ಹನುಮ ಜಯಂತಿ | ಪ್ರಸಾದ ತಿಂದು 200 ಹೆಚ್ಚು ಮಂದಿ ಅಸ್ವಸ್ಥ; ಓರ್ವ ಮಹಿಳೆ ಸಾವು

Date:

Advertisements

ಹನುಮ ಜಯಂತಿ ಪೂಜೆಗಾಗಿ ದೇವಾಲಯಗಳಲ್ಲಿ ತಯಾರಿಸಿದ್ದ ಪ್ರಸಾದ ತಿಂದು ಸುಮಾರು 200ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾಗಿದ್ದಾರೆ. ಓರ್ವ ಮಹಿಳೆ ಸಾವನ್ನಪ್ಪಿದ್ದಾರೆ.

ಬೆಂಗಳೂರು ಬಳಿಯ ಹೊಸಕೋಟೆಯ ವಿವಿಧ ದೇವಾಲಯಗಳಲ್ಲಿ ಭಾನುವಾರ ಹನುಮ ಜಯಂತಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ಈ ವೇಳೆ, ಪ್ರಸಾದ ವಿತರಣೆಯನ್ನೂ ಮಾಡಲಾಗಿತ್ತು. ಪ್ರಸಾದ ತಿಂದವರಲ್ಲಿ ಸುಮಾರು 200 ಮಂದಿ ಅಸ್ವಸ್ಥರಾಗಿ ಆಸ್ಪತ್ರೆಗಳಿಗೆ ದಾಖಲಾಗಿದ್ದಾರೆ. ಅವರಲ್ಲಿ, ಓರ್ವ ಮಹಿಳೆ ಚಿಕಿತ್ಸೆ ಫಲಿಸದೆ ಸೋಮವಾರ ಸಾವನ್ನಪ್ಪಿದ್ದಾರೆ.

ಭಾನುವಾರ ಸಂಜೆಯೇ ಹಲವರಿಗೆ ವಾಂತಿಯಾಗಿದ್ದು, ಬೆಂಗಳೂರು, ಕೋಲಾರ, ಹೊಸಕೋಟೆಯ ಆಸ್ಪತ್ರೆಗಳಲ್ಲಿ ದಾಖಲಾಗಿದ್ದರು. ಬೆಂಗಳೂರಿನ ಆಸ್ಪತ್ರೆಯೊಂದರಲ್ಲಿ ದಾಖಲಾಗಿದ್ದ ಸಿದ್ದಗಂಗಮ್ಮ (60) ಎಂಬವರು ಚಿಕಿತ್ಸೆ ಫಲಿಸದೆ ಸಾವನ್ನಪ್ಪಿದ್ದಾರೆ ಎಂದು ವರದಿಯಾಗಿದೆ.

Advertisements

ಆಸ್ಪತ್ರೆಗೆ ದಾಖಲಾಗಿರುವವರಲ್ಲಿ ಇನ್ನೂ ಎಂಟು ಮಂದಿ ಪರಿಸ್ಥಿತಿ ಗಂಭೀರವಾಗಿದೆ. ಹಲವರ ಆರೋಗ್ಯ ಸುಧಾರಿಸಿದೆ ಎಂದು ತಿಳಿದುಬಂದಿದೆ.

ಪ್ರಸಾದ ತಯಾರಿಕೆ ಮತ್ತು ವಿತರಣೆ ವೇಳೆ ಸ್ವಚ್ಛತೆ ಕಾಪಾಡದೇ ಇರುವುದರಿಂದ ಫುಡ್‌ ಪಾಯಿಸನ್ ಆಗಿ, ಜನರು ಅನಾರೋಗ್ಯಕ್ಕೆ ತುತ್ತಾಗಿದ್ದಾರೆ ಎಂದು ಹೇಳಲಾಗಿದೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Download Eedina App Android / iOS

X