ಜಗದೀಪ್ ಅನುಕರಣೆ ವಿವಾದ : ರಾಹುಲ್ ಮಾಡಿದ್ದರಲ್ಲಿ ತಪ್ಪೇನಿದೆ ಎಂದ ಕಪಿಲ್ ಸಿಬಲ್

Date:

Advertisements

ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಣೆ ಮಾಡಿದ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ವಿವಾದಕ್ಕೆ ಸಂಬಂಧಿಸಿದಂತೆ  ರಾಜ್ಯಸಭಾ ಸದಸ್ಯ ಕಪಿಲ್ ಸಿಬಲ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಪರ ಬ್ಯಾಟಿಂಗ್ ಮಾಡಿದ್ದಾರೆ.

“ಈ ವಿಡಿಯೋ ಮಾಡಿದ್ದರಲ್ಲಿ ತಪ್ಪೇನಿದೆ? ರಾಹುಲ್ ಅವರು ಘಟನೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳಲು ವಿಡಿಯೋವನ್ನು ಬಳಸಿಕೊಂಡಿಲ್ಲ. ಮಿಮಿಕ್ರಿ ಮಾಡುವವರು ಈ ಬಗ್ಗೆ ಯೋಚಿಸಬೇಕಿತ್ತು. ಇದು ರಾಜಕೀಯ ವಿಷಯವಲ್ಲ, ಏಕೆಂದರೆ ಸಾಂವಿಧಾನಿಕ ಹುದ್ದೆಗಳನ್ನು ಯಾವ ಮಟ್ಟಕ್ಕೆ ಅವಮಾನಿಸಲಾಗುತ್ತಿದೆ ಎಂಬುದು ಆತಂಕಕಾರಿಯಾದ ವಿಷಯವಾಗಿದೆ” ಎಂದು ಕಪಿಲ್ ಸಿಬಲ್ ತಮ್ಮ ಮಾಜಿ ಪಕ್ಷದ ನಾಯಕರನ್ನು ಸಮರ್ಥಿಸಿಕೊಂಡಿದ್ದಾರೆ.

ಘಟನೆಯಿಂದ ಅಸಮಾಧಾನಗೊಂಡಿದ್ದ ಜಗದೀಪ್ ಧನಕರ್, ತಮ್ಮ ಉಪ ರಾಷ್ಟ್ರಪತಿ ಹುದ್ದೆಯನ್ನು ಅವಮಾನಿಸಿದ ವಿಪಕ್ಷಗಳ ನಾಯಕರ ವಿರುದ್ಧ ಬೇಸರ ವ್ಯಕ್ತಪಡಿಸಿದ್ದರು. ಇದು ತಮ್ಮನ್ನು ಮಾತ್ರವಲ್ಲ ತಮ್ಮ ಜಾಟ್‌ ಸಮುದಾಯ ಹಾಗೂ ತಮ್ಮಂತೆ ರೈತ ಸಮುದಾಯದಿಂದ ಬಂದವರಿಗೆ ಅವಮಾನ ಮಾಡಲಾಗುತ್ತಿದೆ ಎಂದಿದ್ದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಲಿಷ್ಠರೇ ಜಾತಿಗಣತಿಯನ್ನು ವಿರೋಧಿಸಿದರೆ ಬಾಯಿಲ್ಲದವರ ಪಾಡೇನು?

ಚಳಿಗಾಲದ ಅಧಿವೇಶನದಲ್ಲಿ ಅಶಿಸ್ತಿನ ವರ್ತನೆಯಿಂದ ಅಮಾನತ್ತಾದ ವಿಪಕ್ಷಗಳ ಸಂಸದರು ಸಂಸತ್ತಿನ ದ್ವಾರದ ಮುಂದೆ ಪ್ರತಿಭಟನೆ ನಡೆಸುವ ಸಂದರ್ಭದಲ್ಲಿ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ಉಪರಾಷ್ಟ್ರಪತಿ ಜಗದೀಪ್ ಧನಕರ್ ಅವರನ್ನು ಅನುಕರಣೆ ಮಾಡಿದ್ದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ವಿಡಿಯೋ ಮಾಡಿಕೊಳ್ಳುತ್ತಿದ್ದರು.

