ಗದಗ | ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ

Date:

Advertisements

ಪ್ರಜಾಪ್ರಭುತ್ವವು ಮೂರು ಸ್ಥಂಭಗಳನ್ನು ಹೊಂದಿದೆ – ಸ್ವಾತಂತ್ರ್ಯ, ಸಮಾನತೆ, ಭ್ರಾತೃತ್ವ‌ – ಈ ಮೂರರಲ್ಲಿ ಯಾವುದಾದರೊಂದು ಕುಂಟಿತಗೊಂಡರೆ ಸಂವಿಧಾನ ಉಳಿಯುವುದಿಲ್ಲವೆಂದು ಅಂಬೇಡ್ಕರ್ ಹೇಳಿದ್ದರು ಎಂದು  ಡಿಎಸ್ಎಸ್ ಹಿರಿಯ ಮುಖಂಡ ಎಚ್.ಡಿ. ಪೂಜಾರ ಹೇಳಿದ್ದಾರೆ.

ಗದಗ ಪಟ್ಟಣದ ಶ್ರೀತೋಂಟದಾರ್ಯ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ದಲಿತ ಸಂಘರ್ಷ ಸಮಿತಿ ಅಂಬೇಡ್ಕರ್‌ವಾದ ರಾಜ್ಯ ಸಮಿತಿ ಹಾಗೂ ಗದಗ ಸಮಿತಿ ಸಹಯೋಗದೊಂದಿಗೆ ಸಂವಿಧಾನ ಸಮರ್ಪಣಾ ದಿನಾಚರಣೆ ಅಂಗವಾಗಿ ಸಂವಿಧಾನ ರಕ್ಷಣೆಗಾಗಿ, ಪ್ರಜಾಪ್ರಭುತ್ವ ಉಳಿವಿಗಾಗಿ ಜಿಲ್ಲಾ ಮಟ್ಟದ ಜಾಗೃತಿ ಸಮಾವೇಶ ಹಮ್ಮಿಕೊಂಡಿತ್ತು.

ಈ ಸಮಾವೇಶದಲ್ಲಿ ದಲಿತ ಮುಖಂಡ ಎಚ್.ಡಿ. ಪೂಜಾರ ಮಾತನಾಡಿ, ಸ್ವಾತಂತ್ರ್ಯ ಸಿಕ್ಕಿದೆ. ಆದರೆ, ಇನ್ನೂ ದಲಿತರಿಗೆ ಸ್ವಾತಂತ್ರ್ಯ ಸಿಕ್ಕಿಲ್ಲ. ಜಾತಿವಾದಿಗಳಿಗೆ ಮನುವಾದಿಗಳಿಗೆ ಮಾತ್ರ ಸಿಕ್ಕಿದೆ. ಬೌದ್ಧ, ಜೈನ ಅನೇಕ ಧರ್ಮಗಳಿವೆ. ಆದರೆ, ಇಲ್ಲಿ ಸಹೋದರತೆ, ಭ್ರಾತೃತ್ವ‌ ಭಾವನೆ ಇದೇಯೇ… ಮನುವಾದಿಗಳು ಇವುಗಳನ್ನು ಕುಂಟಿತಗೊಳಿಸುತ್ತಿದ್ದಾರೆ. ಇವುಗಳನ್ನು ಗಟ್ಟಿಗೋಳಿಸಬೇಕು. ಬಿದ್ದವರನ್ನು, ಬಿಳುವವರನ್ನು ಮೇಲಕ್ಕೆತ್ತುವುದೇ ಧರ್ಮ. ಮೀಸಲಾತಿ ಹೆಚ್ಚು ಮಾಡಿ ಎಂದರೆ ರಾಜಕೀಯ ಮಾಡುತ್ತಿದ್ದಾರೆ ಎಂದು ಪ್ರಾಸ್ತಾವಿಕ ಮಾತುಗಳಲ್ಲಿ ಅಸಮಧಾನ ವ್ಯಕ್ತಪಡಿಸಿದರು.

Advertisements

ಡಿಎಸ್ಎಸ್ ಅಂಬೇಡ್ಕರ್‌ವಾದ ರಾಜ್ಯ ಉಪ ಪ್ರಧಾನ ಸಂಚಾಲಕ ನಾಗಣ್ಣ ಬಡಿಗೇರ ಮಾತನಾಡಿ, ಡಾ. ಬಿ.ಆರ್. ಅಂಬೇಡ್ಕರ್ ಅವರು ತಮ್ಮ ಹೊಟ್ಟೆ ಹಸಿವನ್ನು ನೋಡಿಕೊಂಡಿದ್ದರೆ. ನಾವು ಇವತ್ತು ಈ ರೀತಿಯಲ್ಲಿ ಇರುತ್ತಿರಲಿಲ್ಲ. ಸ್ವಾತಂತ್ರ್ಯ ಸಿಕ್ಕು ಇಷ್ಟು ವರ್ಷಗಳಾಗಿವೆ, ನಾವೆಲ್ಲರೂ ಅವಲೋಕನ ಮಾಡಿಕೊಳ್ಳಬೇಕು.

