ಮೂರನೇ ಏಕದಿನ | 78 ರನ್‌ಗಳ ಜಯದೊಂದಿಗೆ ಹರಿಣಗಳ ನಾಡಿನಲ್ಲಿ ಏಕದಿನ ಸರಣಿ ಗೆದ್ದ ಟೀಮ್ ಇಂಡಿಯಾ

Date:

Advertisements

ದಕ್ಷಿಣ ಆಫ್ರಿಕಾದ ವಿರುದ್ಧ ಪಾರ್ಲ್‌ನಲ್ಲಿ ನಡೆದ ಮೂರನೇ ಹಾಗೂ ಕೊನೆಯ ಏಕದಿನ ಪಂದ್ಯದಲ್ಲಿ ಸಂಜು ಸ್ಯಾಮ್ಸನ್ ಅವರ ಶತಕ ಮತ್ತು ಅರ್ಷದೀಪ್ ಸಿಂಗ್ ಅವರ ಅಮೋಘ ಬೌಲಿಂಗ್‌ನ ನೆರವಿನಿಂದ ಟೀಮ್ ಇಂಡಿಯಾವು 78 ರನ್‌ಗಳ ಭರ್ಜರಿ ಗೆಲುವು ಸಾಧಿಸಿತು. ಆ ಮೂಲಕ ಸರಣಿಯನ್ನು 2-1 ಅಂತರದಿಂದ ಗೆದ್ದುಕೊಂಡಿದೆ.

ಟಾಸ್ ಗೆದ್ದ ಆತಿಥೇಯ ದಕ್ಷಿಣ ಆಫ್ರಿಕಾ ತಂಡವು, ಕೆ ಎಲ್ ರಾಹುಲ್ ನೇತೃತ್ವದ ಟೀಮ್ ಇಂಡಿಯಾವನ್ನು ಬ್ಯಾಟಿಂಗ್‌ಗೆ ಇಳಿಸಿತು.

ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಸಂಜು ಸ್ಯಾಮ್ಸನ್ ಅವರ ಚೊಚ್ಚಲ ಏಕದಿನ ಶತಕ (108) ಹಾಗೂ ತಿಲಕ್ ವರ್ಮಾ ಅವರ ಅರ್ಧ ಶತಕದ ನೆರವಿನಿಂದ ತಂಡವು ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 296 ರನ್‌ ಗಳಿಸುವ ಮೂಲಕ ಸವಾಲಿನ ಗುರಿಯನ್ನು ನೀಡಿತ್ತು.

Advertisements

ಗುರಿ ಬೆನ್ನಟ್ಟಿದ ಆತಿಥೇಯ ತಂಡವು 45.5 ಓವರ್‌ಗಳಲ್ಲಿ 218 ರನ್ ಗಳಿಸಲಷ್ಟೇ ಸಾಧ್ಯವಾಯಿತು. ಆ ಮೂಲಕ 78 ರನ್‌ಗಳಿಂದ ಸೋಲೊಪ್ಪಿಕೊಂಡಿತು. ಟೀಮ್ ಇಂಡಿಯಾದ ಎಡಗೈ ವೇಗಿ ಅರ್ಷದೀಪ್ ಸಿಂಗ್ ಅವರು ಕೇವಲ 30ಕ್ಕೆ4 ವಿಕೆಟ್ ಕಬಳಿಸಿ ಮಿಂಚಿದರು. ಇವರಿಗೆ ಆವೇಶ್ ಖಾನ್ (45ಕ್ಕೆ2) ಮತ್ತು ವಾಷಿಂಗ್ಟನ್ ಸುಂದರ್ (38ಕ್ಕೆ2) ಉತ್ತಮ ಸಾಥ್ ನೀಡಿದರು.

ದಕ್ಷಿಣ ಆಫ್ರಿಕಾ ಪರವಾಗಿ ಟೋನಿ ಡಿ ಝಾರ್ಜಿ 81 ರನ್ ಹಾಗೂ ಮಾರ್ಕರಮ್ 36 ರನ್ ಗಳಿಸಿದರು.

