ಬೆಂಗಳೂರು | ಸಂಚಾರ ನಿಯಮ ಉಲ್ಲಂಘಿಸಿದರೆ, ಐಟಿ ಕಂಪನಿ ಬಾಸ್‌ಗೆ ದೂರು

Date:

Advertisements

ರಾಜ್ಯ ರಾಜ್ಯಧಾನಿ ಬೆಂಗಳೂರಿನಲ್ಲಿ ಸಂಚಾರ ನಿಯಮ ಉಲ್ಲಂಘಿಸುವವರ ಸಂಖ್ಯೆಯಲ್ಲಿ ದಿನದಿಂದ ದಿನಕ್ಕೆ ಏರಿಕೆ ಕಂಡುಬರುತ್ತಿದೆ. ನಿಯಮ ಉಲ್ಲಂಘಿಸುವವರ ವಿರುದ್ಧ ಸಮರ ಸಾರಿರುವ ಬೆಂಗಳೂರು ಸಂಚಾರ ಪೊಲೀಸರು ನಗರದ ಪ್ರತಿ ಜಂಕ್ಷನ್‌ಗಳಲ್ಲಿಯೂ ಆಟೋಮ್ಯಾಟಿಕ್‌ ನಂಬರ್‌ ಪ್ಲೇಟ್‌ ರೆಕಗ್ನಿಷನ್‌ (ಎಎನ್‌ಪಿಆರ್‌) ಕ್ಯಾಮೆರಾ ಅಳವಡಿಸಿದ್ದಾರೆ. ಇದೀಗ, ಅಡ್ಡಾದಿಡ್ಡಿ ಚಾಲನೆ, ಸಿಗ್ನಲ್‌ ಜಂಪ್‌ ಮಾಡಿ ಸಂಚಾರ ನಿಯಮ ಉಲ್ಲಂಘಿಸುವ ಟೆಕ್ಕಿಗಳಿಗೆ ಬಿಸಿ ಮುಟ್ಟಿಸಲು ತಯಾರಾಗಿರುವ ಸಂಚಾರ ಪೊಲೀಸರು, ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿದವರ ಕಂಪನಿಗೆ ಮಾಹಿತಿ ರವಾನಿಸಿ ಅವರ ಬಾಸ್​​ಗಳಿಂದಲೇ ಬುದ್ಧಿ ಹೇಳಿಸುವ ಕಾರ್ಯಕ್ಕೆ ಮುಂದಾಗಿದ್ದಾರೆ.

ಐಟಿ ಕಂಪನಿಗಳೇ ಹೆಚ್ಚಾಗಿರುವ ಹೊರ ವರ್ತುಲ ರಸ್ತೆ ಹಾಗೂ ವೈಟ್‌ಫೀಲ್ಡ್‌ ಪ್ರದೇಶದ ಮಹದೇವಪುರ ಸಂಚಾರ ಪೊಲೀಸ್ ವಿಭಾಗದಲ್ಲಿ ಪ್ರಾಯೋಗಿಕವಾಗಿ ಜಾರಿಗೊಳಿಸಲಾಗಿದೆ.

ರಸ್ತೆ ಸುರಕ್ಷತೆ ಮತ್ತು ಸಂಚಾರ ನಿಯಮಗಳ ಬಗ್ಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ಪೂರ್ವ ವಿಭಾಗದ ಸಂಚಾರ ಪೊಲೀಸರು ಈ ವಾರ ನಗರದ ಹೊರವರ್ತುಲ ರಸ್ತೆ ಮತ್ತು ವೈಟ್‌ಫೀಲ್ಡ್ ಐಟಿ ಕಾರಿಡಾರ್‌ನಲ್ಲಿ ಪ್ರಾಯೋಗಿಕವಾಗಿ ಈ ವಿಶಿಷ್ಟವಾದ ಅಭಿಯಾನವನ್ನು ಆರಂಭಿಸಿದ್ದಾರೆ.