ಕಲ್ಯಾಣ್ ಬ್ಯಾನರ್ಜಿ ಮತ್ತೆ ಸಮರ್ಥನೆ

ತಾವು ಮಿಮಿಕ್ರಿ ಮಾಡಿರುವುದನ್ನು ಮತ್ತೆ ಸಮರ್ಥನೆ ಮಾಡಿಕೊಂಡಿರುವ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ, “ಅನುಕರಣೆಯು ಕಲಾ ರೂಪವಾಗಿದ್ದು, ಇದನ್ನು ಸಾವಿರ ಬಾರಿಯೂ ಬೇಕಾದರೆ ಮಾಡುತ್ತೇನೆ. ಇದು ನನ್ನ ಮೂಲಭೂತ ಹಕ್ಕು. ನಾನು ಮಿಮಿಕ್ರಿಯನ್ನು ಮಾಡುತ್ತಲೇ ಇರುತ್ತೇನೆ. ಸಾವಿರಾರು ಬಾರಿಯು ಬೇಕಾದರೂ ಮಾಡುತ್ತೇನೆ. ನನ್ನ ಅಭಿಪ್ರಾಯವನ್ನು ವ್ಯಕ್ತಪಡಿಸುವ ಎಲ್ಲ ಮೂಲಭೂತ ಹಕ್ಕುಗಳು ನನಗಿವೆ. ನನ್ನನ್ನು ಜೈಲಿಗೆ ತಳ್ಳಿದರೂ ನಾನು ಹಿಂದೆ ಸರಿಯುವುದಿಲ್ಲ” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಯೋಧ್ಯೆ | ಆಸ್ಪತ್ರೆಗೆ ದಾಖಲಿಸಲು ನಿರಾಕರಣೆ, ತಂದೆಯ ತೋಳಿನಲ್ಲಿ ಮೃತಪಟ್ಟ ಬಾಲಕ

ತೀವ್ರವಾಗಿ ಅಸ್ಪಸ್ಥಗೊಂಡಿದ್ದ ತನ್ನ 12 ವರ್ಷದ ಪುತ್ರನನ್ನು ಸರ್ಕಾರಿ ಆಸ್ಪತ್ರೆಗೆ ಕರೆ...

ನಟಿಗೆ ಕಿರುಕುಳ ಆರೋಪ: ಕೇರಳ ಯುವ ಕಾಂಗ್ರೆಸ್ ಅಧ್ಯಕ್ಷನ ಹುದ್ದೆ ತೊರೆದ ರಾಹುಲ್ ಮಾಂಕೂಟತ್ತಿಲ್

ಕೇರಳದ ರಾಜಕೀಯದಲ್ಲಿ ದೊಡ್ಡ ಸಂಚಲನ ಸೃಷ್ಟಿಸಿರುವ ಅಶ್ಲೀಲ ಸಂದೇಶ ಹಾಗೂ ದುರ್ವರ್ತನೆ...

ನ್ಯಾಯದೇಗುಲಗಳಿಗೆ ಬಲು ಇಕ್ಕಟ್ಟಾದ ಬಾಗಿಲುಗಳ ಕಟ್ಟಿದ್ದೇವೆ- ಸಿಜೆಐ

‘ಹೈಕೋರ್ಟ್ ಜಡ್ಜ್ ಗಳ ಪೈಕಿ ಮೊಂಡರು, ಹಟಮಾರಿಗಳು, ಜಂಭದ ಕೋಳಿಗಳಿದ್ದಾರೆ...ಇನ್ನು ಕೆಲವರ...

ಉಪ ರಾಷ್ಟ್ರಪತಿ ಚುನಾವಣೆ: ಇಂಡಿಯಾ ಒಕ್ಕೂಟದ ಅಭ್ಯರ್ಥಿ ಸುದರ್ಶನ್ ರೆಡ್ಡಿ ನಾಮಪತ್ರ ಸಲ್ಲಿಕೆ

ಭಾರತದ ಉಪ ರಾಷ್ಟ್ರಪತಿ ಚುನಾವಣೆಗೆ ‘ಇಂಡಿಯಾ’ ಮೈತ್ರಿಕೂಟದ ಅಭ್ಯರ್ಥಿಯಾಗಿ ಸುಪ್ರೀಂ ಕೋರ್ಟ್‌ನ...

Download Eedina App Android / iOS

X