ಬೆಂಗಳೂರು| ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಪುತ್ರನಿಗೆ ಸಿಸಿಬಿ ಪೊಲೀಸರಿಂದ ನೋಟಿಸ್

Date:

Advertisements

ಮನೆ ಮಾರಾಟ ಮಾಡಲು ಹೊರಟಿರುವ ಮಹಿಳೆಯೊಬ್ಬರ ಆಸ್ತಿ ದಾಖಲೆ ಪತ್ರಗಳನ್ನು ನಕಲು ಮಾಡಿ ಬೆಂಗಳೂರಿನ ಮೂರು ಬ್ಯಾಂಕ್‌ಗಳಲ್ಲಿ ಬರೋಬ್ಬರಿ ₹3.85 ಕೋಟಿ ಸಾಲ ಪಡೆದು ವಂಚಿಸಿದ್ದ ಐವರು ಆರೋಪಿಗಳ ಪೈಕಿ ಚಲನಚಿತ್ರ ನಿರ್ಮಾಪಕ ರಾಕ್‍ಲೈನ್ ವೆಂಕಟೇಶ್ ಪುತ್ರ ಅಭಿಲಾಷ್ ಅವರ ಒಡೆತನದ ಕಂಪೆನಿಯೊಂದಕ್ಕೆ ಹಣ ವರ್ಗಾವಣೆಯಾಗಿರುವುದು ಸಿಸಿಬಿ ತನಿಖೆಯಲ್ಲಿ ತಿಳಿದು ಬಂದಿದ್ದು, ವಿಚಾರಣೆಗೆ ಹಾಜರಾಗುವಂತೆ ಸಿಸಿಬಿ ಪೊಲೀಸರು ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಅಂಬುಜಾಕ್ಷಿ ಅವರ ಜಮೀನಿನ ದಾಖಲೆಗಳನ್ನು ನಕಲು ಮಾಡಿ 3 ಬ್ಯಾಂಕ್‍ಗಳಿಂದ ಸುಮಾರು ₹3.85 ಕೋಟಿಗೂ ಅಧಿಕ ಸಾಲ ಪಡೆದು ವಂಚಿಸಿದ್ದ ಆರೋಪದಡಿ ಭಾಸ್ಕರ್, ಮಹೇಶ, ಅಭಿಷೇಕ್ ಗೌಡ, ಡಿ.ಆರ್ ಅರುಣ್, ಟಿ.ಪಿ ಶಿವಕುಮಾರ್ ಎಂಬುವರನ್ನು ಸಿಸಿಬಿಯ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಬಂಧಿಸಿದ್ದರು.

ಆರೋಪಿಗಳ ವಿಚಾರಣೆ ವೇಳೆ ರಾಕ್‌ಲೈನ್ ವೆಂಕಟೇಶ್ ಪುತ್ರ ಅಭಿಲಾಷ್ ಹೆಸರು ಹೊರಬಂದಿತ್ತು. ಆತನ ಕಂಪನಿಗೆ ಹಣ ಸಂದಾಯವಾದ ಮಾಹಿತಿ ವಿಚಾರಣೆಯಲ್ಲಿ ತಿಳಿದು ಬಂದಿತ್ತು. ₹1.2 ಕೋಟಿ ಹಣ ಸಂದಾಯ ಮಾಡಿದ್ದು ₹25 ಲಕ್ಷ ಕಮಿಷನ್ ಸಿಕ್ಕಿದೆ ಎನ್ನಲಾಗಿತ್ತು.

Advertisements

ಆರೋಪಿಗಳ ಹೇಳಿಕೆ ಬೆನ್ನಲ್ಲೇ ಅಭಿಲಾಷ್‌ ಅವರನ್ನು ಪೊಲೀಸರು ವಿಚಾರಣೆ ನಡೆಸಿದ್ದರು. ‘ಮೋಸದ ಬಗ್ಗೆ ತಿಳಿಯದೆ ಹಣ ಪಡೆದಿದ್ದೆ. ನಾನು ಯಾವುದೇ ಮೋಸ ಮಾಡಿಲ್ಲ’ ಎಂದು ಎಂದು ಸ್ಪಷ್ಟನೆ ನೀಡಿದ್ದಾರೆ ಎಂದು ತಿಳಿದುಬಂದಿದೆ. ಇದೀಗ ಮತ್ತೆ ಸಿಸಿಬಿ ಪೊಲೀಸರು ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡಿದ್ದಾರೆ ಎಂದು ತಿಳಿದುಬಂದಿದೆ.

ಏನಿದು ಪ್ರಕರಣ?

ಅಂಬುಜಾಕ್ಷಿ ನಾಗರಕಟ್ಟಿ (75) ಎಂಬುವವರು ಬೆಂಗಳೂರಿನ ಜೆ.ಪಿ.ನಗರದ 6ನೇ ಹಂತದ ನಿವಾಸಿ. ಇವರು ತಮ್ಮ 1,350 ಚದರ ಅಡಿಯ ನಿವೇಶನವನ್ನು ಮಾರಾಟ ಮಾಡಿ ತಮ್ಮ ಮಗನ ಜತೆಗೆ ವಿದೇಶದಲ್ಲಿ ವಾಸ ಮಾಡಲು ನಿರ್ಧಾರ ಮಾಡಿದ್ದರು. ಈ ಹಿನ್ನೆಲೆ, ಬೆಂಗಳೂರಿನ ಜೆ.ಪಿ.ನಗರದಲ್ಲಿರುವ ತಮ್ಮ ನಿವಾಸವನ್ನು ಮಾರಾಟ ಮಾಡಲು ನಿರ್ಧಾರ ಮಾಡಿ, ಈ ಬಗ್ಗೆ ತಮ್ಮ ನೆರೆಹೊರೆಯವರಿಗೆ ಮಾಹಿತಿ ನೀಡಿದ್ದರು.

