ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಮೊಹಮ್ಮದ್ ಶಮಿ ಸೇರಿ 26 ಮಂದಿಗೆ ಪ್ರತಿಷ್ಠಿತ ‘ಅರ್ಜುನ ಪ್ರಶಸ್ತಿ’

Date:

Advertisements

ಯುವಜನ ವ್ಯವಹಾರ ಮತ್ತು ಕ್ರೀಡಾ ಸಚಿವಾಲಯವು 2023ರ ರಾಷ್ಟ್ರೀಯ ಕ್ರೀಡಾ ಪ್ರಶಸ್ತಿಗಳನ್ನು ಪ್ರಕಟಿಸಿದ್ದು, ಅದರಂತೆ ವಿಶ್ವಕಪ್‌ನಲ್ಲಿ ಉತ್ತಮ ಪ್ರದರ್ಶನ ನೀಡಿದ್ದ ಟೀಂ ಇಂಡಿಯಾದ ವೇಗದ ಬೌಲರ್ ಮೊಹಮ್ಮದ್ ಶಮಿ ಸೇರಿದಂತೆ 26 ಕ್ರೀಡಾಪಟುಗಳು ಪ್ರತಿಷ್ಠಿತ ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ.

ಬ್ಯಾಡ್ಮಿಂಟನ್‌ನಲ್ಲಿ ಮಿಂಚಿದ್ದ ಸ್ಟಾರ್ ಜೋಡಿ ಚಿರಾಗ್ ಶೆಟ್ಟಿ ಮತ್ತು ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ ಅವರಿಗೆ ‘ಮೇಜರ್ ಧ್ಯಾನ್ ಚಂದ್ ಖೇಲ್ ರತ್ನ’ ಪ್ರಶಸ್ತಿ ಒಲಿದಿದೆ. ಎಲ್ಲ ಕ್ರೀಡಾಪಟುಗಳಿಗೆ 2024 ರ ಜನವರಿ 9ರಂದು ನಡೆಯಲ್ಲಿರುವ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಪ್ರಶಸ್ತಿಯನ್ನು ಪ್ರದಾನ ಮಾಡಲಿದ್ದಾರೆ.

ಅರ್ಜುನ ಮತ್ತು ಖೇಲ್‌ರತ್ನ ಪ್ರಶಸ್ತಿಗೆ 19 ವಿವಿಧ ಕ್ರೀಡೆಗಳ 28 ಕ್ರೀಡಾಪಟುಗಳನ್ನು ಆಯ್ಕೆ ಮಾಡಲಾಗಿದೆ. ಮೊಹಮ್ಮದ್ ಶಮಿ ಸೇರಿದಂತೆ ಒಟ್ಟು 26 ಆಟಗಾರರು ಅರ್ಜುನ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ. ಇದು ವಿವಿಧ ಕ್ರೀಡೆಗಳ ಪ್ರಮುಖ ಆಟಗಾರರನ್ನು ಒಳಗೊಂಡಿದೆ.

Advertisements

ಅರ್ಜುನ ಪ್ರಶಸ್ತಿಗೆ ಆಯ್ಕೆಯಾದವ ವಿವರ ಹೀಗಿದೆ:

