ಮಲ್ಲಿಕಾರ್ಜುನ ಖರ್ಗೆ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂದ ಪುತ್ರ ಪ್ರಿಯಾಂಕ್‌ ಖರ್ಗೆ

Date:

Advertisements

ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರನ್ನು ‘ಇಂಡಿಯಾ’ ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಎಂದು ಘೋಷಿಸುವ ಪ್ರಸ್ತಾವನೆ ವಿಚಾರವಾಗಿ ಪ್ರಧಾನಿ ಪಟ್ಟಕ್ಕೆ ಸಮರ್ಥರು ಎಂಬುದನ್ನು ಮಗ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಅವರು ಪರೋಕ್ಷವಾಗಿ ಸಮರ್ಥಿಸಿಕೊಂಡಿದ್ದಾರೆ.

ಕಲಬುರಗಿಯಲ್ಲಿ ಬುಧವಾರ ಸುದ್ದಿಗಾರರ ಜೊತೆ ಮಾತನಾಡಿ, “ಪ್ರಧಾನಿ, ಉಪಪ್ರಧಾನ ಮಂತ್ರಿ ಯಾರಾಗಬೇಕು ಎಂಬ ವಿಚಾರ ಬಂದಾಗ ಆ ಸಮಾಜದ ನಾಯಕರಿಗೆ ಜಾತಿಯ ಲೇಪನ ಹಚ್ಚುವುದು ತಪ್ಪು. ಅವರೂ ಸಮರ್ಥರಲ್ಲವಾ? ಆ ಸಮುದಾಯದವರ (ಪರಿಶಿಷ್ಟ ಜಾತಿ) ದಕ್ಷತೆ ನೋಡುವುದಿಲ್ಲವಾ?” ಎನ್ನುವ ಮೂಲಕ ತಮ್ಮ ತಂದೆ ಪ್ರಧಾನಿ ಹುದ್ದೆಗೆ ಅರ್ಹ ವ್ಯಕ್ತಿ ಎಂಬುದನ್ನು ಸೂಚ್ಯವಾಗಿ ಹೇಳಿದ್ದಾರೆ.

“ನರೇಂದ್ರ ಮೋದಿ ಅವರಿಗೆ ಸ್ಥಾನ ಮಾನ ಕೊಡಬೇಕಾದರೆ ಅವರ ಜಾತಿ ಕೇಳಲಿಲ್ಲ. ಅವರು ಎಷ್ಟು ಸಮರ್ಥರು ಎನ್ನುವುದನ್ನು ಕಳೆದ ಹತ್ತು ವರ್ಷಗಳಿಂದ ನೋಡುತ್ತಿದ್ದೇವೆ” ಎಂದರು.

Advertisements

“ಮೈತ್ರಿಕೂಟದ ಅಭ್ಯರ್ಥಿಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಸಂಸತ್ತಿಗೆ ಕಳುಹಿಸುವುದು ನಮ್ಮ ಮುಂದಿರುವ ಮುಖ್ಯ ಗುರಿ. ಯಾರು ಪ್ರಧಾನಿ, ಯಾರು ಉಪ ಪ್ರಧಾನಿ ಎಂಬ ಸವಾಲು ಸದ್ಯಕ್ಕೆ ನಮ್ಮ ಮುಂದೆ ಇಲ್ಲ. ಕಾಂಗ್ರೆಸ್ ತನ್ನ ಸ್ವಂತ ಬಲದ ಮೇಲೆ 200ರಿಂದ 250 ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

1 COMMENT

  1. ರಾಷ್ಟ್ರಪತಿ, ಪ್ರಧಾನಿ, CJI ಇತ್ಯಾದಿ ಹುದ್ದೆಗೆ ಜಾತಿ, ಧರ್ಮ, ವೈಯಕ್ತಿಕ ಜೀವನ ಮುಖ್ಯವಲ್ಲ, ಉದಾಹರಣೆ ಡಾ// ಬಿ ಆರ್ ಅಂಬೇಡ್ಕರ್, ಅಬ್ದುಲ್ ಕಲಾಂ, ಇತ್ಯಾದಿ

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕೃಷಿ ಇಲಾಖೆಯಿಂದ ರೈತರಿಗೆ ಡಿಜಿಟಲ್ ಬಲ: ಬಿಇಎಲ್ ಜೊತೆ ಒಡಂಬಡಿಕೆ

ಕೃಷಿ ಸೇವೆಗಳು ರೈತರಿಗೆ ಇನ್ನಷ್ಟು ಸುಲಭವಾಗಿ ದತ್ತಾಂಶ ಆಧಾರಿತವಾಗಿ ಮತ್ತು ಅವಶ್ಯಕತೆಗೆ...

ಚಿಕ್ಕಮಗಳೂರು l ಸಮಾಜದಲ್ಲಿ ಜಾತಿ,ಧರ್ಮಗಳ ಕಂದಕದ ಗೋಡೆಗಳನ್ನು ತೊಡೆದು ಹಾಕುವುದೇ ನಿಜವಾದ ಸಾಹಿತ್ಯ; ಸಾಹಿತಿ ಮನಸುಳಿ ಮೋಹನ್‌

ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ಕನ್ನಡ ಸಾಹಿತ್ಯ ಪರಿಷತ್ತು ತಾಲ್ಲೂಕು ಸಮಿತಿ...

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

Download Eedina App Android / iOS

X