ರಾಯಚೂರು | ಸಂಸದರ ಅಮಾನತು ಖಂಡಿಸಿ ಪ್ರತಿಭಟನೆ

Date:

Advertisements

ಸಂಸತ್‌ನಲ್ಲಿ ಸಂಸದರ ಅಮಾನತು ಮಾಡಲಾಗಿರುವುದನ್ನು ಖಂಡಿಸಿ ಭಾರತ ಕಮ್ಯುನಿಸ್ಟ್ ಪಕ್ಷ (ಮಾರ್ಕ್ಸ್ ವಾದಿ – ಸಿಪಿಐಎಂ) ಪದಾಧಿಕಾರಿಗಳು ರಾಯಚೂರಿನಲ್ಲಿ ಪ್ರತಿಭಟನೆ ನಡೆಸಿದ್ದಾರೆ.

“ಸಂಸತ್ತಿನ ಚಳಿಗಾಲದ ಅಧಿವೇಶನದಲ್ಲಿ ಪ್ರತಿಪಕ್ಷಗಳ 146 ಸಂಸದರನ್ನು ಅಮಾನತುಗೊಳಿಸಲಾಗಿದೆ. ಕೇಂದ್ರ ಸರ್ಕಾರದ ಈ ನಡೆ ಸಂವಿಧಾನ ಮತ್ತು ಪ್ರಜಾಪ್ರಭುತ್ವದ ಘನತೆಯನ್ನು ಹಾಳು ಮಾಡುತ್ತದೆ. ಸರ್ವಾಧಿಕಾರಿ ಧೋರಣೆಯಾಗಿದೆ” ಎಂದು ದೂರಿದ್ದಾರೆ.

“ಕೇಂದ್ರ ಬಿಜೆಪಿ ಸರ್ಕಾರ ಕಾರ್ಪೊರೇಟ್ ಬಂಡವಾಳಶಾಹಿ ಪರ ಆಡಳಿತ ನಡೆಸುತ್ತಿದೆ. ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸಂಸತ್ತು ಅತ್ಯಂತ ಪ್ರಧಾನ ಅಂಗವಾಗಿದೆ. ಹೀಗಿದ್ದರೂ ಪ್ರಶ್ನೆ ಕೇಳಿದ ಕಾರಣಕ್ಕಾಗಿ ಸಂಸದರನ್ನು ಅಮಾನತುಗೊಳಿಸಿರುವುದು ಸರಿಯಲ್ಲ. ಸಂಸತ್ ಕಲಾಪದ ವೇಳೆಯೇ ದಾಳಿ ನಡೆದಿರುವುದು ಗಂಭೀರವಾದ ಭದ್ರತಾಲೋಪವಾಗಿದೆ. ಇದಕ್ಕೆ ಗೃಹ ಸಚಿವರಿಂದ ಉತ್ತರ ಬಯಸುವ, ಪ್ರಶ್ನಿಸುವ ಹಕ್ಕು ಸಂಸದರಿಗೆ ಇದೆ. ಆದರೆ ಮೋದಿ ಸರ್ಕಾರ ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ಅಗೌರವದಿಂದ ಕಾಣುತ್ತಿದೆ ಇದನ್ನು ಎಲ್ಲ ಪ್ರಜಾಪ್ರಭುತ್ವವಾದಿಗಳು ಖಂಡಿಸಲೇಬೇಕು” ಹೇಳಿದ್ದಾರೆ.

