ದಾವಣಗೆರೆ | ವೀರಶೈವ ಸಮಾಜಕ್ಕೆ ಹೊರಗಿನವರಿಗಿಂತ ಒಳಗಿನ ಶತ್ರುಗಳೇ ಹೆಚ್ಚು: ಸಿರಿಗೆರೆ ತರಳಬಾಳು ಶ್ರೀಗಳು

Date:

Advertisements

ವೀರಶೈವ ಸಮಾಜವು ಇಂದು ಅಂಧಃಪತನದತ್ತ ಸಾಗಲು ವೀರಶೈವರೇ ಕಾರಣ ಎಂದು ಸಿರಿಗೆರೆ ತರಳಬಾಳು ಶ್ರೀಗಳು ನೋವಿನ ನುಡಿ ನುಡಿದರು.

ದಾವಣಗೆರೆ ನಗರದ ಎಂಬಿಎಂ ಕಾಲೇಜು ಮೈದಾನದಲ್ಲಿ ಏರ್ಪಡಿಸಿದ್ದ ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನದ ಉದ್ಘಾಟನಾ ಸಮಾರಂಭದ ಸಾನಿಧ್ಯ ವಹಿಸಿ ಮಾತನಾಡಿದರು.

“ವೀರಶೈವ ಸಮಾಜವದರು ಸ್ವಾರ್ಥವನ್ನು ಬದಿಗೆ ಸರಿಸಬೇಕು. ಎಲ್ಲರೂ ಒಂದೇ ಎಂಬ ಭಾವನೆ ಇಟ್ಟುಕೊಂಡು ಸಂಘಟನೆ ಮಾಡಬೇಕು. ನಮ್ಮವರೇ ಶತ್ರುಗಳಂತಾದರೆ, ಯಾವುದೇ ರೀತಿಯ ಸಹಾಯ ಮಾಡದಿದ್ದರೆ ಸಮಾಜ ಒಗ್ಗಟ್ಟಾಗುವುದಾದರೂ ಹೇಗೆ? ಅಭಿವೃದ್ಧಿ ಹೊಂದುವುದಾದರೂ ಹೇಗೆ” ಎಂದು ಪ್ರಶ್ನಿಸಿದರು.

Advertisements

“ಸಮುದಾಯದಲ್ಲಿ ಉಪಪಂಗಡಗಳಾಗಿ ಹೋದರೆ ಯಾವ ಸೌಲಭ್ಯವೂ ಸಿಗುವುದಿಲ್ಲ. ಸರ್ಕಾರಿ ಸೌಲಭ್ಯಗಳನ್ನು ಪಡೆಯಲು ಆಗದು. ವೀರಶೈವ ಲಿಂಗಾಯತ ಸಮುದಾಯದವರಲ್ಲಿ ಸ್ವಾರ್ಥ ಕಡಿಮೆಯಾಗಬೇಕು. ಸಮಾಜದ ಸಂಘಟನೆಗಾಗಿ ಒಂದಾಗಬೇಕು” ಎಂದು ಶ್ರೀಗಳು ಕರೆ ನೀಡಿದರು.

“ಯಾವುದೇ ಉಪಪಂಗಡಗಳಾಗಲೀ, ವೀರಶೈವ ಲಿಂಗಾಯತರು ಒಂದೇ ಎಂಬ ಭಾವನೆ ಮೂಡುವಂತಾಗಬೇಕು. ತಮ್ಮಲ್ಲಿರುವ ಅಲ್ಪವಾದ ಒಳಭೇದವನ್ನು ತ್ಯಜಿಸಿ ಅನ್ಯೋನ್ಯ ಭಾವದಿಂದ ವರ್ತಿಸಿ ಸಮಾಜ ಒಂದಾಗಬೇಕು. ವೀರಶೈವರ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಡಬೇಕು. ನೂರು ಅಧಿವೇಶನದ ಹಿಂದೆ ಕರೆ ಕೊಡಲಾಗಿದೆ. ಆದರೂ ಕಾರ್ಯರೂಪಕ್ಕೆ ಬರುತ್ತಿಲ್ಲ. ಕಾರ್ಯರೂಪಕ್ಕೆ ಬರುವ ಹಾಗೆ ಪ್ರಯತ್ನಿಸಿ ಸಮಾಜ ಸಂಘಟಿಸಿ, ಒಗ್ಗೂಡಿಸಲಿ” ಎಂದು ಸಲಹೆ ನೀಡಿದರು.

