ಶಿಕ್ಷಣದ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಸಲು ರಾಜ್ಯ ಸರ್ಕಾರ ಬದ್ಧವಾಗಿರಬೇಕು: ನಿರಂಜನಾರಾಧ್ಯ ವಿ ಪಿ

Date:

Advertisements

“ಅಂತಾರಾಷ್ಟ್ರೀಯ ಮತ್ತು ರಾಷ್ಟ್ರೀಯ ಕಾನೂನು ಉಪಕರಣಗಳಿಗೆ ಅನುಗುಣವಾಗಿ ಶಿಕ್ಷಣವು ಪ್ರತಿಯೊಬ್ಬ ವಿದ್ಯಾರ್ಥಿಯ ಮೂಲಭೂತ ಹಕ್ಕಾಗಿದೆ. ಅದರ ಅನುಷ್ಠಾನಕ್ಕೆ ಅನುಕೂಲಕರ ವಾತಾವರಣ ಸೃಷ್ಟಿಯಾಗಬೇಕು. ಇದಕ್ಕೆ ರಾಜ್ಯವು ಬದ್ಧವಾಗಿರಬೇಕು. ಹಿಂದಿನ ಸರ್ಕಾರದ ಆದೇಶವೊಂದರ ಮೂಲಕ ಹಿಜಾಬ್ ನಿಷೇಧಿಸಿ ಉಂಟಾಗಿದ್ದ ಅಡೆತಡೆಗಳನ್ನು ನಿವಾರಿಸುವ ಕ್ರಮಕ್ಕೆ ಸೂಚಿಸಿರುವ ಮುಖ್ಯಮಂತ್ರಿ ಸಿದ್ಧರಾಮಯ್ಯನವರ ಹೇಳಿಕೆ ಸ್ವಾಗತಾರ್ಹ” ಎಂದು ಅಭಿವೃದ್ಧಿ ಶಿಕ್ಷಣ ತಜ್ಞ ನಿರಂಜನಾರಾಧ್ಯ ವಿ ಪಿ ಹೇಳಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು, “ಕರ್ನಾಟಕ ಶಿಕ್ಷಣ ಕಾಯಿದೆ 1983 ಮತ್ತು ಕಾಯಿದೆ ಅಡಿಯಲ್ಲಿ ರಚಿಸಲಾದ ನಿಯಮಗಳು (1995 ಮತ್ತು 1999 ನಿಯಮಗಳು) ಸಮವಸ್ತ್ರ ಗೊತ್ತುಪಡಿಸುವ ಅಧಿಕಾರವನ್ನು ಆಯಾ ಶಾಲೆಗಳು ಮತ್ತು ಶಾಲಾ ಅಭಿವೃದ್ಧಿ ಮಂಡಳಿಗಳಿಗೆ ಯೋಜಿಸಿವೆ” ಎಂದು ತಿಳಿಸಿದ್ದಾರೆ.

“ಹಾಗಾಗಿ, ಅಸ್ತಿತ್ವದಲ್ಲಿರುವ ಶಾಸನ ಮತ್ತು ಸಂಬಂಧಿಸಿದ ನಿಯಮಗಳಿಗೆ ಅಗತ್ಯ ತಿದ್ದುಪಡಿ ತರುವುದು ಈ ನಿಟ್ಟಿನಲ್ಲಿ ಮಹತ್ವದ ಹೆಜ್ಜೆಯಾಗುತ್ತದೆ. ಜತೆಗೆ, ಈ ಪ್ರಕರಣವು ಈಗ ಸರ್ವೋಚ್ಚ ನ್ಯಾಯಾಲಯದ ಉನ್ನತ ಪೀಠದ ಮುಂದೆ ಬಾಕಿ ಉಳಿದಿದೆ” ಎಂದು ಹೇಳಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ನಕಲಿ ದಾಖಲೆ ಸೃಷ್ಟಿಸಿ ಸಾಲ ಪಡೆದು ವಂಚನೆ: ರಾಕ್‌ಲೈನ್ ವೆಂಕಟೇಶ್ ಮಗನ ವಿಚಾರಣೆ

ಸರ್ಕಾರ ಅಂತಿಮ ನಿರ್ಧಾರ ಕೈಗೊಳ್ಳುವ ಮುನ್ನ ಇವೆಲ್ಲವನ್ನೂ ಕೂಲಂಕುಷವಾಗಿ ಪರಿಶೀಲಿಸಿ, ಮುಂದಿನ ಶೈಕ್ಷಣಿಕ ವರ್ಷದ ಪ್ರಾರಂಭಕ್ಕೆ ಮುನ್ನ ಸೂಕ್ತ ನಿರ್ಧಾರ ಕೈಗೊಳ್ಳಬೇಕು ಎಂದು  ಶಿಕ್ಷಣದ ಮೂಲಭೂತ ಹಕ್ಕಿಗಾಗಿ ಜನಾಂದೋಲನಗಳ ಸಮನ್ವಯ ಒತ್ತಾಯಿಸಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

ಮಂಗಳೂರು | ನ್ಯಾಯಬೆಲೆ ಅಂಗಡಿಯಲ್ಲಿ ‘ಗೋಣಿಚೀಲ’ಕ್ಕಾಗಿ ಜಗಳ: ಮಹಿಳೆಯ ವಿಡಿಯೋ ಮಾಡಿ ತೇಜೋವಧೆಗೆ ಯತ್ನ!

ನ್ಯಾಯಬೆಲೆ ಅಂಗಡಿಯಲ್ಲಿ 'ಗೋಣಿಚೀಲ' ನೀಡುವಂತೆ ಪಟ್ಟು ಹಿಡಿದದ್ದಲ್ಲದೇ, ಗ್ರಾಹಕನೋರ್ವ ನ್ಯಾಯಬೆಲೆ ಅಂಗಡಿಯವರ...

ಮೈಸೂರು | ಜಿ ಟಿ ದೇವೇಗೌಡರ ದಲಿತ ವಿರೋಧಿ ಹೇಳಿಕೆ ಖಂಡಿಸಿ ವಿದ್ಯಾರ್ಥಿಗಳಿಂದ ಪ್ರತಿಭಟನೆ

ಮೈಸೂರು ವಿಶ್ವವಿದ್ಯಾನಿಲಯದ ಸಂಶೋಧಕರ ಸಂಘ ಹಾಗೂ ದಲಿತ ವಿದ್ಯಾರ್ಥಿ ಒಕ್ಕೂಟದ ವಿದ್ಯಾರ್ಥಿಗಳು...

Download Eedina App Android / iOS

X