ಸಂಕ್ಷಿಪ್ತ ಸ್ಕೋರ್ ವಿವರ:
ನಿಗದಿತ 50 ಓವರ್‌ಗಳಲ್ಲಿ 8 ವಿಕೆಟ್‌ಗಳಿಗೆ 296
ರಜತ್ ಪಾಟೀದಾರ್ 22
ಸಂಜು ಸ್ಯಾಮ್ಸನ್ 108
ಕೆ.ಎಲ್. ರಾಹುಲ್ 21
ತಿಲಕ್ ವರ್ಮಾ 52
ರಿಂಕು ಸಿಂಗ್ 38

ಆಫ್ರಿಕಾ ಬೌಲಿಂಗ್:
ನಾಂದ್ರೆ ಬರ್ಗರ್ 64ಕ್ಕೆ 2
ಬೆರನ್ ಹೆನ್ರಿಕ್ಸ್ 63ಕ್ಕೆ 3

ದಕ್ಷಿಣ ಆಫ್ರಿಕಾ:
45.5 ಓವರ್‌ಗಳಲ್ಲಿ 218
ಟೋನಿ ಡಿ ಝಾರ್ಜಿ 81
ಏಡನ್ ಮಾರ್ಕರಂ 36
ಹೆನ್ರಿಚ್ ಕ್ಲಾಸೆನ್ 21

ಟೀಮ್ ಇಂಡಿಯಾ ಬೌಲಿಂಗ್:
ಅರ್ಷದೀಪ್ ಸಿಂಗ್ 30ಕ್ಕೆ 4, ಆವೇಶ್ ಖಾನ್ 45ಕ್ಕೆ 2, ವಾಷಿಂಗ್ಟನ್ ಸುಂದರ್ 38ಕ್ಕೆ 2

ಫಲಿತಾಂಶ:
ಭಾರತಕ್ಕೆ 78 ರನ್‌ಗಳ ಜಯ 2-1ರಿಂದ ಸರಣಿ ಗೆಲುವು

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸಾಗರ್ ಧನಕರ್ ಹತ್ಯೆ ಪ್ರಕರಣ: ಕುಸ್ತಿಪಟು ಸುಶೀಲ್ ಕುಮಾರ್ ಜಾಮೀನು ರದ್ದು

ಜೂನಿಯರ್ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ಧನಕರ್ ಹತ್ಯೆ ಪ್ರಕರಣದ ಪ್ರಮುಖ...

ತಾಂತ್ರಿಕ ಕಾರಣದಿಂದ ಯುವಕನಿಗೆ ಸಿಕ್ಕ ಆರ್‌ಸಿಬಿ ಆಟಗಾರನ ಸಿಮ್‌; ಕೊಹ್ಲಿ, ಎಬಿಡಿಯಿಂದ ನಿತ್ಯ ಕರೆ!

ಛತ್ತೀಸ್‌ಗಢದ ಯುವಕನೊಬ್ಬನಿಗೆ ತಾಂತ್ರಿಕ ದೋಷದಿಂದಾಗಿ ಆರ್‌ಸಿಬಿ ತಂಡದ ನಾಯಕ ರಜತ್ ಪಾಟೀದಾರ್‌ರ...

ಬಿಸಿಸಿಐ ಷರತ್ತಿನಿಂದ ವಿರಾಟ್‌, ರೋಹಿತ್‌ 2027ರ ಏಕದಿನ ವಿಶ್ವಕಪ್‌ ಕನಸು ಕಮರಿ ಹೋಗಲಿದೆಯೇ?

ಟೀಂ ಇಂಡಿಯಾದ ದಿಗ್ಗಜ ಆಟಗಾರರಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ...

ಊಹಾಪೋಹಗಳಿಗೆ ತೆರೆ: ಭಾರತ–ಪಾಕ್‌ ಏಷ್ಯಾಕಪ್‌ ಕ್ರಿಕೆಟ್‌ ಪಂದ್ಯ ರದ್ದಾಗುವುದಿಲ್ಲ

ಪಹಲ್ಗಾಮ್‌ ಉಗ್ರ ದಾಳಿಯ ನಂತರ ಭಾರತ–ಪಾಕಿಸ್ತಾನದ ನಡುವಿನ ಬಿಕ್ಕಟ್ಟು ಹೆಚ್ಚಾದ ಹಿನ್ನೆಲೆಯಲ್ಲಿ...

Download Eedina App Android / iOS

X