ಕಾಂಗ್ರೆಸ್‌ನಲ್ಲಿ ಲೆಕ್ಕಕ್ಕಿಲ್ಲದ ನಾಯಕ ಹರಿಪ್ರಸಾದ್‌, ಅವರ ಮಾನಸಿಕ ಸ್ಥಿತಿ ಸರಿ ಇಲ್ಲ: ಗೋವಿಂದ ಕಾರಜೋಳ

Date:

Advertisements

ಬಿಕೆ ಹರಿಪ್ರಸಾದ್ ಮಾನಸಿಕ ಸ್ಥಿತಿ ಸರಿ ಇಲ್ಲ. ಹೀಗಾಗಿ ಏನೇನೋ ಮಾತನಾಡುತ್ತಾರೆ. ಈಗ ಅವರು ಕಾಂಗ್ರೆಸ್‌ನಲ್ಲಿ ಲೆಕ್ಕಕ್ಕಿಲ್ಲದ ನಾಯಕ. ಅಲ್ಲಿ ಅವರಿಗೆ ಮಾನಸಿಕ ಹಿಂಸೆ ಅಗುತ್ತಿದೆ ಎಂದು ಮಾಜಿ ಸಚಿವ ಗೋವಿಂದ ಕಾರಜೋಳ ವಾಗ್ದಾಳಿ ನಡೆಸಿದರು.

ಬಿಜೆಪಿಯವರು ಗೋಡ್ಸೆ ಅನುಯಾಯಿಗಳು ಎಂಬ ಹರಿಪ್ರಸಾದ್‌ ಹೇಳಿಕೆ ವಿಚಾರವಾಗಿ ಹುಬ್ಬಳ್ಳಿಯಲ್ಲಿ ಸೋಮವಾರ ಸುದ್ದಿಗಾರರಿಗೆ ಪ್ರತಿಕ್ರಿಯಿಸಿ, “ಹರಿಪ್ರಸಾದ್ ಒಬ್ಬ ಹಿರಿಯ ನಾಯಕ. ಆದರೆ ಅವರು ಆ ರೀತಿ ವರ್ತಿಸುತ್ತಿಲ್ಲ. ಅದಕ್ಕೆ ಹೆಚ್ಚು ಬೆಲೆ ಕೊಡುವ ಅಗತ್ಯವಿಲ್ಲ” ಎಂದರು.

“ಈ ರೀತಿ ಮಾತನಾಡಿದರೆ ಹರಿಪ್ರಸಾದ್‌ ದೊಡ್ಡವರಾಗುವುದಿಲ್ಲ. ಇದು ಅವರ ಹೀನ ಸಂಸ್ಕೃತಿ ತೋರಿಸುತ್ತದೆ. ಕಾಂಗ್ರೆಸ್ ನಲ್ಲಿ ಅವರಿಗೆ ಮಾನಸಿಕ ಹಿಂಸೆ ಆಗಿದೆ. ಹಿಂಸೆ ತಾಳಲಾರದೆ ಈ ರೀತಿಯಾಗಿ ಮಾತಾಡುತ್ತಿದ್ದಾರೆ” ಎಂದು ಕುಟುಕಿದರು.

Advertisements

ಬಿಜೆಪಿಯವರು ಬ್ರಿಟಿಷ್ ಬೂಟ್ ನೆಕ್ಕುವವರು ಎಂಬ ಹೇಳಿಕೆಗೆ ಸಹ ಕಿಡಿಕಾರಿದ ಅವರು, “ನಾಲಿಗೆ ಮೇಲೆ ಹಿಡಿತ ಇರಿಸಿಕೊಂಡು ಮಾತನಾಡಬೇಕು. ಅವರ ಮಾತು ಅವರಿಗೆ ಗೌರವ ತರಲ್ಲ. ಇದರಿಂದ ಅವರ ವ್ಯಕ್ತಿತ್ವ ಬೆಳೆಯಲ್ಲ. ಬೂಟು ನೆಕ್ಕುವುದು ಎಂಬ ಹೇಳಿಕೆ ಸರಿಯಲ್ಲ. ಸಜ್ಜನರಿಗೆ ಆದರ್ಶವಾಗಿರಬೇಕು. ಅವರ ಹೀನ ಸಂಸ್ಕ್ರತಿ ತೋರಿಸುತ್ತದೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಸರ್ವಾಧಿಕಾರದ ಸಾಂಸ್ಥೀಕರಣದತ್ತ ಭಾರತ, ಇನ್ನೊಂದು ಗುಲಾಮಗಿರಿಯತ್ತ ದೇಶ