Advertisements

“ಬಿಜೆಪಿ ಅಧಿಕಾರಕ್ಕಾಗಿ ಧರ್ಮದ ಆಧಾರದಲ್ಲಿ ಜನರ ನಡುವೆ ವಿಷ ಬೀಜ ಬಿತ್ತುತ್ತಿದೆ. ಅಮಾಯಕರ ಸಾವುಗಳಿಗೆ ಕಾರಣವಾಗುತ್ತಿದೆ. ರಾಮ ಸೇರಿ ಎಲ್ಲ ದೇವರುಗಳನ್ನು ತಮ್ಮ ಅಧಿಕಾರದ ಆಸೆಗಾಗಿ ಬಳಸಿಕೊಳ್ಳುತ್ತಿರುವ ಬಿಜೆಪಿ ಮತ್ತು ಸಂಘಪರಿವಾರ ಮುಖಂಡರು ಸಮಾಜ ಕಲುಷಿತಗೊಳಿಸುತ್ತಿದೆ” ಎಂದು ಪ್ರತಿಭಟನಾಕಾರರು ಆರೋಪಿಸಿದ್ದಾರೆ

ಪ್ರತಿಭಟನೆಯಲ್ಲಿ ಡಿ.ಎಸ್.ಶರಣಬಸವ, ಕರಿಯಪ್ಪ ಅಚ್ಚೋಳಿ, ನರಸಣ್ಣ ನಾಯಕ, ನರಸಿಂಹ ಪುಚ್ಚಲದಿನ್ನಿ, ರಮೇಶ ಯಾಪಲದಿನ್ನಿ, ವಿರೇಶ, ನಾಗೇಂದ್ರ, ಶ್ಯಾಮ ಸುಂದರ, ಈ ರಂಗನಗೌಡ ಭಾಗವಹಿಸಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗುಬ್ಬಿ | ರೈತನ ಕೃಷಿ ಚಟುವಟಿಕೆಗೆ ಜೇನು ಸಾಕಾಣಿಕೆ ವರದಾನ : ಪುಷ್ಪಲತಾ

ರೈತರು ತಮ್ಮ ಕೃಷಿ ಚಟುವಟಿಕೆಯಲ್ಲಿ ಪ್ರಮುಖ ಘಟವಾದ ಪರಾಗಸ್ಪರ್ಶ ಕ್ರಿಯೆಗೆ...

ಮಂಗಳೂರು | ಆ. 23: ಅಲ್ ವಫಾ ಚಾರಿಟೇಬಲ್ ಟ್ರಸ್ಟ್‌ನಿಂದ 15 ಜೋಡಿಗಳ ಸರಳ ಸಾಮೂಹಿಕ ವಿವಾಹ

ಮಂಗಳೂರು ಭಾಗದಲ್ಲಿ ಸಮಾಜ ಸೇವೆಯಲ್ಲಿ ಗುರುತಿಸಿಕೊಂಡಿರುವ ಅಲ್ ವಫಾ ಚಾರಿಟೆಬಲ್ ಟ್ರಸ್ಟ್...

ಗುಬ್ಬಿ | ಎಂ.ಎನ್.ಕೋಟೆ ಗ್ರಾಪಂ ಉಪಾಧ್ಯಕ್ಷರಾಗಿ ಸಿದ್ದಗಂಗಮ್ಮ ಅವಿರೋಧ ಆಯ್ಕೆ

ಗುಬ್ಬಿ ತಾಲ್ಲೂಕಿನ ನಿಟ್ಟೂರು ಹೋಬಳಿ ಎಂ.ಎನ್.ಕೋಟೆ ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಸ್ಥಾನಕ್ಕೆ...

ಕೋಲಾರ | ಐಎಎಸ್, ಐಪಿಎಸ್ ಓದುವ ವಿದ್ಯಾರ್ಥಿಗಳಿಗೆ ಉಚಿತ ಬಸ್ ವ್ಯವಸ್ಥೆ; ಅ.ಮು ಲಕ್ಷ್ಮೀನಾರಾಯಣ ಭರವಸೆ

ಕೆಎಎಸ್, ಐಎಎಸ್ ಮತ್ತು ಐಪಿಎಸ್ ಓದಲು ಆಸಕ್ತಿ ಇರುವ ವಿದ್ಯಾರ್ಥಿಗಳಿಗೆ ಉಚಿತ...

Download Eedina App Android / iOS

X