ಸಾರ್ವಜನಿಕರ ಆರೋಗ್ಯದ ದೃಷ್ಟಿಯಿಂದ ಕೋಟ್ಪಾ ಕಾಯ್ದೆ ಪರಿಣಾಮಕಾರಿ ಅನುಷ್ಠಾನ : ರಾಘವೇಂದ್ರ ಶೆಟ್ಟಿಗಾರ್

Date:

Advertisements

ಬೆಂಗಳೂರಿನಲ್ಲಿ ಧೂಮಪಾನ ಮಾಡದ ಮಕ್ಕಳು, ಮಹಿಳೆಯರು ಮತ್ತು ಸಾರ್ವಜನಿಕರ ಆರೋಗ್ಯವನ್ನು ಕಾಪಾಡುವ ಸಲುವಾಗಿ ಕೋಟ್ಪಾ ಕಾಯ್ದೆಯನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕು ಎಂದು ಕರ್ನಾಟಕ ರಾಜ್ಯ ಕಾನೂನು ಸೇವಾ ಮಂಡಳಿ ಉಪ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶ ರಾಘವೇಂದ್ರ ಶೆಟ್ಟಿಗಾರ್ ಅವರು ತಿಳಿಸಿದರು.

ನಗರದ ದಕ್ಷಿಣ ವಲಯ ಕಚೇರಿ ಸಭಾಂಗಣದಲ್ಲಿ ನಡೆದ ತರಬೇತಿ ಕಾರ್ಯಾಗಾರವನ್ನು ಉದ್ದೇಶಿಸಿ ಮಾತನಾಡಿದ ಅವರು, “ನಗರದಲ್ಲಿ ಕೋಟ್ಪಾ ಕಾಯ್ದೆ ಬಗ್ಗೆ ನಾಗರಿಕರಲ್ಲಿ ಅರಿವು ಮೂಡಿಸಿ, ಕಾಯ್ದೆ ಉಲ್ಲಂಘಿಸುವವರ ವಿರುದ್ದ ದಂಡ ಹಾಗೂ ಕಾನೂನು ಕ್ರಮ ಕೈಗೊಳ್ಳಬೇಕು. ಮುಂದಿನ ಪೀಳಿಗೆಗೆ ಉತ್ತಮ ಸಮಾಜವನ್ನು ನಿರ್ಮಿಸಲು ನಾವೆಲ್ಲರೂ ಕೈಜೋಡಿಸಬೇಕು” ಎಂದು ಹೇಳಿದರು.

ಹಿರಿಯ ಪೋಲಿಸ್ ಅಧಿಕಾರಿ ಬದ್ರಿನಾಥ್ ಮಾತನಾಡಿ, “ರಸ್ತೆ ಬದಿಯ ಸಣ್ಣ ಸಣ್ಣ ಅಂಗಡಿಗಳಲ್ಲಿ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವುದರ ಮೇಲೆ ನಿಗಾವಹಿಸಿ ತಡೆಯಬೇಕು. ಹುಕ್ಕಾಬಾರ್, ಬಾರ್ ಮತ್ತು ರೆಸ್ಟೊರೆಂಟ್, ತಂಬಾಕು ಉತ್ಪನ್ನ ಮಾರಾಟಗಾರರು ಕಾಯ್ದೆ ಉಲ್ಲಂಘಿಸಿರುವ ವಿರುದ್ದ ಕ್ರಮ ಜರುಗಿಸಬೇಕು” ಎಂದು ತಿಳಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಬೀದಿ ಬದಿ ವ್ಯಾಪಾರಿಗಳಿಂದ ಬಿಬಿಎಂಪಿಗೆ ಮುತ್ತಿಗೆ

ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್ ಮಾತನಾಡಿ, “ಶಾಲಾ-ಕಾಲೇಜು ಪಕ್ಕದಲ್ಲಿ ತಂಬಾಕು ಮಾರಾಟ ಮಾಡದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ಕಾಯ್ದೆ ಉಲ್ಲಂಘನೆ ಮಾಡುವ ಕಡೆ ಪಾಲಿಕೆ ಆರೋಗ್ಯಾಧಿಕಾರಿಗಳು ಪೊಲೀಸ್ ಸಹಯೋಗದೊಂದಿಗೆ ಭೇಟಿ ನೀಡಿ ತಪಾಸಣೆ ನಡೆಸಿ ದಂಡ ವಿಧಿಸಲಾಗುವುದು” ಎಂದು ಹೇಳಿದರು.

ಕಾರ್ಯಾಗಾರದಲ್ಲಿ ದಕ್ಷಿಣ ವಲಯ ಆರೋಗ್ಯಾಧಿಕಾರಿ ಡಾ. ಕಲ್ಪನಾ, ಜಿಲ್ಲಾ ತಂಬಾಕು ನಿಯಂತ್ರಣ ಕೋಶ ಕಾರ್ಯಕ್ರಮ ಅಧಿಕಾರಿ ಡಾ. ಕುಮಾರ್, ಆರೋಗ್ಯಾಧಿಕಾರಿಗಳು, ಪೋಲಿಸ್, ಅಬಕಾರಿ, ಶಿಕ್ಷಣ ಇಲಾಖೆ, ಆಹಾರ ಮತ್ತು ಸುರಕ್ಷತಾ ಕಾನೂನು ಮಾಪನ ಶಾಸ್ತ್ರ ಇಲಾಖೆಯ ಅಧಿಕಾರಿಗಳು ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

ಹಾವೇರಿ | ಗಣೇಶ ಚತುರ್ಥಿ ಪ್ರಯುಕ್ತ 265 ಹೆಚ್ಚುವರಿ ಸಾರಿಗೆ ಸೌಲಭ್ಯ

ಚತುರ್ಥಿಯ ಪ್ರಯುಕ್ತ ಸಾರ್ವಜನಿಕರು ತಮ್ಮ ಸ್ವಂತ ಊರುಗಳಿಗೆ ತೆರಳಲು ಅನುಕೂಲವಾಗುವಂತೆ ವಾಯವ್ಯ...

ಗದಗ | ಆಗಸ್ಟ್ 25ಕ್ಕೆ ಲೋಕಾಯುಕ್ತ ಜನ ಸಂಪರ್ಕ ಸಭೆ

ಸಾರ್ವಜನಿಕ ಕುಂದು-ಕೊರತೆಗಳ ಅಹವಾಲು ಸ್ವೀಕರಿಸಲು ಆಗಸ್ಟ್ 25 ಸೋಮವಾರದಂದು  ಗದಗ ಶಿರಹಟ್ಟಿ...

Download Eedina App Android / iOS

X