ಬೀದರ್‌ | ದಲಿತ್ ಯುನಿಟಿ ಮೂವ್ಮೆಂಟ್ ಕಾರ್ಯಕರ್ತರಿಂದ ಮನುಸ್ಮೃತಿ ದಹನ

Date:

Advertisements

ಭಾರತದ ಇತಿಹಾಸದಲ್ಲಿಯೇ ಸಾಮಾಜಿಕವಾಗಿ ಅತ್ಯಂತ ಕೆಟ್ಟ ಕಟ್ಟಪಣೆ ಹೇರಿದ ಗ್ರಂಥ ಮನುಸ್ಮೃತಿ, ಮಹಿಳೆಯರಿಗೆ ಸ್ವಾತಂತ್ರ್ಯ ನೀಡದೇ ವರ್ಣಾಶ್ರಮ ಪದ್ಧತಿ ಮುಂದುವರೆಯುವಂತೆ ಮಾಡುವ ಮೂಲಕ ಮನುಷ್ಯರ ಮಧ್ಯೆ  ಭೇದ ಸೃಷ್ಟಿಸಿದ ಮನುಸ್ಮೃತಿಯನ್ನು ಅಂಬೇಡ್ಕರ್‌ ಅವರು ದಹಿಸಿದರು ಎಂದು ದಲಿತ್ ಯುನಿಟಿ ಮೂವ್ಮೆಂಟ್ ರಾಜ್ಯಾಧ್ಯಕ್ಷ ಪ್ರಕಾಶ್ ರಾವಣ ಹೇಳಿದರು.

ಬೀದರ ನಗರದ ನೌಬಾದ ಬಾಬಾ ಸಾಹೇಬ್ ಅಂಬೇಡ್ಕರ ಅವರ ಪುತ್ತಳಿ ಎದುರು ಮನುಸ್ಮೃತಿ ದಹನ ಕಾರ್ಯಕ್ರಮ ದಲಿತ್ ಯುನಿಟಿ ಮೂವ್ಮೆಂಟ್ ವತಿಯಿಂದ ಮನುಸ್ಮೃತಿ ಪ್ರತಿಕೃತಿಯನ್ನು ಬೆಂಕಿಯಿಟ್ಟು ಹೊತ್ತಿಸಿ ಆಕ್ರೋಶ ವ್ಯಕ್ತಪಡಿಸಿದರು.

“ಮೊಟ್ಟ ಮೊದಲ ಬಾರಿಗೆ ಗೌತಮ ಬುದ್ಧರು ಪ್ರಜಾಪ್ರಭುತ್ವ ವ್ಯವಸ್ಥೆ ಹುಟ್ಟು ಹಾಕಿ ದೇಶದ ಪ್ರತಿ ಪ್ರಜೆಯು ಸ್ವಘನತೆ ಮತ್ತು ಸ್ವಾಭಿಮಾನದಿಂದ ಬದುಕು ನಿಟ್ಟಿನಲ್ಲಿ ಎಲ್ಲರಿಗೂ ಸಮಾನತೆ ಬೋಧಿಸಿದರು, ಅಂದಿನ ವಿಚಾರಗಳೇ ಇಂದು ನಮ್ಮ ಸಂವಿಧಾನದಲ್ಲಿ ಅಳವಡಿಸಿ ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಭಾರತೀಯರಿಗೆ ಕಾನೂನಾತ್ಮಕವಾಗಿ ನೀಡಿದ್ದಾರೆ. ಆದರೆ, ಭಾರತೀಯ ಸಂವಿಧಾನದ ಮೌಲ್ಯಗಳಾದ ಸಮಾನತೆ, ನ್ಯಾಯ, ಸ್ವಾತಂತ್ರ್ಯ ಮತ್ತು ಭಾತ್ರುತ್ವವನ್ನು ಎತ್ತಿ ಹಿಡಿಯುವ ಸಂವಿಧಾನದ ಬದಲು ದೇಶದಲ್ಲಿ ಮನುಸ್ಮೃತಿ ಜಾರಿಗೊಳಿಸುವ ಹುನ್ನಾರ ನಡೆಯುತ್ತಿದೆ” ಎಂದು ಕಿಡಿಕಾರಿದರು.

