ಭಾಗ್ಯಾ ಬೆಟಗೇರಿ, ರಾಜೇಶ್ವರಿ ಹಿರೇಮಠ, ಸವಿತಾ ಹಿರೇಮಠ, ಶಿವಲೀಲಾ ಬರಡಗಿ, ಸಂಗಮೇಶ ಅಂಬಿಗೇರ, ಮಹಾಂತೇಶಗೌಡ ವಂಕಲಕುಂಟಿ, ಕಿರಣ್ ಗಾಳಿ, ರಾಹುಲ್ ಶೆಟ್ಟರ್, ಗಣೇಶ ನಾಯಕ, ದಾದಾಪಿರ ಶಿವಳ್ಳಿ, ಅಜಿತ್ ಬರಡಗಿ, ಸಾಗರ ಸೀಮಿಕೇರಿ ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಉಡುಪಿ | ಅಡಿಷನಲ್ ಎಸ್‌ಪಿ ಕಾರಿಗೆ ಡಿಕ್ಕಿ ಹೊಡೆದು ಕರ್ತವ್ಯಕ್ಕೆ ಅಡ್ಡಿ ಆರೋಪ; ಮೂವರ ಬಂಧನ

ಮಹೇಶ್ ಶೆಟ್ಟಿ ತಿಮರೋಡಿ ಅವರನ್ನು ಬಂಧಿಸಿ ಕರೆದೊಯ್ಯುವಾಗ ಪೊಲೀಸರ ಕರ್ತವ್ಯಕ್ಕೆ ಅಡ್ಡಿಪಡಿಸಿದ...

ಚಿಕ್ಕಮಗಳೂರು l ಕಾಫಿ ನಾಡಿನಲ್ಲಿ ಕಾಡಾನೆ ಹಾವಳಿ; ರೈತರ ಬೆಳೆ ಹಾನಿ

ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ...

ಬೀದರ್‌ | ಬೆಳೆ ಹಾನಿ : ಹೆಕ್ಟೇರ್‌ಗೆ ₹50 ಸಾವಿರ ಪರಿಹಾರಕ್ಕೆ ಶಾಸಕ ಶೈಲೇಂದ್ರ ಬೆಲ್ದಾಳೆ ಒತ್ತಾಯ

ಬೀದರ್ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ವ್ಯಾಪಕ ಬೆಳೆ ಹಾನಿ, ಸಾರ್ವಜನಿಕ ಆಸ್ತಿಪಾಸ್ತಿ ನಷ್ಟವಾಗಿದೆ....

Download Eedina App Android / iOS

X