ರಾಜ್ಯದಲ್ಲಿ ನಾಯಿ ಕಡಿತ ಪ್ರಕರಣಗಳು ಹೆಚ್ಚಳ; ನಾಯಿ ದಾಳಿಗೆ ತುತ್ತಾದ 2.15 ಲಕ್ಷ ಮಂದಿ

Date:

Advertisements

ರಾಜ್ಯದಲ್ಲಿ ಬೀದಿ ನಾಯಿಗಳ ಹಾವಳಿ, ಕಡಿತ ಪ್ರಕರಣಗಳನ್ನು ನಿಯಂತ್ರಿಸಲು ಮಹಾನಗರ ಪಾಲಿಕೆ ಸೇರಿದಂತೆ ಸ್ಥಳೀಯ ಸಂಸ್ಥೆಗಳು ಕಸರತ್ತು ನಡೆಸುತ್ತಲೇ ಇವೆ. ಆದರೂ, ಬೀದಿ ನಾಯಿಗಳ ಅಬ್ಬರವಂತೂ ಕಡಿಮೆಯಾಗಿಲ್ಲ. ಬದಲಾಗಿ, ನಾಯಿ ಕಡಿತದ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಲೇ ಇದೆ. ಆರೋಗ್ಯ ಇಲಾಖೆ ನಾಯಿ ಕಡಿತದ ಅಂಕಿಅಂಶಗಳನ್ನು ಬಿಡುಗಡೆ ಮಾಡಿದ್ದು, ಕಳೆದ ವರ್ಷಕ್ಕಿಂತ ಈ ವರ್ಷ ಹೆಚ್ಚು ಪ್ರಕರಣಗಳು ದಾಖಲಾಗಿವೆ ಎಂದು ಹೇಳಿದೆ.

2023ರ ಜನವರಿ 1ರಿಂದ ನವೆಂಬರ್ ಅಂತ್ಯದವರೆಗೆ 2,15,403 ಲಕ್ಷ ಮಂದಿ ನಾಯಿ ಕಡಿತಕ್ಕೆ ತುತ್ತಾಗಿದ್ದಾರೆ. ಅವರಲ್ಲಿ ಸುಮಾರು ಶೇ.10ರಷ್ಟು ಮಂದಿ ನಾಕು ನಾಯಿಗಳ ಕಿಡಿತದಿಂದ ಗಾಯಗೊಂಡಿದ್ದಾರೆ ಎಂದು ಇಲಾಖೆಯ ವರದಿ ಹೇಳಿದೆ. ಈ ಅಂಕಿಅಂಶಗಳ ಪ್ರಕಾರ ದಿನಕ್ಕೆ ಸರಾಸರಿ 700 ಮಂದಿ ನಾಯಿ ಕಡಿತಕ್ಕೆ ತುತ್ತಾಗಿದ್ದಾರೆ.

ಬೆಂಗಳೂರಿನಲ್ಲಿಯೇ 15,000 ಮಂದಿಗೆ ನಾಯಿಗಳ ಕಡಿದಿವೆ. ಇನ್ನು ದಕ್ಷಣ ಕನ್ನಡ ಜಿಲ್ಲೆಯಲ್ಲಿ 11,500 ಪ್ರಕರಣಗಳು ದಾಖಲಾಗಿದ್ದು, ಎರಡನೇ ಸ್ಥಾನದಲ್ಲಿದೆ. ಉಡುಪಿ 11,000, ಚಿತ್ರದುರ್ಗ 10,000 ಹಾಗೂ ಧಾರವಾಡದಲ್ಲಿ 6,000 ಪ್ರಕರಣಗಳು ದಾಖಲಾಗಿದ್ದು, ನಂತರದ ಸ್ಥಾನಗಳಲ್ಲಿವೆ.

