ಲೋಕಸಭೆ ಚುನಾವಣೆಯಲ್ಲಿ ಗೆಲ್ಲುವವರೆಗೂ ವಿಶ್ರಾಂತಿ ಬೇಡ: ಬಿ ವೈ ವಿಜಯೇಂದ್ರ ಕರೆ

Date:

Advertisements
  • ವಿರೋಧಿಗಳನ್ನು ಹಗುರವಾಗಿ ಪರಿಗಣಿಸದೆ ಲೋಕಸಭಾ ಚುನಾವಣೆ ಎದುರಿಸಿ
  • ಕರ್ನಾಟಕ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ, ಸುಭದ್ರ ಕೋಟೆ

ರಾಜ್ಯ ಮತ್ತು ದೇಶದಲ್ಲಿ ಬಿಜೆಪಿ ಪರ ಅಲೆ ಇದೆ. ಆದರೂ, ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಆಡಳಿತ ನಡೆಸುವ ಸಂದರ್ಭದಲ್ಲಿ ನಮ್ಮ ವಿರೋಧಿಗಳನ್ನು ಹಗುರವಾಗಿ ಪರಿಗಣಿಸದಿರಿ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ ವೈ ವಿಜಯೇಂದ್ರ ಹೇಳಿದರು.

ಬೆಂಗಳೂರಿನ ಮಲ್ಲೇಶ್ವರಂನ ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ ಬುಧವಾರ ರಾಜ್ಯದ ನೂತನ ಪದಾಧಿಕಾರಿಗಳ ಸಭೆಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಪ್ರತಿಯೊಂದು ಚುನಾವಣೆಯಲ್ಲೂ ಕೂಡ ವಿವಿಧ ರೀತಿಯ ಸವಾಲುಗಳಿರುತ್ತವೆ. ಆ ಸವಾಲುಗಳನ್ನು ಯಶಸ್ವಿಯಾಗಿ ಮೆಟ್ಟಿ ನಿಂತು ಸಾಧನೆ ಮಾಡಲು ನಮ್ಮ ಎದುರಾಳಿಗಳನ್ನು ನಾವು ಹಗುರವಾಗಿ ಪರಿಗಣಿಸಬಾರದು” ಎಂದರು.

“ನಮ್ಮ ಪಕ್ಷದ ಕಾರ್ಯಕರ್ತರಿಗೆ ಬಲ ತುಂಬುವ ಜಿಲ್ಲಾ ಪಂಚಾಯತ್, ತಾಲ್ಲೂಕು ಪಂಚಾಯತ್ ಚುನಾವಣೆ, ಬಿಬಿಎಂಪಿ ಚುನಾವಣೆ, ವಿಧಾನಪರಿಷತ್ ಚುನಾವಣೆಗಳನ್ನು ಗಂಭೀರವಾಗಿ ಪರಿಗಣಿಸಿ ಮುಂದಕ್ಕೆ ಹೆಜ್ಜೆ ಇಡಬೇಕು” ಎಂದು ಸೂಚಿಸಿದರು.

Advertisements

“ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ಈ ಹೊಣೆಗಾರಿಕೆ ಅತ್ಯಂತ ಪ್ರಮುಖ ಕಾಲಘಟ್ಟದಲ್ಲಿ ನಮಗೆಲ್ಲರಿಗೂ ರಾಜ್ಯ ಪದಾಧಿಕಾರಿಗಳಾಗಿ ಕೆಲಸ ಮಾಡುವ ಜವಾಬ್ದಾರಿ ಲಭಿಸಿದೆ. ನಾವೆಲ್ಲರೂ ಹೊಣೆಯರಿತು ಕರ್ತವ್ಯ ನಿರ್ವಹಿಸಬೇಕು. ನಮಗೆ ಹೊಣೆಗಾರಿಕೆ ಯಾವ ಕಾಲಘಟ್ಟದಲ್ಲಿ ಲಭಿಸಿದೆ ಎಂಬುದು ಅತ್ಯಂತ ಪ್ರಮುಖವಾದುದು. ಅಯೋಧ್ಯೆಯಲ್ಲಿ ಭಗವಾನ್ ಶ್ರೀರಾಮನ ಭವ್ಯ ಮಂದಿರ ನಿರ್ಮಾಣ ಆಗಬೇಕೆಂಬ ಕಳೆದ ಹಲವಾರು ದಶಕಗಳ ಎಲ್ಲ ಹಿಂದೂ ಕಾರ್ಯಕರ್ತರ ಕನಸು, ಹೋರಾಟ ಇದೀಗ ನನಸಾಗುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರಿಂದ ಲೋಕಾರ್ಪಣೆ ಆಗಲಿದೆ” ಎಂದರು.

“ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಂದಾಗಿ ಚುನಾವಣೆ ಎದುರಿಸಿ ರಾಜ್ಯದಲ್ಲಿ 28ಕ್ಕೆ 28 ಲೋಕಸಭಾ ಸ್ಥಾನಗಳನ್ನು ಗೆಲ್ಲುವ ಗುರಿ ನಮ್ಮ ಎದುರಿಗಿದೆ. ಕರ್ನಾಟಕದಲ್ಲಿ ಅಧಿಕಾರಕ್ಕೆ ಬಂದ ಕಾಂಗ್ರೆಸ್ ಪಕ್ಷವು ಅಧಿಕಾರದ ಅಮಲಿನಲ್ಲಿ ತೇಲುತ್ತಿದೆ. ಕಾಂಗ್ರೆಸ್ ಪಕ್ಷಕ್ಕೆ ತಕ್ಕ ಉತ್ತರ ಕೊಡುವುದು; ಅದಕ್ಕಿಂತ ಹೆಚ್ಚಾಗಿ ನರೇಂದ್ರ ಮೋದಿಯವರ ಕೈ ಬಲಪಡಿಸುವ ಕೆಲಸ ಕರ್ನಾಟಕದಿಂದ ಆಗಬೇಕಿದೆ” ಎಂದು ತಿಳಿಸಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

“ಕರ್ನಾಟಕವು ಕೇವಲ ದಕ್ಷಿಣ ಭಾರತದ ಬಿಜೆಪಿಯ ಭದ್ರಕೋಟೆಯಲ್ಲ; ಅದೊಂದು ಸುಭದ್ರ ಕೋಟೆಯಾಗಿದೆ ಎಂಬ ಸಂದೇಶವನ್ನು ನಾವು ನೀಡಬೇಕಿದೆ. ನಮ್ಮ ಮುಂದಿರುವ ಸವಾಲು ದೊಡ್ಡದೇನಲ್ಲ. ಮೋದಿ ಅವರ ಪರವಾದ ವಾತಾವರಣ ದೇಶ ಮತ್ತು ರಾಜ್ಯದಲ್ಲಿದೆ. ಅಪಾರ ಜನಪ್ರಿಯತೆಯೂ ಅವರಿಗೆ ಇದೆ. ಅವರ ಜನಪ್ರಿಯತೆಯನ್ನು ಮತಗಳನ್ನಾಗಿ ಪರಿವರ್ತಿಸುವುದು ಹೇಗೆ ಎಂಬ ಸವಾಲಿಗೆ ಉತ್ತರ ಕಂಡುಕೊಂಡು ಕಾರ್ಯಪ್ರವೃತ್ತರಾಗಬೇಕು” ಎಂದು ಸಲಹೆ ನೀಡಿದರು.

“ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು. ಮುಂದಿನ ಲೋಕಸಭಾ ಚುನಾವಣೆ ಮುಗಿಯುವ ವರೆಗೆ ನಮಗೆ ಭಾನುವಾರ, ಹಬ್ಬ, ಹರಿದಿನ ಎಂಬುದಿರಬಾರದು. ಕುಟುಂಬ ಎಲ್ಲವನ್ನೂ ಬದಿಗಿಡಿ. ಲೋಕಸಭಾ ಚುನಾವಣೆಯ ಗುರಿ ಮುಟ್ಟುವತನಕ ನಾವು ವಿಶ್ರಾಂತಿ ಪಡೆಯುವ ಪ್ರಶ್ನೆ ಉದ್ಭವ ಆಗಬಾರದು” ಎಂದರು.

ಈ ಸಂದರ್ಭದಲ್ಲಿ ಬಿಜೆಪಿ ರಾಜ್ಯ ಸಂಘಟನಾ ಪ್ರಧಾನ ಕಾರ್ಯದರ್ಶಿ ರಾಜೇಶ್ ಜಿ.ವಿ, ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಸುನೀಲ್ ಕುಮಾರ್, ಪಿ. ರಾಜೀವ್, ಪ್ರೀತಮ್ ಗೌಡ, ನಂದೀಶ್ ರೆಡ್ಡಿ ಮತ್ತು ನೂತನ ಪದಾಧಿಕಾರಿಗಳು ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ದಸರಾ ಉದ್ಘಾಟನೆಗೆ ಸೋನಿಯಾ ಗಾಂಧಿಗೆ ಆಹ್ವಾನ ಸಂಪೂರ್ಣ ಸುಳ್ಳು: ಸಿಎಂ ಸಿದ್ದರಾಮಯ್ಯ ಸ್ಪಷ್ಟನೆ

ಈ ಬಾರಿಯ ದಸರಾ ಉದ್ಘಾಟನೆಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿಯನ್ನು ಆಹ್ವಾನಿಸಲಾಗಿದೆ...

Download Eedina App Android / iOS

X