ವಿಜಯಪುರ | ಅಕ್ಕಮಹಾದೇವಿ ಮಹಿಳಾ ವಿವಿಗೆ ನ್ಯಾಕ್‌ ತಂಡ ಭೇಟಿ

Date:

Advertisements

ರಾಷ್ಟ್ರೀಯ ಮೌಲ್ಯಾಂಕ ಮಾನ್ಯತಾ ಮಂಡಳಿ (ನ್ಯಾಕ್)ಯ ಉನ್ನತ ಮಟ್ಟದ ತಜ್ಞರ ತಂಡ ಡಿಸೆಂಬರ್ 21ರಿಂದ 23ರವರೆಗೆ ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಲಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಪ್ರೊ. ಬಿ.ಕೆ ತುಳಸಿಮಾಲಾ ತಿಳಿಸಿದ್ದಾರೆ.

“ಹರಿಯಾಣದ ಭಗತ್ ಫೂಲ್‌ಸಿಂಗ್ ಮಹಿಳಾ ವಿಶ್ವವಿದ್ಯಾಲಯದ ಕುಲಪತಿ ಡಾ. ಸುದೇಶ್ ಚಿಕಾರಾ ಅವರ ನೇತೃತ್ವದಲ್ಲಿ ಏಳು ಮಂದಿ ತಜ್ಞರ ನ್ಯಾಕ್‌ ತಂಡವು ವಿಶ್ವವಿದ್ಯಾಲಯಕ್ಕೆ ಬರಲಿದೆ. ವಿಶ್ವವಿದ್ಯಾಲಯದ ಕ್ಯಾಂಪಸ್ ಹಾಗೂ ಸಿಂಧನೂರು ಮತ್ತು ಮಂಡ್ಯದಲ್ಲಿರುವ ಸ್ನಾತಕೋತ್ತರ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಅವರು ವಿವರಿಸಿದ್ದಾರೆ.

“ತಂಡ ವಿಶ್ವವಿದ್ಯಾಲಯದ ವಿವಿಧ ವಿಭಾಗಗಳು, ನಿರ್ದೇಶನಾಲಯಗಳು, ಅಧ್ಯಯನ ಕೇಂದ್ರಗಳು, ಮಹಿಳಾ ತಂತ್ರಜ್ಞಾನ ಪಾರ್ಕ್, ರಾಷ್ಟ್ರೀಯ ಸೇವಾ ಯೋಜನಾ ಕೋಶ, ಪ್ರಸಾರಾಂಗ, ಶಿಶುಪಾಲನಾ ಕೇಂದ್ರ, ವಸತಿ ನಿಲಯಗಳು, ಆಡಳಿತ ವಿಭಾಗ, ಶೈಕ್ಷಣಿಕ ವಿಭಾಗ, ಪರೀಕ್ಷಾ ವಿಭಾಗ, ಆರ್ಥಿಕ ವಿಭಾಗ, ಎಂಜನಿಯರಿಂಗ್ ವಿಭಾಗ, ಗ್ರಂಥಾಲಯ, ದೂರ ಶಿಕ್ಷಣ ನಿರ್ದೇಶನಾಲಯ, ಕ್ರೀಡಾ ನಿರ್ದೇಶನಾಲಯ, ಕಂಪ್ಯೂಟರ್ ಕೇಂದ್ರ, ಕುಂದುಕೊರತೆ ನಿವಾರಣಾ ಘಟಕ, ರ್ಯಾಗಿಂಗ್ ತಡೆ ವಿಭಾಗ, ಸಿಡಿಸಿ, ಪಿಎಂಇ ಬೋರ್ಡ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಘಟಕ, ಸಮಾನ ಅವಕಾಶ ಘಟಕ, ವೃತ್ತಿ ಮಾರ್ಗದರ್ಶನ ಘಟಕ, ಸ್ವಾಮಿ ವಿವೇಕಾನಂದ ಕೇಂದ್ರ, ಕನಕದಾಸ ಅಧ್ಯಯನ ಕೇಂದ್ರ, ಮೌಲಾನಾ ಆಜಾದ್ ಅಧ್ಯಯನ ಕೇಂದ್ರ, ಡಾ.ಬಿ.ಆರ್.ಅಂಬೇಡ್ಕರ್ ಅಧ್ಯಯನ ಕೇಂದ್ರ, ಗಾಂಧಿ ಅಧ್ಯಯನ ಕೇಂದ್ರ, ಮಹಿಳಾ ಅಧ್ಯಯನ ಕೇಂದ್ರ, ಭಾಸ್ಕರಾಚಾರ್ಯ ಅಧ್ಯಯನ ಕೇಂದ್ರಗಳಿಗೆ ಭೇಟಿ ನೀಡಲಿದೆ” ಎಂದು ಹೇಳಿದ್ದಾರೆ.

Advertisements

“ನಮ್ಮ ಶೈಕ್ಷಣಿಕ ಕಾರ್ಯಕ್ಷಮತೆ ಕೋರ್ಸುಗಳಿಗೆ ಮೂಲಭೂತ ಸೌಕರ್ಯಗಳು ಉತ್ತಮವಾಗಿವೆ. ನಾವು ಕೆಲಸ ಹೊಸ ವಿಶಿಷ್ಟ ಕೋರ್ಸ್ ಗಳನ್ನು ಸಹ ಪ್ರಾರಂಭಿಸಿದ್ದೇವೆ. ಇವು ಉದ್ಯಮದೊಂದಿಗೆ ಸಂಪರ್ಕ ಹೊಂದಿವೆ ಮತ್ತು ಉತ್ತಮ ಪ್ರಕ್ರಿಯೆಯನ್ನು ಪಡೆಯುತ್ತಿವೆ. ಈಗಾಗಿ ಈ ಬಾರಿ ನ್ಯಾಕನಿಂದ ನಮಗೆ ಉತ್ತಮ ರಾಂಕ್ ಬರುವ ವಿಶ್ವಾಸವಿದೆ” ಎಂದು ಅವರು ಆಶಯ ವ್ಯಕ್ತಪಡಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

ಉಡುಪಿ | ಮಹೇಶ್‌ ಶೆಟ್ಟಿ ತಿಮರೋಡಿ ಬೆಂಬಲಿಗರ ಕಾರು ಪೊಲೀಸ್‌ ಅಧೀಕ್ಷರಕ ಕಾರಿಗೆ ಡಿಕ್ಕಿ !

ಬೆಳ್ತಂಗಡಿಯ ಸೌಜನ್ಯ ಪರ ಹೋರಾಟಗಾರ ಮಹೇಶ್‌ ಶೆಟ್ಟಿ ತಿಮರೋಡಿಯವರನ್ನು ಬ್ರಹ್ಮಾವರ ಪೊಲೀಸ್...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

Download Eedina App Android / iOS

X