ತುಮಕೂರು | ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ: ಮೀನಾಕ್ಷಿ ಸುಂದರಂ

Date:

Advertisements

ಜನರ ಬದುಕಿನ ಪ್ರಶ್ನೆಗಳನ್ನು ಸರ್ಕಾರ ನಿರ್ಲಕ್ಷಿಸುತ್ತಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಮೀನಾಕ್ಷಿ ಸುಂದರಂ ಆರೋಪಿಸಿದ್ದಾರೆ.

ತುಮಕೂರಿನಲ್ಲಿ ನಡೆದ ಸಿಐಟಿಯು ಜಿಲ್ಲಾ ಮಟ್ಟದ ಸಭೆಯಲ್ಲಿ ಅವರು ಮಾತನಾಡಿದರು. “ಜನರ ಸಂಕಷ್ಟಗಳಿಗೆ ಕಾರಣವಾಗಿರುವ ಬೆಲೆ ಏರಿಕೆ, ದುಡಿವ ಜನರಿಗೆ ಬದಕುಲು ಯೋಗ್ಯ ಕನಿಷ್ಟ ಕೂಲಿ, ಸಾಮಾಜಿಕ ಭದ್ರತೆ, ನಿರುದ್ಯೋಗ, ಕೃಷಿ ಬಿಕ್ಕಟಿನಿಂದ ರೈತರ ಅತ್ಮಹತ್ಯೆಗಳಂತಹ ವಿಚಾರದಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತಳೆದಿದೆ. ಸಮಾಜದಲ್ಲಿ ಒಡುಕು ಉಂಟುಮಾಡುವ ಶಕ್ತಿಗಳಿಗೆ ಸರ್ಕಾರ ಬೆಂಬಲಿಸುತ್ತಿದೆ. ಇದನ್ನು ಜನತೆ ಅರ್ಥೈಸಿಕೊಳ್ಳಬೇಕು” ಎಂದರು.

ಅಂಗವಾಡಿ ನೌಕರರ ಸಂಘದ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗುಲ್ಜಾರ್ ಬಾನು ಮಾತನಾಡಿ, “ದೇಶದಲ್ಲಿ ಅಪೌಷ್ಟಿಕತೆ ಹೆಚ್ಚಾಗಿದೆ. ಅದನ್ನು ತೊಲಗಿಸಲು ಇರುವ ಐಸಿಡಿಎಸ್ ಯೊಜನೆಗೆ ಕೇಂದ್ರ ಅನುದಾನ ಕಡಿತ ಮಾಡಿರುವುದು ನ್ಯಾಯ ಸಮ್ಮತವಲ್ಲ” ಎಂದರು.

Advertisements

ಬಿಸಿಊಟದ ನೌಕರರ ಸಂಘದ ಕೆಂಚಮ್ಮ ಮಾತನಾಡಿ, “22 ವರ್ಷಗಳ ಕಾಲ ಯೋಜನೆಯಲ್ಲಿ ದುಡಿದ ನೌಕರರಿಗೆ ನಿವೃತ್ತಿಯಾದಗ ಬಿಡಿಗಾಸು ಸಿಗಲ್ಲ, ಕೆಳೆದ 8-9 ವರ್ಷಗಳಿಂದ ಕೇಂದ್ರ ಸರ್ಕಾರ ಸಂಬಳವನ್ನು ಹೆಚ್ಚಿಸಿಲ್ಲ” ಎಂದು ಆರೋಪಿಸಿದರು.

ಸಭೆಯಲ್ಲಿ ಜಿ. ಕಮಲ, ರಂಗಧಾಮಯ್ಯ, ಸೈಯದ್ ಮುಜೀಬ್, ಕಲೀಲ್, ಶಂಕರಪ್ಪ, ಪಿ.ಎಪ್. ಪಿಂಚಣಿದಾರರ ಸಂಘದ ಟಿ.ಜಿ. ಶಿವಲಿಂಗಯ್ಯ, ಗ್ರಾಮ ಪಂಚಾಯತ್ ನೌಕರ ಸಂಘದ ಎನ್,ಕೆ ಸುಬ್ರಮಣ್ಯ ಇನ್ನಿತರರು ಇದ್ದರು.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X