ಮೈಸೂರು | ‘ಸಂಹಾರ ದಿನ’ ಆಚರಣೆಗೆ ದಸಂಸ ವಿರೋಧ; ಎರಡು ಗುಂಪುಗಳ ನಡುವೆ ಘರ್ಷಣೆ

Date:

Advertisements

ದೇವಸ್ಥಾನದ ಬಳಿ ಅಂದಕಾಸುರನ ರಂಗೋಲಿ ತುಳಿದು, ಅಳಿಸಿ ಆಚರಿಸಲಾಗುವ ‘ಸಂಹಾರ ದಿನ’ ಆಚರಣೆಗೆ ದಸಂಸ ವಿರೊಧ ವ್ಯಕ್ತಪಡಿಸಿದೆ. ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಘರ್ಷಣೆ ನಡೆದಿರುವ ಘಟನೆ ಮೈಸೂರು ಜಿಲ್ಲೆಯ ನಂಜನಗೂಡಿನಲ್ಲಿ ನಡೆದಿದೆ..

ಮಹಿಷಾಸುರನ ಮತ್ತೊಂದು ಹೆಸರೆಂದು ಪರಿಗಣಿಸಲಾಗಿರುವ ಅಂದಕಾಸುರನ ಚಿತ್ರವನ್ನು ನಂಜನಗೂಡಿನ ದೇವಸ್ಥಾನದ ಆವರಣದಲ್ಲಿ ರಂಗೋಲಿಯಲ್ಲಿ ಬಿಡಿಸಲಾಗುತ್ತದೆ. ಬಳಿಕ, ನಂಜುಂಡೇಶ್ವರ, ಪಾರ್ವತಿ ಉತ್ಸವ ಮೂರ್ತಿಗಳನ್ನು ಹೊತ್ತವರು ಅಂದಕಾಸುರ ಚಿತ್ರವನ್ನು ಕಾಲಿನಲ್ಲಿ ತುಳಿದು ಅಳಿಸುತ್ತಾರೆ. ಈ ಆಚರಣೆಯು ಮೂಲ ವಾಸಿಗಳಾದ ದ್ರಾವಿಡರ ಭಾವನೆಗಳಿಗೆ ಧಕ್ಕೆ ತರುತ್ತದೆಂದು ದಸಂಸ ವಿರೋಧ ವ್ಯಕ್ತಪಡಿಸಿದೆ.

ಮಹಿಷಾಸುರ ಜನಪರ ದ್ರಾವಿಡ ರಾಜನಾಗಿದ್ದ. ಹಲವರು ಮಹಿಷಾಸುರನನ್ನು ಪೂಜಿಸುತ್ತಾರೆ. ಆತನ ಚಿತ್ರವನ್ನು ತುಳಿದು, ಅಳಿಸುವುದು ದಲಿತರು ಸೇರಿದಂತೆ ಹಲವರ ಭಾವನೆಗಳಿಗೆ ಧಕ್ಕೆ ತರುತ್ತವೆ. ಈ ಆಚರಣೆಯನ್ನು ನಿಲ್ಲಿಸಬೇಕೆಂದು ದಸಂಸ ಕಾರ್ಯಕರ್ತರು ಆಗ್ರಹಿಸಿದ್ದಾರೆ.

Advertisements

ಈ ಸುದ್ದಿ ಓದಿದ್ದೀರಾ?: ಮಂಡ್ಯ | ಮುಸ್ಲಿಂ ಮಹಿಳೆಯರ ವಿರುದ್ಧ ದ್ವೇಷ ಭಾಷಣ: ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಎಫ್‌ಐಆರ್ ದಾಖಲು

ಈ ವೇಳೆ, ದಸಂಸ ಕಾರ್ಯಕರ್ತರು ಮತ್ತು ಭಕ್ತರ ನಡುವೆ ಮಾತಿನ ಚಕಮಕಿ ನಡೆದಿದೆ. “ಹಲವಾರು ವರ್ಷಗಳಿಂದ ನಡೆದುಕೊಂಡು ಬಂದಿರುವ ಸಂಪ್ರದಾಯವನ್ನು ಬಿಡುವಂತಿಲ್ಲ” ಎಂದು ದೇವಸ್ಥಾನದ ಅರ್ಚಕರು ಸಮಜಾಯಿಷಿ ನೀಡಿದ್ದಾರೆ.

ಮೆರವಣಿಗೆ ಸಮಯದಲ್ಲಿ ನಂಜುಂಡೇಶ್ವರ ಮೂರ್ತಿಗೆ ಎಂಜಲು ನೀರು ಎರಚಲಾಗಿದೆ ಎಂದೂ ಕೂಡ ಕೆಲವು ಭಕ್ತರು ಆರೋಪಿಸಿದ್ದಾರೆ. ಆರೋಪ ಸಂಬಂಧ ದೇವಾಲಯದ ಕಾರ್ಯನಿರ್ವಾಹಕ ಅಧಿಕಾರಿ ಜಗದೀಶ್​​ ಎಂಬವರು ನಂಜನಗೂಡು ಪಟ್ಟಣ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೆಳಗಾವಿ : ಗಾಂಜಾ ಮಾರಾಟ ಮಾಫಿಯಾ 9 ಮಂದಿ ಅರೆಸ್ಟ್ : ರೂ 30 ಲಕ್ಷ ಮೌಲ್ಯದ ಗಾಂಜಾ ವಶ

ಬೆಳಗಾವಿ ನಗರದಲ್ಲಿ ಗಾಂಜಾ ಮಾರಾಟ ಜಾಲ ಬಯಲಾಗಿದ್ದು, ಬೆಳಗಾವಿ ಪೊಲೀಸರು ದೊಡ್ಡ...

ಚಿತ್ರದುರ್ಗ | ವಿದ್ಯಾರ್ಥಿನಿ ಕೊಲೆ, ಬೆಂಕಿ ಹಚ್ಚಿ ಸುಟ್ಟ ಅಪರಾಧಿಗಳಿಗೆ ಗಲ್ಲುಶಿಕ್ಷೆ ವಿಧಿಸಲು ಎಸ್ ಎಫ್ ಐ ಆಗ್ರಹ

ಚಿತ್ರದುರ್ಗದ ಹೊರವಲಯದಲ್ಲಿರುವ ರಾಷ್ಟ್ರೀಯ ಹೆದ್ದಾರಿ ಬಳಿ ಹಿರಿಯೂರು ತಾಲೂಕಿನ 19 ವರ್ಷದ...

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

Download Eedina App Android / iOS

X