ಈ ಸಂಬಂಧ ತಮ್ಮ ಮನೆ ಮಾರಾಟ ಮಾಡುವ ವಿಚಾರವನ್ನು ರಿಯಲ್ ಎಸ್ಟೇಟ್ ಬ್ರೋಕರ್‌ಗಳಾಗಿದ್ದ ಆರೋಪಿಗಳಿಗೆ ತಿಳಿಸಿದ್ದರು. ಇದೇ ನೆಪದಲ್ಲಿ ಅಂಬುಜಾಕ್ಷಿಯವರ ನಿವೇಶನದ ದಾಖಲೆಗಳನ್ನು ಪಡೆದುಕೊಂಡಿದ್ದ ಆರೋಪಿಗಳು, ಅಸಲಿ ದಾಖಲೆಗಳ ರೀತಿಯಲ್ಲೇ ನಿವೇಶನಗಳ ನಕಲಿ ದಾಖಲೆಗಳನ್ನು ಸೃಷ್ಟಿಸಿ, ಅವರ ಸಹಿ ಫೋರ್ಜರಿ ಮಾಡಿ, 3 ಬ್ಯಾಂಕ್‍ಗಳಿಗೆ ನೀಡಿ, ₹3.85 ಕೋಟಿ ಸಾಲ ಪಡೆದುಕೊಂಡಿದ್ದರು.

ಮತ್ತೆ ಕೆಲವು ದಿನಗಳ ನಂತರ, ಕೃಷ್ಣ ತನ್ನ ಸ್ನೇಹಿತ ಮಹೇಶ ಹಾಗೂ ಇತರ ಸ್ನೇಹಿತರೊಂದಿಗೆ ಬ್ಯಾಂಕ್ ಅಧಿಕಾರಿಗಳಂತೆ ಅಂಬುಜಾಕ್ಷಿಯವರ ಮನೆಗೆ ತೆರಳಿದ್ದಾರೆ. ಈ ವೇಳೆ, ಕೃಷ್ಣ ತನಗೆ ಸಾಲ ಬೇಕಿದ್ದು, ಹಾಗಾಗಿ ಅಂಬುಜಾಕ್ಷಿ ಅವರ ಸಹಿ ಬೇಕು ಎಂದು ತಿಳಿಸಿದ್ದಾನೆ. ಈ ಹಿಂದೆ ಬ್ಯಾಂಕ್ ಉದ್ಯೋಗಿಯಾಗಿದ್ದ ಅಂಬುಜಾಕ್ಷಿ ಆತನ ಉದ್ದೇಶವನ್ನು ಅರಿತು ಪ್ರಶ್ನೆ ಮಾಡಿದ್ದಾಳೆ. ಬಳಿಕ, ತನ್ನ ಆಸ್ತಿಯನ್ನು ಆತನಿಗೆ ಮಾರಲು ನಿರಾಕರಿಸಿದ್ದಾಳೆ.

ಸಾಲದ ವಿಚಾರವಾಗಿ ಬ್ಯಾಂಕ್ ಸಿಬ್ಬಂದಿ ಅಂಬುಜಾಕ್ಷಿಯವರನ್ನು ಸಂಪರ್ಕಿಸಿದಾಗ ಆರೋಪಿಗಳ ಕೃತ್ಯ ಬೆಳಕಿಗೆ ಬಂದಿತ್ತು.

ಈ ಸುದ್ದಿ ಓದಿದ್ದೀರಾ? ಬೆಂಗಳೂರು | ಹಳೆ ವೈಷಮ್ಯ: ಸಚಿವರ ಮನೆ ಸಮೀಪ ರೌಡಿಶೀಟರ್​ ಬರ್ಬರ ಹತ್ಯೆ

ನಂತರ ಅಂಬುಜಾಕ್ಷಿ ಅವರ ಹೆಸರಿನಲ್ಲಿ ಈಗಾಗಲೇ ಮೂರು ಬ್ಯಾಂಕ್‌ಗಳಲ್ಲಿ ₹3.85 ಕೋಟಿ ಸಾಲ ಪಡೆದಿರುವ ಬಗ್ಗೆ ತಿಳಿದುಬಂದಿದೆ. ಆರೋಪಿಗಳು ಬ್ಯಾಂಕ್‌ಗಳಿಂದಲೂ ಹಣ ಡ್ರಾ ಮಾಡಿಕೊಂಡಿದ್ದರು.

ಅಂಬುಜಾಕ್ಷಿ ಈ ಬಗ್ಗೆ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಐವರು ಆರೋಪಿಗಳನ್ನು ಬಂಧಿಸಿದ್ದು, ಮತ್ತಿಬ್ಬರು ಬಂಧನಕ್ಕಾಗಿ ಶೋಧ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X