“ಇಲ್ಲಿ ದೀಪ ಹಚ್ಚಲಾಗಿದೆ. ಬೇರೆ ಕಡೆಗಳಲ್ಲಿ ದೀಪ ಕಾಣೆಯಾಗಿರಬಹುದು. ಸಮಾಜದ ಸಂಘಟನೆ ದೃಷ್ಟಿಯಿಂದ ದೀಪ ಹಚ್ಚುವ ಜವಾಬ್ದಾರಿ ಪ್ರತಿಯೊಬ್ಬರದ್ದು. ಅದರಲ್ಲಿಯೂ ಇಂದಿನ ಅಧಿವೇಶನದಲ್ಲಿ ಸನ್ಮಾನಿತರಾಗಿರುವವರ ಜವಾಬ್ದಾರಿ ಹೆಚ್ಚಿದೆ. ಈ ನಿಟ್ಟಿನಲ್ಲಿ ಹೆಚ್ಚಿನ ಕೆಲಸ ಮಾಡಿ” ಎಂದು ಸಿರಿಗೆರೆ ಶ್ರೀಗಳು ಕರೆ ನೀಡಿದರು.

ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ ರಾಷ್ಟ್ರೀಯ ಅಧ್ಯಕ್ಷ ಶಾಮನೂರು ಶಿವಶಂಕರಪ್ಪ ಮಹಾಧಿವೇಶನದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆ ವಹಿಸಿದ್ದರು. ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಮಹಾ ಅಧಿವೇಶನಕ್ಕೆ ಸುತ್ತೂರು ಶ್ರೀಕ್ಷೇತ್ರದ ಜಗದ್ಗುರು  ಶಿವರಾತ್ರಿ ದೇಶೀಕೇಂದ್ರ ಸ್ವಾಮೀಜಿ ಚಾಲನೆ ನೀಡಿದರು. ದಿವ್ಯ ಸಾನಿಧ್ಯವನ್ನು ಸಿರಿಗೆರೆ ತರಳಬಾಳು ಜಗದ್ಗುರು ಡಾ.ಶಿವಮೂರ್ತಿ ಶಿವಾಚಾರ್ಯ ಸ್ವಾಮೀಜಿ, ಶ್ರೀ ಶೈಲ ಜಗದ್ಗುರುಗಳು, ಸಿದ್ದಗಂಗಾ ಮಠದ ಸಿದ್ದಲಿಂಗ ಸ್ವಾಮೀಜಿ, ಪಂಚಮಸಾಲಿ ಪೀಠದ ವಚನಾನಂದ, ಮಹಾಸಭಾದ ಪ್ರಧಾನ ಕಾರ್ಯದರ್ಶಿ ಈಶ್ವರಖಂಡ್ರೆ‌, ಸಚಿವ ಎಸ್ ಎಸ್ ಮಲ್ಲಿಕಾರ್ಜುನ್ ಸೇರಿದಂತೆ ‌ಸಮಾಜ‌ದ ಬಾಂಧವರು ಹಾಗೂ‌ ಹಲವು ಮಠಾಧೀಶರು ಇದ್ದರು.

ಈ ಸುದ್ದಿ ಓದಿದ್ದೀರಾ? ದಾವಣಗೆರೆ | ಅಖಿಲ ಭಾರತ ವೀರಶೈವ ಲಿಂಗಾಯತ ಮಹಾಸಭಾದ 24ನೇ ಅಧಿವೇಶನ; ಸಮಾಜದ ಕೆಲವರ ಆಕ್ಷೇಪ

ಮುಖ್ಯ ಅತಿಥಿಗಳಾಗಿ ಶಾಸಕರುಗಳಾದ ಡಿ ಜಿ‌ ಶಾಂತನಗೌಡ, ಶಿವಗಂಗಾ ಬಸವರಾಜ್, ಬಿ ಪಿ‌ ಹರೀಶ್, ಬಿ ಕೆ ಸಂಗಮೇಶ್ವರ, ಅಥಣಿ ವೀರಣ್ಣ, ಮಾಜಿ ಸಚಿವ ಎಸ್ ಎ ರವೀಂದ್ರನಾಥ್, ಅಣಬೇರು ರಾಜಣ್ಣ, ಶಂಕರಬಿದರಿ, ಡಾ. ಎ ಎಚ್ ಶಿವಯೋಗಿ ಸ್ವಾಮಿ, ಎಸ್ ಎಸ್ ಗಣೇಶ್, ಸಚ್ಚಿದಾನಂದ ಮೂರ್ತಿ, ಬಿ ಸಿ ಉಮಾಪತಿ, ತಿಪ್ಪಣ್ಣ ಸೇರಿದಂತೆ ಆಂಧ್ರಪ್ರದೇಶ, ತೆಲಂಗಾಣ, ತಮಿಳುನಾಡಿನಿಂದ ಆಗಮಿಸಿದ್ದ ಸಮಾಜದ ಬಾಂಧವರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X