ರಾಯಚೂರು | ಟಿಯುಸಿಐ ಜಿಲ್ಲಾ ಸಮ್ಮೇಳನ

Date:

Advertisements

ರಾಯಚೂರು ಜಿಲ್ಲೆ ಸಿಂಧನೂರು ನಗರದ ಎಪಿಎಂಸಿಯ ಶ್ರಮಿಕ ಭವನದಲ್ಲಿ ಟ್ರೇಡ್ ಯೂನಿಯನ್ ಸೆಂಟರ್ ಆಫ್ ಇಂಡಿಯಾ (ಟಿಯುಸಿಐ) ರಾಯಚೂರು ಜಿಲ್ಲಾ 9ನೇ ಜಿಲ್ಲಾ ಸಮ್ಮೇಳನ ನಡೆಯಿತು.

ಸಮ್ಮೇಳನ ಉದ್ಘಾಟಿಸಿ ಮಾತನಾಡಿದ ಟಿಯುಸಿಐ ರಾಜ್ಯಾಧ್ಯಕ್ಷ, ಆರ್.ಮಾನಸಯ್ಯ, ಕೇಂದ್ರದ ಆರ್‌ಎಸ್‌ಎಸ್ ನೇತೃತ್ವದ ಫ್ಯಾಸಿಸ್ಟ್ ಆಳ್ವಿಕೆಯಿಂದ ಕಾರ್ಮಿಕ ವರ್ಗದ ಹಕ್ಕುಗಳು, ಕಾನೂನುಗಳನ್ನು ಮರೆ ಮಾಚುತ್ತಿವೆ. ಕಾರ್ಮಿಕರನ್ನು ಗುಲಾಮಗಿರಿಗೆ ತಳ್ಳುವ ಏರ್ಪಾಡನ್ನು ಮೋದಿ ಆಡಳಿತ ಸಿದ್ದಮಾಡಿಕೊಳ್ಳುತ್ತಿದೆ ಎಂದರು.

44 ಕಾರ್ಮಿಕ ಕಾನೂನುಗಳ ಬದಲಾಗಿ ನಾಲ್ಕು ಕಾರ್ಮಿಕ ಸಂಹಿತೆಗಳನ್ನು ಜಾರಿಗೊಳಿಸಿ, ಕಾರ್ಪೊರೇಟ್ ಬಂಡವಾಳಕ್ಕೆ ದೇಶದ ಸಂಪನ್ಮೂಲವನ್ನು ಧಾರೆ ಎರೆಯುತ್ತಾ, ಕಾರ್ಮಿಕ ವರ್ಗದ ವಿನಾಶಕ್ಕೆ ಹಾದಿಯನ್ನು ಸುಗಮಗೊಳಿಸುತ್ತಲಿದೆ. ಕಾರ್ಮಿಕರು ತನ್ನ ವರ್ಗ ಮತ್ತು ಹಕ್ಕುಗಳು ಹಾಗೂ ಕಾನೂನುಗಳನ್ನು ರಕ್ಷಿಸಿಕೊಳ್ಳಲು ಜೀವನ್ಮರಣದ ಹೋರಾಟಗಳಿಗೆ ಹೆಗಲೊಡ್ಡಬೇಕೆಂದು  ಕಾರ್ಯಕರ್ತರಿಗೆ ಕರೆ ನೀಡಿದರು.

Advertisements

ಹಟ್ಟಿ ಚಿನ್ನದ ಗಣಿ, ತುಂಗಭದ್ರ ನೀರಾವರಿ, ವಸತಿ ನಿಲಯ, ಉದ್ಯೋಗ ಖಾತರಿ, ಆಟೋ, ಹಮಾಲಿ, ಬೀದಿಬದಿ ವ್ಯಾಪಾರಿ, ವೈದ್ಯಕೀಯ ಸೇರಿದಂತೆ ಕಾರ್ಮಿಕರನ್ನೊಳಗೊಂಡು ಜಿಲ್ಲೆಯ ಏಳು ತಾಲೂಕುಗಳ ಕಾರ್ಮಿಕ, ಕಾರ್ಮಿಕರ ಪ್ರತಿನಿಧಿಗಳು ಸಮ್ಮೇಳನದಲ್ಲಿ ಪಾಲ್ಗೊಂಡಿದ್ದರು.

ಜಿ.ಅಮರೇಶ, ಡು.ಕೆ. ಲಿಂಗಸೂಗೂರು, ಮಾಬುಸಾಬ ಬೆಳ್ಳಟ್ಟಿ, ನೇತೃತ್ವದ ಅಧ್ಯಕ್ಷೀಯ ಮಂಡಳಿ, ಗುಡುದಪ್ಪ ಭಂಡಾರಿ, ಎಚ್.ಆರ್. ಹೊಸಮನಿಯವರ ದಸ್ತಾವೇಜು ಸಮಿತಿ, ಆರ್. ಮಾನಸಯ್ಯ, ಎಂ.ಡಿ. ಅಮೀರ ಅಲಿ, ಚಿನ್ನಪ್ಪ ಕೊಟ್ರಿಕಿ, ಎಂ.ಗಂಗಾಧರ ಇನ್ನಿತರರು ಹಾಜರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಬಳ್ಳಾಪುರ | ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಎಲ್ಲರೂ ಕೈಜೋಡಿಸಿ: ಹಿರಿಯ ನ್ಯಾ. ಶಿಲ್ಪಾ

ಜಾಗತೀಕರಣ ಯುಗದಲ್ಲಿ ನಮ್ಮ ಜಾಗೃತಿ ನಮಗೆ ಗುರುವಾಗಬೇಕು. ಪೋಷಕರು ಮಕ್ಕಳನ್ನು...

ತುಮಕೂರು | ಒಳ ಮೀಸಲಾತಿ : ಅಲೆಮಾರಿಗಳಿಗೆ ನ್ಯಾಯ ಸಮ್ಮತ ಪಾಲು ನೀಡಲು ಒತ್ತಾಯ

ಒಳ ಮೀಸಲಾತಿ ಕಲ್ಪಿಸುವಲ್ಲಿ ಸೂಕ್ಷ್ಮ, ಅತಿಸೂಕ್ಷ್ಮ ಅಲೆಮಾರಿಯ 59 ಸಮುದಾಯಗಳಿಗೆ ಆಗಿರುವ...

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

Download Eedina App Android / iOS

X