Advertisements

“ಬೆಂಗಳೂರಿನ ಬಿಬಿಎಂಪಿ ವ್ಯಾಪ್ತಿಯಲ್ಲಿ ಬೀದಿ ನಾಯಿಗಳಿಗೆ ಆ್ಯಂಟಿ ರೇಬಿಸ್ ಲಸಿಕೆ ನೀಡಲಾಗುತ್ತಿದೆ. ಇದುವರೆಗೆ ನಗರದಲ್ಲಿ 4 ರೇಬಿಸ್ ಪ್ರಕರಣಗಳು ವರದಿಯಾಗಿವೆ. ನಾಯಿ ಕಡಿತಕ್ಕೆ ತುತ್ತಾದವರಿಗೆ ‘ಆ್ಯಂಟಿ ರೇಬಿಸ್ ಲಸಿಕೆ’ ಮತ್ತು ‘ರೇಬಿಸ್ ಇಮ್ಯುನೋಗ್ಲಾಬ್ಯುಲಿನ್’ ಚುಚ್ಚುಮದ್ದನ್ನು ಉಚಿತವಾಗಿ ನೀಡಲಾಗುತ್ತಿದೆ” ಎಂದು ಬಿಬಿಎಂಪಿ ಆರೋಗ್ಯ ವಿಭಾಗದ ಜಂಟಿ ಆಯುಕ್ತ ಡಾ. ರವಿಕುಮಾರ್ ತಿಳಿಸಿದ್ದಾರೆ.

2021ರಲ್ಲಿ ಸುಮಾರು 1.59 ಲಕ್ಷ ನಾಯಿ ಕಡಿತದ ಪ್ರಕರಣಗಳು ದಾಖಲಾಗಿದ್ದವು. 2022ರಲ್ಲಿ ಸುಮಾರು 1.62 ಲಕ್ಷ ಮಂದಿ ನಾಯಿ ಕಡಿತಕ್ಕೆ ತುತ್ತಾಗಿದ್ದರು. ಈ ವರ್ಷ, ನಾಯಿ ಕಡಿತದ ಪ್ರಕರಣಗಳು ಮತ್ತಷ್ಟು ಹೆಚ್ಚಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಗದಗ | ಒಳಮೀಸಲಾತಿ ಅಂಗೀಕಾರ ಸ್ವಾಗತಾರ್ಹ: ಬಸವರಾಜ ಕಡೇಮನಿ

"ಒಳಮೀಸಲಾತಿ ಜಾರಿಗಾಗಿ ಒತ್ತಾಯಿಸಿ ಮೂವತ್ತೈದು ವರ್ಷಗಳ ನಿರಂತರ ಹೋರಾಟದ ಫಲದಿಂದ ರಾಜ್ಯ...

ಬೆಂಗಳೂರಿನಲ್ಲಿ ಬೈಕ್‌ ಟ್ಯಾಕ್ಸಿ ಪುನರಾರಂಭ; ಸೀಮಿತ ಆ್ಯಪ್‌ಗಳಲ್ಲಿ ಮಾತ್ರ ಲಭ್ಯ

ಬೆಂಗಳೂರಿನಲ್ಲಿ ಗುರುವಾರದಿಂದ (ಆಗಸ್ಟ್‌ 21) ಮತ್ತೆ ಬೈಕ್‌ ಟ್ಯಾಕ್ಸಿ ಸೇವೆಗಳು ಪುನಾರಂಭವಾಗಿವೆ....

ಸಕಲೇಶಪುರ | ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣ ಬೆಂಬಲ ನೀಡಬೇಕು: ಬಿ ಆರ್‌ ಪಾಟೀಲ್

ವ್ಯಸನಮುಕ್ತ ರಾಜ್ಯ ಆಂದೋಲನಕ್ಕೆ ಸರ್ಕಾರ ಸಂಪೂರ್ಣವಾಗಿ ಬೆಂಬಲ ನೀಡಿದಾಗ ಮಾತ್ರ ವ್ಯಸನವನ್ನು...

Download Eedina App Android / iOS

X