ಉತ್ತರ ಕನ್ನಡ | ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯ; ಆನಂದ್ ಮಹೀಂದ್ರಾ ಮೆಚ್ಚುಗೆ

Date:

Advertisements
  • ಜೀವನೋಪಾಯಕ್ಕಾಗಿ ಹಣ್ಣು ಮಾರುವ ಹಾಲಕ್ಕಿ ಮಹಿಳೆ
  • ʼಹಾಲಕ್ಕಿ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿʼ

ಉತ್ತರ ಕನ್ನಡ ಜಿಲ್ಲೆಯ ಅಂಕೋಲಾ ಬಸ್‌ ನಿಲ್ದಾಣದಲ್ಲಿ ಹಣ್ಣು ಮಾರುವ ಹಾಲಕ್ಕಿ ಮಹಿಳೆಯ‌ ಸ್ವಚ್ಛತಾ ಕಾರ್ಯವನ್ನು ಮಹೀಂದ್ರಾ ಸಂಸ್ಥೆಯ ಮಾಲೀಕ ಆನಂದ್ ಮಹೀಂದ್ರಾ ಕೊಂಡಾಡಿದ್ದಾರೆ.

“ಸದ್ದಿಲ್ಲದೆ ಸ್ವಚ್ಛ ಭಾರತದ ಪ್ರಯತ್ನವನ್ನು ಸಕಾರಗೊಳಿಸುವ ಇಂತಹವರೇ ಸ್ವಚ್ಛ ಭಾರತ್‌ನ ನಿಜವಾದ ನಾಯಕರು. ಇವರ ಕಾರ್ಯವನ್ನು ಗಮನಿಸದಿರುವುದು, ಶ್ಲಾಘಿಸದೆ ಇರುವುದು ದುರಂತ” ಎಂದು ಟ್ವೀಟ್‌ ಮೂಲಕ ಹಾಲಕ್ಕಿ ಮಹಿಳೆಯ ಕಾರ್ಯಕ್ಕೆ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಪಟ್ಟಣದ ಬಸ್ ನಿಲ್ದಾಣದಲ್ಲಿ ಹಾಲಕ್ಕಿ ಮಹಿಳೆಯೊಬ್ಬರು ಜೀವನೋಪಾಯಕ್ಕಾಗಿ ಪ್ರತಿನಿತ್ಯ ಎಲೆಯ ಕೊಟ್ಟೆಯಲ್ಲಿ ನೇರಳೆ ಹಣ್ಣುಗಳನ್ನು ತಂದು ಮಾರಾಟ ಮಾಡುತ್ತಾರೆ. ಮಹಿಳೆಯಿಂದ ನೇರಳೆ ಹಣ್ಣು ಖರೀದಿಸುವ ಪ್ರಯಾಣಿಕರು ಹಣ್ಣುಗಳನ್ನು ತಿಂದು, ಎಲೆಯನ್ನು ಬಸ್‌ನ ಕಿಟಕಿಯಿಂದ ಹೊರಗೆ ಬಿಸಾಡಿ ತೆರಳುತ್ತಾರೆ.

Advertisements

ಹೀಗೆ ಪ್ರಯಾಣಿಕರು ಎಸೆದ ಎಲೆಗಳನ್ನು ಹಾಲಕ್ಕಿ ಮಹಿಳೆ ಆರಿಸಿ ತಂದು ಕಸದ ಬುಟ್ಟಿಗೆ ಹಾಕುವುದನ್ನು ರೂಢಿಸಿಕೊಂಡಿದ್ದಾರೆ. ಹೀಗೆ ಮಹಿಳೆ ಎಲೆ ಹೆಕ್ಕುತ್ತಿದ್ದ ವೇಳೆ ಆದರ್ಶ ಹೆಗಡೆ ಎಂಬುವವರು ಮೊಬೈಲ್‌ನಲ್ಲಿ ವಿಡಿಯೋ ಮಾಡಿ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ವಿಧಾನಸಭಾ ಚುನಾವಣೆ | ಮತದಾನ ಬಹಿಷ್ಕಾರ; ಬ್ಯಾನರ್‌ ಅಳವಡಿಸಿ ಗ್ರಾಮಸ್ಥರ ಆಕ್ರೋಶ

ಈ ವಿಡಿಯೋ ಸಾಕಷ್ಟು ವೈರಲ್ ಆಗಿದ್ದು, ಆನಂದ್ ಮಹೀಂದ್ರಾ ತಮ್ಮ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ. ಅಲ್ಲದೇ ಹಾಲಕ್ಕಿ ಮಹಿಳೆಯ ಕಾರ್ಯವನ್ನು ಶ್ಲಾಘಿಸಿದ್ದು, “ಸ್ವಚ್ಛ ಭಾರತದ ನಿಜವಾದ ನಾಯಕಿ ಇವರೇ. ಈ ಮಹಿಳೆಯನ್ನು ಸಂಪರ್ಕಿಸಿ ಮಾತನಾಡಿಸಲು ಅವಕಾಶ ಮಾಡಿಕೊಡಿ” ಎಂದು ಕೇಳಿಕೊಂಡಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X