ಬಸನಗೌಡ ಪಾಟೀಲ್ ಯತ್ನಾಳ್ ಹೇಳಿಕೆ ವಿಚಾರಕ್ಕೆ ಪ್ರತಿಕ್ರಿಯೆ ನೀಡಿ, “ಒಬ್ಬ ಹಿರಿಯರು. ಪಕ್ಷದ ನಾಯಕರು ತೆಗೆದುಕೊಂಡ ತೀರ್ಮಾನಕ್ಕೆ ಗೌರವ ಕೊಡಬೇಕು. ಯುವಕರಿಗೆ ಆದ್ಯತೆ ಕೊಡಬೇಕು ಎಂದು ಮಾಡಿದ್ದಾರೆ. ನಾವು ಎಲ್ಲರೂ ಮಾರ್ಗದರ್ಶನ ಮಾಡಬೇಕು. ನಾನು ಎಲ್ಲ ನಾಯಕರ ಪರವಾಗಿ ಕೇಳಿಕೊಳ್ಳುವೆ. ಕಳೆದ ಚುನಾವಣೆಯಲ್ಲಿ ಸ್ವಲ್ಪ ಪಕ್ಷಕ್ಕೆ ಹಿನ್ನಡೆಯಾಗಿದೆ. ಇದು ಸರಿಯಾಗಬೇಕಾಗಿದೆ” ಎಂದು ತಿಳಿಸಿದರು.

ಮಾಜಿ ಸಚಿವ ವಿ ಸೋಮಣ್ಣ ಕಾಂಗ್ರೆಸ್ ಸೇರ್ಪಡೆ ಆಗತಾರೆ ಎಂಬ ವಿಚಾರವಾಗಿ ಮಾತನಾಡಿ, “ವಿ ಸೋಮಣ್ಣ ಕಾಂಗ್ರೆಸ್ ಸೇರುತ್ತಾರೆ ಎಂಬುದು ಊಹಾಪೋಹ ಮಾತ್ರ. ಕಾಂಗ್ರೆಸ್ ಮುಳುಗುತ್ತಿರುವ ಹಡಗು. ಅದರಲ್ಲಿ ಕೂರಲು ಯಾರೂ ಬಯಸುವುದಿಲ್ಲ. ದೇಶದಲ್ಲಿ ಪಂಚರಾಜ್ಯಗಳ ಚುನಾವಣೆ ಬಳಿಕ ಕಾಂಗ್ರೆಸ್ ಪರಿಸ್ಥಿತಿ ಏನಾಗಿದೆ ಎಂಬುದು ಎಲ್ಲರಿಗೂ ತಿಳಿದಿದೆ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

ಒಳಮೀಸಲಾತಿ | ಅಲೆಮಾರಿ ಸಮುದಾಯಗಳಿಗೆ ಸರ್ಕಾರದಿಂದ ನ್ಯಾಯ ಸಿಗಲಿ: ಬರಗೂರು ರಾಮಚಂದ್ರಪ್ಪ

ರಾಜ್ಯ ಸರ್ಕಾರವು ಜಾರಿಗೊಳಿಸಿರುವ ಒಳಮೀಸಲಾತಿಯಲ್ಲಿ ಅಲೆಮಾರಿ ಸಮುದಾಯಗಳಿಗೆ ನ್ಯಾಯ ಸಿಗಬೇಕು ಎಂದು...

Download Eedina App Android / iOS

X