ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ: ‘ಮಾಮಣ್ಣನ್’ ಚಿತ್ರದ ನಟ ವಡಿವೇಲುಗೆ ಅತ್ಯುತ್ತಮ ನಟ ಪ್ರಶಸ್ತಿ

Date:

Advertisements

ಚೆನ್ನೈ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ‘ಮಾಮಣ್ಣನ್’ ಚಿತ್ರದ ಅಭಿಯನಕ್ಕಾಗಿ ನಟ ವಡಿವೇಲು ಅವರಿಗೆ ಅತ್ಯುತ್ತಮ ನಟ ಪ್ರಶಸ್ತಿ ಲಭಿಸಿದೆ. ಡಿಸೆಂಬರ್ 21 ರಂದು ನಡೆದ ಸಮಾರಂಭದಲ್ಲಿ ಪ್ರಶಸ್ತಿ ಪಡೆದ ವಡಿವೇಲು ಅವರು ಪ್ರಶಸ್ತಿಯನ್ನು ಚಿತ್ರದ ನಿರ್ದೇಶಕ ಮಾರಿ ಸೆಲ್ವರಾಜ್ ಅವರಿಗೆ ಅರ್ಪಿಸಿದರು.

ನಟ-ರಾಜಕಾರಣಿ ಉದಯನಿಧಿ ಸ್ಟಾಲಿನ್ ನಟಿಸಿದ ಮಾಮಣ್ಣನ್ ಈ ವರ್ಷದ ಆರಂಭದಲ್ಲಿ ಬಿಡುಗಡೆಯಾಗಿ ಮತ್ತು ವಿಮರ್ಶಾತ್ಮಕವಾಗಿ ಮೆಚ್ಚುಗೆಯನ್ನು ಪಡೆಯಿತು. ಮಾಮಣ್ಣನ್ ಚಿತ್ರದ ಪ್ರಮುಖ ಪಾತ್ರಧಾರಿ ವಡಿವೇಲು ಸೇಲಂನ ಮೀಸಲು ಕ್ಷೇತ್ರದಿಂದ ದಲಿತ ಶಾಸಕನಾಗಿ ನಟಿಸಿದ್ದಾರೆ. ಉದಯನಿಧಿ ಅವರು ಶಾಸಕನ ಮಗನ ಪಾತ್ರಧಾರಿಯಾಗಿ ಜಾತಿ ವಿರೋಧಿ ಯುವಕನ ಪಾತ್ರವನ್ನು ನಿರ್ವಹಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸುಪ್ರೀಮ್ ಕೋರ್ಟ್ ತೀರ್ಪಿಗೆ ತಿರುಮಂತ್ರ ಹಾಕಿದ ಮೋದಿ ಸರ್ಕಾರ!

Advertisements

ಪ್ರಶಸ್ತಿ ಸ್ವೀಕರಿಸಿ ಮಾತನಾಡಿದ ವಡಿವೇಲು, ”ನನಗಿಂತ ಈ ಗೆಲುವು ನಿರ್ದೇಶಕ ಮಾರಿ ಸೆಲ್ವರಾಜ್ ಅವರದ್ದು. ಅವರು ಚಿಕ್ಕ ವಯಸ್ಸಿನಿಂದಲೂ ಬುದ್ಧಿಜೀವಿ. ಅವರು ಬಾಲ್ಯದಲ್ಲಿ ಎದುರಿಸಿದ ಹೋರಾಟಗಳ ಬಗ್ಗೆ ಮಾತನಾಡಿದ್ದಾರೆ ಮತ್ತು ಪ್ರತಿ ದೃಶ್ಯಕ್ಕೂ ಅವರು ಎಲ್ಲವನ್ನೂ ತೆರೆದಿಟ್ಟಿದ್ದಾರೆ. ಮಾಮಣ್ಣನ್ ತುಂಬ ಜನರನ್ನು ತಲುಪಿರುವ ಬಗ್ಗೆ ನನಗೆ ಹೆಮ್ಮೆಯ ಜೊತೆಗೆ ಸಂತೋಷವಾಗಿದೆ. ನಿರ್ದೇಶಕರು ತಮ್ಮದೇ ಆದ ನೋವು ಮತ್ತು ಬಡವರ ನೋವನ್ನು ತೋರಿಸಿದ್ದಾರೆ. ಇದು ನನ್ನ ಪ್ರಶಸ್ತಿಯಲ್ಲ, ಮಾರಿ ಸೆಲ್ವರಾಜ್ ಅವರದು. ಇದು ಉದಯನಿಧಿ ಮತ್ತು ನಿರ್ಮಾಣ ಸಂಸ್ಥೆಯ ಪ್ರಶಸ್ತಿ. ಎಲ್ಲದರ ಜೊತೆಗೆ ಇದು ಅಭಿಮಾನಿಗಳ ಪ್ರಶಸ್ತಿ” ಎಂದು ಹೇಳಿದರು.

ವಡಿವೇಲು ಅವರು ಪ್ರಧಾನವಾಗಿ ಹಾಸ್ಯ ನಟರಾಗಿದ್ದರೂ ಮಾಮಣ್ಣನ ಚಿತ್ರದಲ್ಲಿ ಗಂಭೀರವಾದ ಪಾತ್ರವನ್ನು ನಿರ್ವಹಿಸಿರುವ ಸವಾಲುಗಳನ್ನು ಈ ಸಂದರ್ಭದಲ್ಲಿ ವಿವರಿಸಿದರು. ಚಿತ್ರಕ್ಕೆ ಎ ಆರ್ ರೆಹಮಾನ್ ಸಂಗೀತ ಸಂಯೋಜಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉತ್ತರಾಖಂಡ | ಕಪಾಳ ಮೋಕ್ಷ ಮಾಡಿದ ಶಿಕ್ಷಕನಿಗೆ ಗುಂಡು ಹಾರಿಸಿದ ವಿದ್ಯಾರ್ಥಿ

ತರಗತಿಯಲ್ಲಿ ಕಪಾಳ ಮೋಕ್ಷ ಮಾಡಿದ ಕಾರಣಕ್ಕೆ ಕುಪಿತಗೊಂಡ ವಿದ್ಯಾರ್ಥಿಯೊಬ್ಬ ತನ್ನ ಶಿಕ್ಷಕನ...

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

Download Eedina App Android / iOS

X