Advertisements

“ಸದ್ಯಕ್ಕೆ ಈ ಯೋಜನೆ ಬೆಂಗಳೂರು ಪೂರ್ವ ವಿಭಾಗಕ್ಕೆ ಮಾತ್ರ ಸೀಮಿತವಾಗಿದ್ದು, ಈ ಕ್ರಮದಿಂದ ಸಂಚಾರ ನಿಯಮಗಳ ಉಲ್ಲಂಘನೆ ಪ್ರಕರಣಗಳು ಈ ಭಾಗದಲ್ಲಿ ಇಳಿಮುಖವಾದರೆ ಬೆಂಗಳೂರಿನ ಇತರ ಭಾಗಗಳಿಗೂ ವಿಸ್ತರಿಸಲಾಗುವುದು” ಎಂದು ಪೊಲೀಸರು ಹೇಳಿದ್ದಾರೆ.

“ಐಟಿ ಕಂಪನಿಗಳೇ ಹೆಚ್ಚಾಗಿರುವ ಹೊರ ವರ್ತುಲ ರಸ್ತೆ ಹಾಗೂ ವೈಟ್‌ಫೀಲ್ಡ್‌ ಪ್ರದೇಶದಲ್ಲಿ ಉದ್ಯೋಗಿಗಳು ತಮ್ಮ ಕಚೇರಿಯನ್ನು ಬೇಗ ತಲುಪಬೇಕು ಎಂದು ಸಂಚಾರ ನಿಯಮಗಳನ್ನು ಉಲ್ಲಂಘಿಸುವುದು ಹೆಚ್ಚಾಗಿದೆ. ಈ ಪೈಕಿ ಐಟಿ ನೌಕರರೇ ಹೆಚ್ಚು ಎನ್ನುವುದು ಈ ಭಾಗದಲ್ಲಿ ತಿಳಿದು ಬಂದಿದೆ. ಹಾಗಾಗಿ, ಸಂಚಾರ ನಿಯಮಗಳ ಕುರಿತು ಅರಿವು ಮೂಡಿಸಲು ಸಿಗ್ನಲ್ ಜಂಪ್ ಮಾಡುವ ಮತ್ತು ವೇಗವಾಗಿ ವಾಹನ ಚಾಲನೆ ಮಾಡುವ ಉದ್ಯೋಗಿಗಳ ಕಂಪನಿಗಳಿಗೆ ಇ ಮೇಲ್ ಅಥವಾ ವಾಟ್ಸ್‌ಆಪ್ ಮೂಲಕ ಸಂದೇಶ ಕಳುಹಿಸಲಾಗುತ್ತದೆ” ಎಂದು ಸಂಚಾರ ವಿಭಾಗದ ಉಪ ಪೊಲೀಸ್ ಆಯುಕ್ತ (ಪೂರ್ವ) ಕುಲ್​​ದೀಪ್ ಕುಮಾರ್ ಜೈನ್ ತಿಳಿಸಿದ್ದಾರೆ.

“ವಾಹನ ಚಾಲನೆ ಮಾಡುವಾಗ ಹೆಚ್ಚು ಜಾಗರೂಕರಾಗಿರಬೇಕು ಮತ್ತು ಜವಾಬ್ದಾರಿಯಿಂದ ವರ್ತಿಸಬೇಕು ಎಂಬ ಉದ್ದೇಶದಿಂದ ಈ ಯೋಜನೆ ಜಾರಿಗೆ ತರಲಾಗಿದೆ. ಸಂಚಾರ ನಿಯಮ ಉಲ್ಲಂಘಿಸಿ ಸಿಕ್ಕಿಬಿದ್ದರೆ ತಕ್ಷಣ ದಂಡ ವಿಧಿಸಲಾಗುತ್ತದೆ. ವ್ಯಕ್ತಿಯ ಸಾಮಾನ್ಯ ವಿವರಗಳು ಮತ್ತು ಅವರು ಯಾವ ಕಂಪನಿಯಲ್ಲಿ ಕೆಲಸ ಮಾಡುತ್ತಾರೆ ಎಂಬ ಮಾಹಿತಿಯನ್ನು ಕಂಪನಿ ಐಡಿ ಕಾರ್ಡ್​​ಗಳಿಂದ ಕಲೆಹಾಕಲಾಗುವುದು. ಹೆಚ್ಚಿನವರು ಗುರುತಿನ ಚೀಟಿಗಳನ್ನು ಧರಿಸಿರುತ್ತಾರೆ. ಪ್ರತಿ ದಿನದ ಕೊನೆಯಲ್ಲಿ, ನಾವು ಈ ಮಾಹಿತಿಯನ್ನು ಕಂಪನಿಗಳಿಗೆ ಇಮೇಲ್ ಮಾಡುತ್ತೇವೆ” ಎಂದು ಜೈನ್ ತಿಳಿಸಿದ್ದಾರೆ.