  1. ಓಜಸ್ ಪ್ರವೀಣ್ ದೇವತಾಳೆ: ಬಿಲ್ಲುಗಾರಿಕೆ (ಆರ್ಚರಿ)
  2. ಅದಿತಿ ಗೋಪಿಚಂದ್ ಸ್ವಾಮಿ: ಬಿಲ್ಲುಗಾರಿಕೆ (ಆರ್ಚರಿ)
  3. ಶ್ರೀಶಂಕರ್ ಎಂ: ಅಥ್ಲೆಟಿಕ್ಸ್
  4. ಪಾರುಲ್ ಚೌಧರಿ: ಅಥ್ಲೆಟಿಕ್ಸ್
  5. ಮೊಹಮ್ಮದ್ ಹುಸಾಮುದ್ದೀನ್: ಬಾಕ್ಸಿಂಗ್
  6. ಆರ್ ವೈಶಾಲಿ: ಚೆಸ್
  7. ಮೊಹಮ್ಮದ್ ಶಮಿ: ಕ್ರಿಕೆಟ್
  8. ಅನುಷ್ ಅಗರ್ವಾಲ್: ಕುದುರೆ ಸವಾರಿ
  9. ದಿವ್ಯಾಕೃತಿ ಸಿಂಗ್: ಈಕ್ವೆಸ್ಟ್ರಿಯನ್ ಡ್ರೆಸ್ಸೇಜ್
  10. ದೀಕ್ಷಾ ದಾಗರ್: ಗಾಲ್ಫ್
  11. ಕೃಷ್ಣ ಬಹದ್ದೂರ್ ಪಾಠಕ್: ಹಾಕಿ
  12. ಪುಖ್ರಾಂಬಂ ಸುಶೀಲಾ ಚಾನು: ಹಾಕಿ
  13. ಪವನ್ ಕುಮಾರ್: ಕಬಡ್ಡಿ
  14. ರಿತು ನೇಗಿ: ಕಬಡ್ಡಿ
  15. ನಸ್ರೀನ್: ಖೋ-ಖೋ
  16. ಪಿಂಕಿ: ಲಾನ್ ಬಾಲ್ಸ್
  17. ಐಶ್ವರ್ಯಾ ಪ್ರತಾಪ್ ಸಿಂಗ್ ತೋಮರ್: ಶೂಟಿಂಗ್
  18. ಇಶಾ ಸಿಂಗ್: ಶೂಟಿಂಗ್
  19. ಹರಿಂದರ್ ಪಾಲ್ ಸಿಂಗ್ ಸಂಧು: ಸ್ಕ್ವಾಷ್
  20. ಅಹಿಕಾ ಮುಖರ್ಜಿ: ಟೇಬಲ್ ಟೆನಿಸ್
  21. ಸುನೀಲ್ ಕುಮಾರ್: ಕುಸ್ತಿ
  22. ಶ್ರೀಮತಿ ಆಂಟಿಮ್: ಕುಸ್ತಿ
  23. ನವೋರೆಮ್ ರೋಶಿಬಿನಾ ದೇವಿ: ವುಶು
  24. ಶೀತಲ್ ದೇವಿ: ಪ್ಯಾರಾ ಆರ್ಚರಿ
  25. ಇಲ್ಲೂರಿ ಅಜಯ್ ಕುಮಾರ್ ರೆಡ್ಡಿ: ಅಂಧರ ಕ್ರಿಕೆಟ್
  26. ಪ್ರಾಚಿ ಯಾದವ್: ಪ್ಯಾರಾ ಕ್ಯಾನೋಯಿಂಗ್

ಖೇಲ್ ರತ್ನ ಪ್ರಶಸ್ತಿ

  1. ಚಿರಾಗ್ ಶೆಟ್ಟಿ – ಬ್ಯಾಡ್ಮಿಂಟನ್
  2. ಸಾತ್ವಿಕ್‌ ಸಾಯಿರಾಜ್ ರಾಂಕಿರೆಡ್ಡಿ – ಬ್ಯಾಡ್ಮಿಂಟನ್

ಅತ್ಯುತ್ತಮ ತರಬೇತುದಾರರಿಗೆ ನೀಡುವ ದ್ರೋಣಾಚಾರ್ಯ ಪ್ರಶಸ್ತಿಗೆ(ಸಾಮಾನ್ಯ ವಿಭಾಗ): ಲಲಿತ್ ಕುಮಾ‌ರ್ (ಕುಸ್ತಿ), ಆರ್ ಬಿ ರಮೇಶ್ (ಚೆಸ್), ಮಹಾವೀರ್ ಪ್ರಸಾದ್ ಸೈನಿ (ಪ್ಯಾರಾ ಅಥ್ಲೆಟಿಕ್ಸ್‌), ಶಿವೇಂದ್ರ ಸಿಂಗ್ (ಹಾಕಿ), ಗಣೇಶ್ ಪ್ರಭಾಕರ್ ದೇವುರುಷ್ಕರ್ (ಮಲ್ಲಕಂಬ).

ದ್ರೋಣಾಚಾರ್ಯ ಪ್ರಶಸ್ತಿಯ ಜೀವಮಾನ ಸಾಧನೆ ವಿಭಾಗದಲ್ಲಿ ಜಸ್ಕಿರತ್ ಸಿಂಗ್ ಗ್ರೆವಾಲ್ (ಗಾಲ್ಫ್), ಇ ಭಾಸ್ಕರನ್(ಕಬಡ್ಡಿ), ಜಯಂತ ಕುಮಾ‌ರ್ ಪುಶಿಲಾಲ್ (ಟೇಬಲ್ ಟೆನಿಸ್).

