ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳು: ಕುಲ್‍ಜೀತ್ ಸಿಂಗ್ ಚಾಹಲ್

Date:

Advertisements

ಗೌರವಾನ್ವಿತ ಉಪರಾಷ್ಟ್ರಪತಿಗಳಿಗೆ ಅವಮಾನ ಮಾಡಿದ ವಿಪಕ್ಷಗಳಿಗೆ ಜನತೆ ಮುಂದಿನ ಲೋಕಸಭಾ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿಜೆಪಿ ದೆಹಲಿ ರಾಜ್ಯದ ಪ್ರಧಾನ ಕಾರ್ಯದರ್ಶಿ ಕುಲ್‍ಜೀತ್ ಸಿಂಗ್ ಚಾಹಲ್ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರದ ಬಿಜೆಪಿ ಕಚೇರಿಯಲ್ಲಿ ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, “ವಿರೋಧ ಪಕ್ಷಗಳ ಕ್ರಮವು ಎಲ್ಲ ರೈತ ಸಮುದಾಯ, ಒಬಿಸಿ ಸಮುದಾಯಕ್ಕೆ ಬೇಸರ ತಂದಿದೆ. ನಾನೂ ಒಬಿಸಿ ಸಮುದಾಯಕ್ಕೆ ಸೇರಿದವನು. ಸಂಸದರು ತಮ್ಮ ಸ್ಥಾನಕ್ಕೆ ತಕ್ಕುದಾಗಿ ವರ್ತಿಸುತ್ತಿಲ್ಲ. ಅಧಿಕಾರ ಕಳಕೊಂಡಾಗ ಅವರು ಹತಾಶರಾಗಿ ವರ್ತಿಸುತ್ತಾರೆ” ಎಂದರು.

“ರಾಹುಲ್ ಗಾಂಧಿಯವರು ಉಪರಾಷ್ಟ್ರಪತಿಗಳ ಅಣಕವನ್ನು ವಿಡಿಯೋ ಮಾಡುತ್ತಾರೆ. ಕಾಂಗ್ರೆಸ್ ಪಕ್ಷದ ಹಿರಿಯ ನಾಯಕನಂತೆ, ಸಂಸದನಂತೆ ಅವರ ವರ್ತನೆ ಇಲ್ಲ. ರೈತ ಸಮುದಾಯ ಮತ್ತು ಒಬಿಸಿ ಸಮುದಾಯದ ನಾಯಕ, ಉಪ ರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಹೀಗೆ ಸದನದ ಒಳಗೆ ಮತ್ತು ಹೊರಗೆ ಅವಮಾನಿಸುವುದು ಸರಿಯಲ್ಲ” ಎಂದು ಆಕ್ಷೇಪಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ದೂಷಣೆ ಬಿಡಲಿ, ಆತ್ಮಹತ್ಯೆಯಿಂದ ರೈತರನ್ನು ದೂರ ಮಾಡಲಿ

“ದೆಹಲಿಯಲ್ಲಿ ಮುಂಗೇರಿಲಾಲ್ ಕಿ ಹಸೀನ್ ಸಪ್ನೇ ಎಂಬ ಮಾತಿದೆ. ಮಲ್ಲಿಕಾರ್ಜುನ ಖರ್ಗೆಯವರನ್ನು ಪ್ರಧಾನಿ ಮಾಡುವ ಕನಸು ಕಾಣುವ ಮೊದಲು ಕಾಂಗ್ರೆಸ್ ಅಗತ್ಯ ಸಂಸದರ ಕುರಿತು ಚಿಂತಿಸಬೇಕಿದೆ. ಅದು ಈಗ ಅತ್ಯಂತ ಕಡಿಮೆ ಸಂಸದರನ್ನು ಹೊಂದಿದೆ. ಇದು ಕೇವಲ ಹಗಲುಗನಸಷ್ಟೇ” ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

“ಉತ್ತರದ ದೊಡ್ಡ 3 ರಾಜ್ಯಗಳ ಚುನಾವಣಾ ಫಲಿತಾಂಶವು ಮೋದಿ ಗ್ಯಾರಂಟಿಯ ಪರವಾಗಿದೆ. ಬಿಜೆಪಿ 2019ಕ್ಕಿಂತ ಹೆಚ್ಚು ಸ್ಥಾನಗಳೊಂದಿಗೆ 2024ರಲ್ಲಿ ಅಧಿಕಾರಕ್ಕೆ ಏರಲಿದೆ. ಆಪ್ ಪಕ್ಷದ ಮುಖಂಡರು ಕಡು ಭ್ರಷ್ಟಾಚಾರಿಗಳು ಎಂಬುದು ಸ್ಪಷ್ಟವಾಗಿದೆ. ಲಿಕ್ಕರ್ ಸ್ಕ್ಯಾಮ್‍ನಡಿ ದೆಹಲಿಯ ಕೇಜ್ರಿವಾಲ್ ಸಂಪುಟದ ಇಬ್ಬರು ಸಚಿವರು ಮತ್ತು ಒಬ್ಬ ಸಂಸದ ಈಗಾಗಲೇ ಜೈಲಿನಲ್ಲಿದ್ದು, ಅವರಿಗೆ ಜಾಮೀನೂ ಸಿಗುತ್ತಿಲ್ಲ. ಕೇಜ್ರಿವಾಲ್ ಸರದಿ ಬರಲಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

ದಾವಣಗೆರೆ | ಪರಿಶಿಷ್ಟ ಜಾತಿ ಒಳಮೀಸಲಾತಿ; ಅಲೆಮಾರಿಗಳಿಗೆ ಅನ್ಯಾಯ ವಿರೋಧಿಸಿ ಪ್ರತಿಭಟನೆ

""ಒಳ ಮೀಸಲಾತಿ ಹಂಚಿಕೊಳ್ಳುವಾಗ ನಿರ್ಗತಿಕ ಅಲೆಮಾರಿ ಜಾತಿಗಳನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ. ಅಲೆಮಾರಿ...

ಧರ್ಮಸ್ಥಳ ಪ್ರಕರಣ | ಯೂಟ್ಯೂಬರ್ ಸಮೀರ್ ಎಂ.ಡಿ.ಗೆ ನಿರೀಕ್ಷಣಾ ಜಾಮೀನು: ಬಂಧನ ಭೀತಿಯಿಂದ ಪಾರು

ಧರ್ಮಸ್ಥಳದಲ್ಲಿ ಅಕ್ರಮವಾಗಿ ಶವಗಳನ್ನು ಹೂಳಲಾಗಿದೆ ಎಂಬ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ...

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

Download Eedina App Android / iOS

X