ಭಾರತದ ಕೃಷಿ ಜಿಡಿಪಿ ಶೇ.35 ರಿಂದ ಶೇ.15ಕ್ಕೆ ಕುಸಿತ: ಕೇಂದ್ರದ ಹೇಳಿಕೆ

Date:

Advertisements

ಕೈಗಾರಿಕಾ ಮತ್ತು ಸೇವಾ ವಲಯದಲ್ಲಿನ ಕ್ಷಿಪ್ರ ಬೆಳವಣಿಗೆಯಿಂದಾಗಿ 1990-91ರಲ್ಲಿ ಶೇ.35ರಷ್ಟಿದ್ದ ಭಾರತದ ಜಿಡಿಪಿಯಲ್ಲಿನ ಕೃಷಿ ಪಾಲು ಕಳೆದ 2022-23ರ ಹಣಕಾಸು ವರ್ಷದಲ್ಲಿ ಶೇ.15ಕ್ಕೆ ಕುಸಿದಿದೆ ಎಂದು ಕೇಂದ್ರ ಸರ್ಕಾರ ಮಂಗಳವಾರ ಮಾಹಿತಿ ನೀಡಿದೆ.

“ಆರ್ಥಿಕತೆಯ ಒಟ್ಟು ಮೌಲ್ಯ ವರ್ಧಿತ (ಜಿವಿಎ)ಯಲ್ಲಿ ಕೃಷಿಯ ಪಾಲು 1990-91 ರಲ್ಲಿ ಶೇ. 35 ರಿಂದ 2022-23 ರಲ್ಲಿ ಶೇ.15 ಕ್ಕೆ ಇಳಿದಿದೆ.

ಕೃಷಿ ಕುಸಿತವು ಜಿವಿಎಯಿಂದ ಆಗಿಲ್ಲ, ಆದರೆ ಕೈಗಾರಿಕಾ ಮತ್ತು ಸೇವಾ ವಲಯದ ಜಿವಿಎನ ತ್ವರಿತ ವಿಸ್ತರಣೆಯಿಂದ ಹೆಚ್ಚಳಗೊಂಡಿದೆ ಎಂದು ಕೇಂದ್ರ ಕೃಷಿ ಸಚಿವ ಅರ್ಜುನ್ ಮುಂಡಾ ಅವರು ಲೋಕಸಭೆಗೆ ಲಿಖಿತ ಉತ್ತರದಲ್ಲಿ ತಿಳಿಸಿದ್ದಾರೆ.

Advertisements

“ಬೆಳವಣಿಗೆಯ ಪರಿಭಾಷೆಯಲ್ಲಿ, ಕೃಷಿ ಮತ್ತು ಸಂಬಂಧಿತ ವಲಯವು ಕಳೆದ ಐದು ವರ್ಷಗಳಲ್ಲಿ ಸರಾಸರಿ ಶೇ. 4 ವಾರ್ಷಿಕ ಬೆಳವಣಿಗೆಯನ್ನು ದಾಖಲಿಸಿದೆ. ಜಾಗತಿಕ ಅಂಶಕ್ಕೆ ಸಂಬಂಧಿಸಿದಂತೆ, ವಿಶ್ವದ ಜಿಡಿಪಿಯಲ್ಲಿ ಕೃಷಿಯ ಪಾಲು ದಶಕಗಳಿಂದ ಕುಸಿದಿದೆ ಮತ್ತು ಇತ್ತೀಚಿನ ವರ್ಷಗಳಲ್ಲಿ ಸುಮಾರು ಶೇ. 4 ರಷ್ಟಿದೆ” ಎಂದು ಸಚಿವರು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಜಕೀಯ ಸಂಸ್ಕೃತಿಯನ್ನು ಅಧೋಗತಿಗೆ ತಳ್ಳುತ್ತಿರುವ ಬಿಜೆಪಿ ಅಂತಃಕಲಹ

“ಕೃಷಿಯ ಉತ್ಪಾದಕತೆಯನ್ನು ಹೆಚ್ಚಿಸಲು, ಸಂಪನ್ಮೂಲ ಬಳಕೆ ದಕ್ಷತೆಯನ್ನು ವೃದ್ಧಿಸುವುದು, ಸುಸ್ಥಿರ ಕೃಷಿ ಉತ್ತೇಜನ, ಮೂಲಸೌಕರ್ಯಗಳ ಬಲಪಡಿಸುವಿಕೆ ಮತ್ತು ರೈತರಿಗೆ ಲಾಭದಾಯಕ ಬೆಲೆಗಳನ್ನು ಖಚಿತಪಡಿಸಿಕೊಳ್ಳಲು ಸರ್ಕಾರವು ಹಲವಾರು ಅಭಿವೃದ್ಧಿ ಕಾರ್ಯಕ್ರಮಗಳು, ಯೋಜನೆಗಳು, ಸುಧಾರಣೆಗಳು ಮತ್ತು ನೀತಿಗಳನ್ನು ಅನುಷ್ಠಾನಗೊಳಿಸಿದೆ” ಎಂದು ಸಚಿವರು ಹೇಳಿದರು.

“ಪ್ರಧಾನಮಂತ್ರಿ ಕಿಸಾನ್ ಯೋಜನೆಯನ್ನು 2019 ರಲ್ಲಿ ಪ್ರಾರಂಭಿಸಲಾಯಿತು. ಇದು ಮೂರು ಸಮಾನ ಕಂತುಗಳಲ್ಲಿ ವರ್ಷಕ್ಕೆ 6,000 ರೂಪಾಯಿಗಳನ್ನು ಒದಗಿಸುವ ಆದಾಯ ಬೆಂಬಲ ಯೋಜನೆಯಾಗಿದೆ. ನವೆಂಬರ್ 30, 2023 ರಂತೆ 11 ಕೋಟಿಗೂ ಹೆಚ್ಚು ರೈತರಿಗೆ ಇದುವರೆಗೆ ರೂ 2.81 ಲಕ್ಷ ಕೋಟಿಗಿಂತ ಹೆಚ್ಚು ಬಿಡುಗಡೆಗೊಳಿಸಲಾಗಿದೆ” ಅರ್ಜುನ್ ಮುಂಡಾ ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X