ಮೈಸೂರು | ಕಲಬೆರಕೆ ಆಹಾರಗಳು ನಮ್ಮನ್ನು ಕಾಯಿಲೆಗೆ ದೂಡುತ್ತಿವೆ: ನಿವೃತ್ತ ಡಿವೈಎಸ್‌ಪಿ

Date:

Advertisements

ನಾವು ಸೇವಿಸುವ ಆಹಾರ, ಔಷಧಗಳು ಹಾಗೂ ದಿನನಿತ್ಯ ಬಳಸುವ ಪದಾರ್ಥಗಳು ಕಲಬೆರಕೆಯಿಂದ ಕೂಡಿದ್ದು, ಅವು ನಮ್ಮ ದೇಹವನ್ನು ಸೇರಿ ಅನೇಕ ರೀತಿಯ ಕಾಯಿಲೆಗಳಿಗೆ ಕಾರಣವಾಗುತ್ತಿವೆ ಎಂದು ನಿವೃತ್ತ ಡಿವೈಎಸ್‌ಪಿ ರಂಗಸ್ವಾಮಿ ಹೇಳಿದ್ದಾರೆ.

ಮೈಸೂರಿನಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತಿ ಆಯೋಜಿಸಿದ್ದ ‘ಗ್ರಾಹಕನೇ ರಾಜ’ ಪುಸ್ತಕ ಬಿಡುಗಡೆ ಕಾರ್ಯಕ್ರಮದಲ್ಲಿ ಪುಸ್ತಕ ಲೋಕಾರ್ಪಣೆ ಮಾಡಿ ಅವರು ಮಾತನಾಡಿದರು. “ಗ್ರಾಹಕರಿಗೆ ತಾವು ನೀಡಿದ ಹಣದ ಮೌಲ್ಯಕ್ಕೆ ಅನುಗುಣವಾಗಿ ವ್ಯಾಪಾರಸ್ಥರು ಗುಣಮಟ್ಟದ ವಸ್ತುಗಳನ್ನು ನೀಡುತ್ತಿಲ್ಲ. ಲಾಭದ ಆಸೆಯಿಂದ ಉದ್ದೇಶಪೂರ್ವಕವಾಗಿ ಗ್ರಾಹಕರನ್ನು ವಂಚಿಸುವ ದೊಡ್ಡ ದಂಧೆಯೇ ನಡೆಯುತ್ತಿದೆ. ಇದ್ದರಿಂದ ಅಮಾಯಕ ಗ್ರಾಹಕರು ಹೆಚ್ಚು ವಂಚಿತರಾಗುತ್ತಿದ್ದಾರೆ” ಎಂದರು.

“ವಸ್ತುಗಳ ಬೆಲೆಯಲ್ಲಿ ಮತ್ತು ತೂಕದಲ್ಲಿ ವ್ಯತ್ಯಾಸ ಕಂಡು ಬಂದರೆ ಸ್ಥಳೀಯ ಕಾನೂನು ಮಾಪನಶಾಸ್ತ್ರ ಇಲಾಖೆಗೆ ದೂರು ನೀಡಬೇಕು. ತಪಿತಸ್ಥರಿಗೆ ಶಿಕ್ಷೆ ನೀಡುವ ಕೆಲಸವನ್ನು ಪ್ರಜ್ಞಾವಂತ ಗ್ರಾಹಕರು ಮಾಡಬೇಕು. ಇವೆಲ್ಲಕ್ಕಿಂತ ಮುಖ್ಯವಾಗಿ ಗ್ರಾಹಕರ ಹಕ್ಕುಗಳ ಬಗ್ಗೆ ನಾವು ತಿಳಿದುಕೊಂಡು ಮತ್ತೊಬ್ಬರಿಗೂ ತಿಳಿಸಿಕೊಡಬೇಕು” ಎಂದರು.

Advertisements

ಕಾರ್ಯಕ್ರಮದಲ್ಲಿ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ಮೈಸೂರು ಘಟಕದ ಅಧ್ಯಕ್ಷ ಚಂದ್ರಶೇಖರ್, ಪತ್ರಕರ್ತ ಅನಿಲ್ ಕುಮಾರ್, ವಕೀಲ ರವೀಂದ್ರ, ಪ್ರಾಂತ ಕಾರ್ಯಕಾರಣಿಯ ಸದಸ್ಯರಾದ ಡಾ ಜಿ ವಿ ರವಿಶಂಕರ್, ಜೆಪಿ ನಗರದ ಹಿರಿಯ ನಾಗರಿಕ ವೇದಿಕೆಯ ಅಧ್ಯಕ್ಷ ಬಸವರಾಜ್, ಪ್ರಧಾನ ಕಾರ್ಯದರ್ಶಿ ವಿಕ್ರಮ ಅಯ್ಯಂಗಾರ್, ಉಪಾಧ್ಯಕ್ಷ ಜಯಕುಮಾರ್, ದೊರೆಸ್ವಾಮಿ ಹಾಗೂ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X