ಬೆಂಗಳೂರು | ಮನೆ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿ ಮೇಲೆ ಹಲ್ಲೆ: ದೂರು ದಾಖಲು

Date:

Advertisements

ಮನೆಯ ಮುಂದೆ ಗಾಡಿ ನಿಲ್ಲಿಸಿದ್ದಕ್ಕೆ ವ್ಯಕ್ತಿಯೊಬ್ಬರ ಮೇಲೆ ಅಪ್ಪ-ಮಗ ಮನಸೋ ಇಚ್ಛೆ ಹಲ್ಲೆ ಮಾಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಈ ಘಟನೆ ಬೆಂಗಳೂರಿನ ಆರ್‌ ಆರ್‌ ನಗರದ ಜವರೇಗೌಡ ನಗರದಲ್ಲಿ ಡಿ.20ರಂದು ನಡೆದಿದೆ. ಮೋಹನ್ ಗೌಡ ಹಾಗೂ ಆತನ ಮಗ ತೇಜಸ್ ಆರೋಪಿಗಳು. ಕೃಷ್ಣಪ್ಪ ಹಲ್ಲೆಗೊಳಗಾದ ವ್ಯಕ್ತಿ.

ಜವರೇಗೌಡ ನಗರದ 7 ನೇ ಕ್ರಾಸ್​ನಲ್ಲಿ ಮೋಹನ್‌ ಗೌಡ ಮತ್ತು ಕೃಷ್ಣಪ್ಪ ಅವರಿಬ್ಬರ ಮನೆ ಅಕ್ಕ-ಪಕ್ಕದಲ್ಲಿ ಇದೆ. ಮನೆಯ ಮುಂದೆ ಗಾಡಿ ನಿಲ್ಲಿಸುವ ವಿಚಾರಕ್ಕೆ ಕೃಷ್ಣಪ್ಪ ಮತ್ತು ಮೋಹನ್ ಗೌಡ ಮಧ್ಯೆ ಪದೇಪದೆ ಗಲಾಟೆ ನಡೆಯುತ್ತಿತ್ತು. ಡಿ.20ರಂದು ಕೃಷ್ಣಪ್ಪ ತನ್ನ ಟಾಟಾ ಏಸ್ ಗಾಡಿಯನ್ನು ಮೋಹನ್ ಗೌಡ ಅವರ ಮನೆ ಮುಂದೆ ನಿಲ್ಲಿಸಿದ್ದರು.

Advertisements

ಈ ವೇಳೆ ಮೋಹನ್ ಗೌಡ ಅವರ ಮನೆಯ ಸೀಟ್​ಗೆ ಗಾಡಿ ತಾಗಿದೆ. ಇದಕ್ಕೆ ಕೋಪಗೊಂಡು ಜಗಳ ಆರಂಭಿಸಿದ ಪಕ್ಕದ ಮನೆಯ ಮೋಹನ್ ಗೌಡ ಹಾಗೂ ಆತನ ಮಗ ತೇಜಸ್ ಗೌಡ ಕೃಷ್ಣಪ್ಪ ಅವರ ಮೇಲೆ ಮನಸೋ ಇಚ್ಛೆ ಹಲ್ಲೆ ಮಾಡಿದ್ದಾರೆ. ಹಲ್ಲೆಯ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.

ಘಟನೆ ಸಂಬಂಧ ಆರ್ ಆರ್ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | 10 ಸರ್ಕಾರಿ ಆಸ್ಪತ್ರೆಗಳ ಮೇಲೆ ಲೋಕಾಯುಕ್ತ ದಾಳಿ

ಒಂಟಿ ಮಹಿಳೆಯ ಮನೆಗೆ ನುಗ್ಗಿ ದರೋಡೆ

ಹಾಡಹಗಲೇ ಒಂಟಿ ಮಹಿಳೆಯ ಮನೆಗೆ ನುಗ್ಗಿ ಮಾರಕಾಸ್ತ್ರ ತೋರಿಸಿ ದರೋಡೆ ಮಾಡಿರುವ ಘಟನೆ ಬೆಂಗಳೂರು ಉತ್ತರ ತಾಲೂಕಿನ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ರಾಜಸ್ಥಾನದ ಮಾಣಿಕ್ ರಾಮ್ ಅವರ ಮನೆಯಲ್ಲಿ ದರೋಡೆ ನಡೆದಿದ್ದು, ಇವರು ಜ್ಯುವೆಲ್ಲರಿ ಶಾಪ್ ಇಟ್ಟುಕೊಂಡಿದ್ದರು.

ಮಾಣಿಕ್ ರಾಮ್ ಜ್ಯುವೆಲ್ಲರಿ ಶಾಪ ಇಟ್ಟಿರುವ ಬಗ್ಗೆ ತಿಳಿದಿದ್ದ ನಾಲ್ವರು ಅಪಾರ ಪ್ರಮಾಣದ ಹಣ, ಬಂಗಾರ, ಬೆಳ್ಳಿ ಸಿಗುತ್ತದೆ ಎಂದು ರಾಮ್ ಮನೆಗೆ ದರೋಡೆ ಮಾಡಲು ಮಧ್ಯಾಹ್ನವೇ ನುಗ್ಗಿದ್ದರು.

ಮಾಣಿಕ್ ರಾಮ್ ಪತ್ನಿ ಮಧು ಮನೆಯಲ್ಲಿ ಒಬ್ಬರೇ ಇರುವುದನ್ನು ಕಂಡು ದರೋಡೆ ಮಾಡಲು ಮನೆ ಒಳಗೆ ನುಗ್ಗಿದ್ದ ನಾಲ್ವರು ಆರೋಪಿಗಳಿಗೆ ಸಿಕ್ಕಿದ್ದು ಕೇವಲ ₹5 ಸಾವಿರ. ಜ್ಯೂವೆಲ್ಲರಿ ಅಂಗಡಿಯ ಕೆಲಸದ ಹುಡುಗ ಮನೆಗೆ ಬರುತ್ತಿದ್ದಂತೆಯೇ ಆರೋಪಿಗಳು ಆತನನ್ನು ನೂಕಿ ಪರಾರಿಯಾಗಿದ್ದಾರೆ.

ಈ ಬಗ್ಗೆ ಮಾಹಿತಿ ತಿಳಿದ ಮಾದನಾಯಕನಹಳ್ಳಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X