ಜೀವಮಾನ ಸಾಧನೆಗಾಗಿ ಧ್ಯಾನ್ ಚಂದ್ ಪ್ರಶಸ್ತಿಗೆ ಮಂಜೂಷಾ ಕನ್ವರ್ (ಬ್ಯಾಡ್ಮಿಂಟನ್), ವಿನೀತ್ ಕುಮಾರ್ ಶರ್ಮಾ (ಹಾಕಿ), ಕವಿತಾ ಸೆಲ್ವರಾಜ್ (ಕಬಡ್ಡಿ).

ಮೌಲಾನಾ ಅಬುಲ್ ಕಲಾಂ ಆಜಾದ್ (MAKA) ಟ್ರೋಫಿ 2023:

ಗುರು ನಾನಕ್ ದೇವ್ ವಿಶ್ವವಿದ್ಯಾಲಯ, ಅಮೃತಸರ

ಲವಿ ಪ್ರೊಫೆಷನಲ್ ಯೂನಿವರ್ಸಿಟಿ, ಪಂಜಾಬ್ (1ನೇ ರನ್ನರ್-ಅಪ್)

ಕುರುಕ್ಷೇತ್ರ ವಿಶ್ವವಿದ್ಯಾಲಯ, ಕುರುಕ್ಷೇತ್ರ (2ನೇ ರನ್ನರ್ ಅಪ್)

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಹಿಳಾ ವಿಶ್ವಕಪ್‌, ಆಸೀಸ್‌ ಪ್ರವಾಸಕ್ಕೆ ಟೀಂ ಇಂಡಿಯಾ ತಂಡ ಪ್ರಕಟ

ಮುಂದಿನ ತಿಂಗಳು ಭಾರತ ಹಾಗೂ ಶ್ರೀಲಂಕಾದಲ್ಲಿ ನಡೆಯಲಿರುವ ಮಹಿಳೆಯರ ಏಕದಿನ ವಿಶ್ವಕಪ್‌ಗೆ...

ಏಷ್ಯಾಕಪ್​ಗೆ ಅಚ್ಚರಿಯ ಭಾರತ ತಂಡ ಪ್ರಕಟ; ಹಲವರಿಗೆ ಕೊಕ್‌, ಪ್ರಮುಖರ ಆಗಮನ

ಮಹತ್ವದ ಟಿ20 ಏಷ್ಯಾಕಪ್ ಟೂರ್ನಿಗೆ ಭಾರತ ತಂಡವನ್ನು ಪ್ರಕಟಿಸಲಾಗಿದೆ. 15 ಸದಸ್ಯರ...

ಏಷ್ಯನ್ ಚಾಂಪಿಯನ್‌ಶಿಪ್‌ | 10 ಮೀಟರ್ ಏರ್ ಪಿಸ್ತೂಲ್‌ನಲ್ಲಿ ಕಂಚು ಗೆದ್ದ ಮನು ಭಾಕರ್

ಕಝಾಕಿಸ್ತಾನದ ಶಿಮ್ಕೆಂಟ್‌ನಲ್ಲಿ ನಡೆದ ಏಷ್ಯನ್ ಶೂಟಿಂಗ್ ಚಾಂಪಿಯನ್‌ಶಿಪ್‌ನಲ್ಲಿ ಮಹಿಳೆಯರ 10 ಮೀಟರ್...

ಬುಲಾ ಚೌಧರಿ ಪದ್ಮಶ್ರೀ ಪದಕ ಕಳವು: ‘ಎಲ್ಲವನ್ನೂ ಕಳೆದುಕೊಂಡೆ’ ಎಂದ ಈಜುಪಟು

ಪಶ್ಚಿಮ ಬಂಗಾಳದ ಹೂಗ್ಲಿ ಜಿಲ್ಲೆಯ ತಮ್ಮ ಪೂರ್ವಜರ ಮನೆಯಿಂದ ಪದ್ಮಶ್ರೀ ಪದಕ...

Download Eedina App Android / iOS

X