Advertisements

ಈ ಸುದ್ದಿ ಓದಿದ್ದೀರಾ? ಸಂಸದರ ಅಮಾನತು ಪೂರ್ವ ನಿರ್ಧಾರಿತ, ಪೂರ್ವ ನಿಯೋಜಿತ: ಧನಕರ್‌ಗೆ ಖರ್ಗೆ ಪತ್ರ

ಈ ಸಂಧರ್ಭದಲ್ಲಿ ಪ್ರಮುಖರಾದ ವಿನೀತ್ ಗಿರಿ, ಸಿದ್ಧಾರ್ಥ ಭಾವಿದೊಡ್ಡಿ, ಮಹೇಶ್ ಸಿಂಧೆ, ಸಂವಿಧಾನ ಸಿಂಧೆ, ಸಿದ್ಧಾರ್ಥ ಗೌರೆ, ನೀಲಕಂಠ ಕಾಂಬ್ಳೆ, ಪೃಥ್ವಿ, ಲಿಂಗು ನಾಟಿಕರ, ಶ್ರೀಕಾಂತ್, ಶಿವು, ಕುಶಾಲ್ ಸೇರಿದಂತೆ ಇತರರಿದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿವಮೊಗ್ಗ | ಒಳಮೀಸಲಾತಿ ಪುನರ್ ಪರಿಶೀಲಿಸಿ, ನ್ಯಾಯ ಒದಗಿಸಿ ; ಅಖಿಲ ಕರ್ನಾಟಕ ಕೊರಚ ಮಹಾ ಸಂಘ ಆಗ್ರಹ

ಶಿವಮೊಗ್ಗ, ಅಖಿಲ ಕರ್ನಾಟಕ ಕೊರಚ ಮಹಾ ಸಂಘವು ಸರ್ಕಾರದ ಒಳಮೀಸಲಾತಿಯನ್ನು ಪುನರ್...

ಮಂಡ್ಯ | ಕಿರುಗಾವಲು ಜ್ಯುವೆಲರಿ ಶಾಪ್ ಕಳ್ಳತನ; ಆರೋಪಿ ಕಾಲಿಗೆ ಗುಂಡು

ಮಂಡ್ಯ ಜಿಲ್ಲೆ, ಕಿರುಗಾವಲು ಜ್ಯುವೆಲರಿ ಶಾಪ್ ನಲ್ಲಿ ನಡೆದ ಕಳ್ಳತನ ಹಾಗೂ...

ಬಾಗಲಕೋಟೆ | ಬೀದಿ ನಾಯಿಗಳ ಹಾವಳಿ; ಶೀಘ್ರ ಕ್ರಮಕ್ಕೆ ಡಿಸಿ ಸಂಗಪ್ಪ ಸೂಚನೆ

ಬಾಗಲಕೋಟೆ ಜಿಲ್ಲೆಯ ಸ್ಥಳೀಯ ಸಂಸ್ಥೆಗಳ ವ್ಯಾಪ್ತಿಯಲ್ಲಿನ ಬೀದಿನಾಯಿಗಳ ಹಾವಳಿಯಿಂದ ಸಾರ್ವಜನಿಕರು ಹಾಗೂ...

ಶಿವಮೊಗ್ಗ | ಡಿ.ಎ.ಆರ್.ಸಭಾಂಗಣದಲ್ಲಿ ಜಿಲ್ಲಾಧಿಕಾರಿ ನೇತೃತ್ವದಲ್ಲಿ ಶಾಂತಿ ಸಮಿತಿ ಸಭೆ

ಎಲ್ಲಾ ಧರ್ಮದವರು ಹಬ್ಬಗಳನ್ನು ಸಡಗರ-ಸಂಭ್ರಮಗಳಿಂದ ಆಚರಿಸುವಂತೆ ಜಿಲ್ಲಾಧಿಕಾರಿ ಗುರುದತ್ ಹೆಗಡೆ ಕರೆ...

Download Eedina App Android / iOS

X