ಮೈಸೂರು | ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಗೆ ಸಿರಿಧಾನ್ಯ ಸಹಕಾರಿ: ಡಾ. ಎಚ್‌.ಸಿ ಮಹದೇವಪ್ಪ

Date:

Advertisements

ಜನರ ಆರೋಗ್ಯ ಮತ್ತು ಆರ್ಥಿಕ ಅಭಿವೃದ್ಧಿಯ ಜೊತೆಗೆ ರೈತರೂ ಹೆಚ್ಚಿನ ಮಟ್ಟದಲ್ಲಿ ಉದ್ಯೋಗದಲ್ಲಿ ತೊಡಗಿಸಿಕೊಳ್ಳಲು ಸಾವಯವ ಕೃಷಿಯ ಸಿರಿಧಾನ್ಯ ಸಹಕಾರಿ ಎಂದು ಸಮಾಜ ಕಲ್ಯಾಣ ಹಾಗೂ ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ ಮಹದೇವಪ್ಪ ಹೇಳಿದರು.

ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗದ ವತಿಯಿಂದ ನಗರದ ನಂಜರಾಜ ಬಹದ್ಧೂರ್ ಛತ್ರದಲ್ಲಿ ಮಂಗಳವಾರ(ಡಿ.19) ಆಯೋಜಿಸಿದ್ದ ಮೂರು ದಿನಗಳ ‘ಸಿರಿಧಾನ್ಯ ಸಂಭ್ರಮಕ್ಕೆ’ ಚಾಲನೆ ನೀಡಿ ಮಾತನಾಡಿದ ಅವರು, ಮೈಸೂರು ಹಾಗೂ ಚಾಮರಾಜನಗರ ಭಾಗದ ರೈತರು ಹೆಚ್ಚಾಗಿ ಸಾವಯವ ಕೃಷಿಯಲ್ಲಿ ತೊಡಸಿಕೊಳ್ಳುವಂತಾಗಲಿ ಎಂದರು.

ಭಾರತವು ಮೂಲತಃ ಕೃಷಿ ಪ್ರಧಾನ ರಾಷ್ಟ್ರವಾಗಿದ್ದು, ಗ್ರಾಮೀಣ ಭಾಗದ ಜನರ ಮೂಲ ಕಸುಬು ಕೃಷಿಯಾಗಿದೆ. ಅಗತ್ಯಕ್ಕೆ ತಕ್ಕಂತೆ ವೈಜ್ಞಾನಿಕವಾಗಿ ಆಹಾರ ಉತ್ಪಾದಿಸುವ ಜೊತೆಗೆ ಕೃಷಿಯು ರೈತರ ಕೈಯಲ್ಲೆ ಇರಬೇಕು. ಕೃಷಿ ಕೈಗಾರಿಕೆಯಾಗಿ ಪರಿವರ್ತನೆಯಾಗುತ್ತಿರುವಾಗ ರೈತರಿಗೆ ನೇರವಾಗಿ ಹೆಚ್ಚಿನ ಲಾಭ ದೊರಕಬೇಕು. ಕೈಗಾರಿಕೋದ್ಯಮಿಗಳ ಕೈಗೆ ಸಿಗದಂತೆ ಎಚ್ಚರ ವಹಿಸಬೇಕು ಎಂದು ಸಲಹೆ ನೀಡಿದರು.

Advertisements

ರೈತರು ಸಾವಯವ ಕೃಷಿಯಲ್ಲಿ ತೊಡಗಲು ರಾಜ್ಯ ಸರ್ಕಾರ ಹೆಕ್ಟೇರ್‌ಗೆ ಹತ್ತು ಸಾವಿರ ರೂ. ನೀಡುವ ಮೂಲಕ ಸಿರಿಧಾನ್ಯ ಉತ್ಪಾದನೆಯನ್ನು ಉತ್ತೇಜಿಸುತ್ತಿದೆ. ಅದರಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಹಾಗೂ ಕೃಷಿ ಸಚಿವರು ನಮ್ಮೆಲ್ಲರನ್ನೂ ಸೇರಿಸಿ ಬೆಳಗಾವಿಯಲ್ಲಿ ಅಂತಾರಾಷ್ಟ್ರೀಯ ಸಿರಿಧಾನ್ಯ ಆಚರಣೆಯನ್ನು ಮಾಡಿದ್ದರು ಎಂದು ತಿಳಿಸಿದರು‌.

ಕೊಲಂಬಸ್ ಭಾರತಕ್ಕೆ ಬರುವ ಮುನ್ನವೇ ಬಣ್ಣದ ಜೋಳ ಬೆಳೆಯಲಾಗುತ್ತಿತ್ತು ಎಂಬ ಮಾಹಿತಿ ಇದೆ. ರಾಸಯನಿಕ ಗೊಬ್ಬರ ಬಳಸದೇ ಮಣ್ಣಿನ ಫಲವತ್ತತೆ ಕಾಪಾಡುವ ಸಾವಯವ ಕೃಷಿಗೆ ನಾವೆಲ್ಲರೂ ಬೆಂಬಲ ಕೊಡಬೇಕು ಎಂದರು.

ನಟಿ, ರಂಗಕರ್ಮಿ ಅಕ್ಷತಾ ಪಾಂಡವಪುರ ಅವರು ಪೌಷ್ಠಿಕ ಪಾಕ ಪುಸ್ತಕವನ್ನು ಲೋಕಾರ್ಪಣೆ ಮಾಡಿದರು. ಹಾವೇರಿಯ ಸಿರಿಧಾನ್ಯ ಸಂರಕ್ಷಕ ವೀರಭದ್ರಯ್ಯ ಹಿರೇಮಠ ಅಧ್ಯಕ್ಷತೆ ವಹಿಸಿದ್ದರು. ದೇವಧಾನ್ಯ ರೈತ ಉತ್ಪಾದಕರ ಕಂಪನಿ ನಿರ್ದೇಶಕಿ ಸಾವಿತ್ರಿ ಕೊಡ್ಲಿ, ಸಹಜ ಸಮೃದ್ಧ ಸಂಸ್ಥೆಯ ನಿರ್ದೇಶಕ ಜಿ.ಕೃಷ್ಣಪ್ರಸಾದ್ ಸೇರಿದಂತೆ ಮುಂತಾದವರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

ಮಂಗಳೂರು | ಅಲ್‌ ವಫಾ ಟ್ರಸ್ಟ್‌ನಿಂದ 15 ಜೋಡಿಗಳಿಗೆ ಸರಳ ಸಾಮೂಹಿಕ ವಿವಾಹ

ಮಂಗಳೂರಿನ ಅಲ್ ವಫಾ ಚಾರಿಟೆಬಲ್ ಟ್ರಸ್ಟ್ ಹಮ್ಮಿಕೊಂಡಿದ್ದ 15 ಜೋಡಿಗಳ ಸರಳ...

ಚಿಕ್ಕಮಗಳೂರು l ಶೋ ರೂಮ್ ಸಿಬ್ಬಂದಿಯಿಂದಲೇ ಡೀಸೆಲ್ ಕಳ್ಳತನ

ಶೋ ರೂಂ ಸಿಬ್ಬಂದಿಯೇ ಹೊಸ ವಾಹನದ ಡೀಸೆಲ್‌ ಕಳ್ಳತನ ಮಾಡಿದ ಘಟನೆ...

Download Eedina App Android / iOS

X