ಸರಿಯಾಗಿ ಸಂವಿಧಾನ ಜಾರಿಯಾಗಿದೆಯೇ ಎಂದು ಪ್ರಶ್ನಾರ್ಥಕವಾಗಿಯೇ ಉಳಿದುಕೊಂಡಿದೆ. ಮನುಸ್ಮೃತಿಯು ನಮ್ಮ ತಲೆಯಿಂದ ಹೋಗಿಯೇ ಇಲ್ಲ. ಕೆಲವು ಕೋಮುವಾದಿಗಳು ಸಂವಿಧಾ‌ನ ಬದಲಿಸಲಿಕ್ಕೆ ನಾವು ಬಂದಿದ್ದೇವೆ ಎಂದು ಹೇಳುತ್ತಿದ್ದಾರೆ. ನಾವೆಲ್ಲರೂ ಸಂವಿಧಾನ ರಕ್ಷಣೆ ಮಾಡುವುದು ನಮ್ಮೆಲ್ಲರ ಹೊಣೆಯಾಗಿದೆ. ಎಲ್ಲ ಧರ್ಮಗಳ ಮನುಕುಲ ಒಳತಿಗಾಗಿ ಅಂಬೇಡ್ಕರ್ ಅವರು ಸಂವಿಧಾನ ರಚಿಸಿದ್ದಾರೆ ಎಂದರು.

ಡಿಎಸ್ಎಸ್ ಗದಗ ಜಿಲ್ಲಾ ಸಂಚಾಲಕ ಬಾಲರಾಜ್ ಅರಬರ್ ಅಧ್ಯಕ್ಷತೆ ವಹಿಸಿದ್ದರು. ಇಂದಿರಾ ಕೃಷ್ಣಪ್ಪ ದಸಂಸ (ಅಂಬೇಡಕರ ವಾದ) ರಾಜ್ಯ ಸಮಿತಿ ಸದಸ್ಯ ಎಸ್.ಎಸ್. ಪಟ್ಟಣಶೆಟ್ಟರ, ರಾಜ್ಯ ಮುಖಂಡರು, ಮೋಹನ ಅಲೈಲಕರ, ಕೃಷ್ಣಗೌಡ ಪಾಟೀಲ, ಹನಮಂತ ಭೀ, ವೀರಾಪೂರ ಕೊರಮ, ಸುರೇಶ ಕಟ್ಟಿಮನಿ, ಬಸವರಾಜ ಕಡೇಮನಿ, ವೆಂಕಟೇಶಯ್ಯ, ಪೀರಸಾಬ ಕೌತಾಳ, ಸತೀಶ ಪಾಸಿ ಮೋಹನಲಾಲ ಟಿ.ಸಿ, ಯುಸೂಫ್ ನಮಾಜಿ, ಸಿದ್ದಪ್ಪ ಅಂಗಧಾಳ, ವೆಂಕನಗೌಡ್ರ, ಗೋವಿಂದಗೌಡ್ರ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ನಾಲ್ಕು ದಿನಗಳಿಂದ ರೈತರು ಪ್ರತಿಭಟನೆ, ಸ್ಪಂದಿಸದ ಆಡಳಿತ: ಜೆಡಿಎಸ್ ರಾಜ್ಯ ವಕ್ತಾರ ವೆಂಕನಗೌಡ ಗೋವಿಂದಗೌಡ್ರ ಕಿಡಿ

"ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಿ ರೈತರು ನಾಲ್ಕು ದಿನಗಳಿಂದ...

ಕೊಪ್ಪಳ | ಅಕ್ರಮ ಗಾಂಜಾ ಮಾರಾಟ : ಒಂದೇ ಕುಟುಂಬದ 3 ಸೇರಿ ನಾಲ್ವರ ಬಂಧನ

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದವರ ಮೇಲೆ ದಾಳಿ ನಡೆಸಿ...

ಧಾರವಾಡ | ಹೆಬ್ಬಳ್ಳಿ ಗ್ರಾಮದಲ್ಲಿ 91 ಪಿಓಪಿ ಗಣೇಶ ವಿಗ್ರಹಗಳ ವಶಕ್ಕೆ ಪಡೆದ ತಪಾಸಣೆ ತಂಡ

ತಾಲೂಕಿನ ಹೆಬ್ಬಳ್ಳಿಯಲ್ಲಿ 91 ಪಿಓಪಿ ಗಣಪತಿಗಳನ್ನು ಜಿಲ್ಲಾಧಿಕಾರಿ ಆದೇಶದಂತೆ ರಚಿಸಿದ ಕಾರ್ಯ...

ಚಿಕ್ಕಮಗಳೂರು l ಪೋಕ್ಸೋ ಪ್ರಕರಣ: ಆರೋಪಿಗಳಿಗೆ ದಂಡ, ತಲಾ ಹತ್ತು ವರ್ಷ ಜೈಲು ಶಿಕ್ಷೆ

ಪೋಕ್ಸೋ ಪ್ರಕರಣದಲ್ಲಿ ಇಬ್ಬರು ಆರೋಪಿಗಳಿಗೆ ತಲಾ ಹತ್ತು ವರ್ಷ ಜೈಲು ಶಿಕ್ಷೆ...

Download Eedina App Android / iOS

X