“ಸಂಚಾರ ನಿಯಮಗಳ ಪಾಲನೆ ಹಾಗೂ ರಸ್ತೆ ಸುರಕ್ಷತೆ ಕುರಿತು ತರಬೇತಿ ಹಾಗೂ ಮಾರ್ಗದರ್ಶನ ನೀಡುವಂತೆ ಐಟಿ ಕಂಪನಿಗಳಿಗೆ ಸೂಚನೆ ನೀಡಲಾಗುವುದು. ಅರಿವು ಮೂಡಿಸುವ ಕಾರ್ಯಕ್ಕೆ ಸಂಚಾರ ವಿಭಾಗದ ಪೊಲೀಸರನ್ನು ಆಹ್ವಾನಿಸಬಹುದಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಬಿಜೆಪಿ ಮುಖಂಡ ತಮ್ಮೇಶ್ ಗೌಡ ವಿರುದ್ಧ ಬೆದರಿಕೆ ಆರೋಪ: ದೂರು ದಾಖಲು

ಸಂಚಾರ ನಿಯಮ ಉಲ್ಲಂಘನೆಯ ತಪಾಸಣೆಗಳು ಪೀಕ್ ಅವರ್‌ಗಳಲ್ಲಿ ನಡೆಯುತ್ತವೆ. ಸಾಮಾನ್ಯವಾಗಿ ಬೆಳಗ್ಗೆ 8 ರಿಂದ 10 ರವರೆಗೆ ಮತ್ತು ಸಂಜೆ 6 ರಿಂದ 8 ರವರೆಗೆ ನಡೆಯುತ್ತವೆ. ಸಂಚಾರ ನಿಯಮ ಪಾಲಿಸದೇ ಸಿಕ್ಕಿಬಿದ್ದ ಟೆಕ್ಕಿಗಳಿಗೆ ದಂಡ ವಿಧಿಸಿ, ಬಳಿಕ, ಇ-ಮೇಲ್‌, ವಾಟ್ಸ್‌ಅಪ್‌ ಮೂಲಕ ‘ನಿಮ್ಮ ಕಂಪನಿಯ ಉದ್ಯೋಗಿಗಳು ಸಂಚಾರ ನಿಯಮ ಪಾಲಿಸುತ್ತಿಲ್ಲ. ಈ ನಿಟ್ಟಿನಲ್ಲಿ ನಿಯಮ ಪಾಲನೆ ಬಗ್ಗೆ ಅರಿವು ಮೂಡಿಸಿ’ ಎಂದು ಮಾಹಿತಿ ನೀಡಲಾಗುತ್ತಿದೆ.

ಕಳೆದ ವಾರ, ವೈಟ್‌ಫೀಲ್ಡ್ ಮತ್ತು ಮಹದೇವಪುರದಲ್ಲಿ ಸುಮಾರು 200 ಮಂದಿ ಟ್ರಾಫಿಕ್ ರೂಲ್ಸ್ ಬ್ರೇಕ್ ಮಾಡಿರುವವರನ್ನು ಹಿಡಿದು, ದಂಡ ವಿಧಿಸಲಾಗಿದೆ. ಜತೆಗೆ ಅವರ ಕಂಪನಿಗಳಿಗೆ ಮಾಹಿತಿ ನೀಡಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X