ದೆಹಲಿಯಲ್ಲಿ ದಟ್ಟವಾದ ಮಂಜು: 110 ವಿಮಾನ, 25 ರೈಲುಗಳ ಸಂಚಾರಕ್ಕೆ ತೊಂದರೆ

Date:

Advertisements

ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ದಟ್ಟವಾದ ಮಂಜು ಆವರಿಸಿದ್ದು 110ಕ್ಕೂ ಹೆಚ್ಚು ವಿಮಾನಗಳು ಹಾಗೂ 25 ರೈಲುಗಳ ಸಂಚಾರಕ್ಕೆ ತೊಂದರೆಯುಂಟಾಗಿದೆ. ಗೋಚರತೆ ಪ್ರಮಾಣ ಕೇವಲ 25ಕ್ಕೆ ಕುಸಿದ ಕಾರಣ ಸಾಮಾನ್ಯ ಸಂಚಾರಕ್ಕೂ ಅಡ್ಡಿಯುಂಟಾಗಿದೆ.

ಹವಮಾನ ಇಲಾಖೆ “ಅತ್ಯಂತ ದಟ್ಟವಾದ ಮಂಜು” ಎಂಬ ಮುನ್ನೆಚ್ಚರಿಕೆ ಸಂದೇಶ ಜಾರಿಗೊಳಿಸಿದ್ದು, ಶೀತ ಗಾಳಿ ಪರಿಸ್ಥಿತಿ ಮುಂದುವರೆದಿದೆ.

ರಸ್ತೆಯಲ್ಲೆಲ್ಲ ದಟ್ಟ ಮಂಜು ಆವರಿಸಿದ್ದು, ಉತ್ತರ ಪ್ರದೇಶದ ಹಲವು ಕಡೆ ಅಪಘಾತಗಳ ಬಗ್ಗೆ ವರದಿಯಾಗಿದೆ. ಆಗ್ರಾ – ಲಖನೌ ಎಕ್ಸ್‌ಪ್ರೆಸ್‌ವೇನಲ್ಲಿ ಸರಣಿ ಅಪಘಾತವುಂಟಾಗಿ ಓರ್ವ ಮೃತಪಟ್ಟು, 12 ಮಂದಿ ಗಾಯಗೊಂಡಿದ್ದಾರೆ. ಬರೇಲಿಯಲ್ಲಿನ ಬರೇಲಿ – ಸುಲ್ತಾನ್‌ಪುರ ಹೆದ್ದಾರಿಯಲ್ಲಿ ವೇಗವಾಗಿ ಬಂದ ಟ್ರಕ್‌  ಮನೆಯೊಂದಕ್ಕೆ ಗುದ್ದಿದೆ.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಕೆಂಪೇಗೌಡ ವಿಮಾನನಿಲ್ದಾಣ ಸೀಮೆ- ರೈತರ ಕೊರಳ ಬಿಗಿದಿರುವ ಭೂಮಾಫಿಯಾ, ಕುಣಿಕೆ ಕಳಚಲಿ ಕಾಂಗ್ರೆಸ್ ಸರ್ಕಾರ

ಪಂಜಾಬ್‌, ಹರ್ಯಾಣ, ಉತ್ತರ ಪ್ರದೇಶ, ರಾಜಸ್ಥಾನ ಹಾಗೂ ಮಧ್ಯ ಪ್ರದೇಶದಲ್ಲಿ ಅತೀ ದಟ್ಟವಾದ ಮಂಜಿನ ಪರಿಸ್ಥಿತಿಗಳು ನಿರ್ಮಾಣವಾಗಲಿವೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ದೆಹಲಿಯಲ್ಲಿ ಸಫ್ಜರ್‌ಜಂಗ್‌ ವೀಕ್ಷಣಾಲಯ 50 ಮೀಟರ್ ಗೋಚರತೆ ದಾಖಲಿಸಿದರೆ, ಇಂದಿರಾ ಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣವು ಕೇವಲ 25 ಮೀಟರ್ ಗೋಚರತೆಗೆ ಇಳಿದಿದೆ. ಆದಾಗ್ಯೂ, ರಾಷ್ಟ್ರರಾಜದಾನಿಯ ಹಲವು ಕಡೆ ಕಡಿಮೆ ಗೋಚರತೆ ದಾಖಲಾಗಿರುವ ಬಗ್ಗೆ ಪಾದಚಾರಿಗಳು ಮಾಹಿತಿ ನೀಡಿದ್ದಾರೆ.

ದೆಹಲಿಯನ್ನು ಹೊರತುಪಡಿಸಿದರೆ, ಹರ್ಯಾಣ, ಉತ್ತರ ಪ್ರದೇಶ ಹಾಗೂ ಪಂಜಾಬ್‌ನಲ್ಲಿ ದಟ್ಟವಾದ ಮಬ್ಬು ಆವರಿಸಿರುವ ಕಾರಣ ಗೋಚರತೆ ಪ್ರಮಾಣ ಕ್ಷೀಣಿಸಿದೆ. ಹರ್ಯಾಣದಲ್ಲಿನ ಹಿಸ್ಸಾರ್ ಹಾಗೂ ಕರ್ನಾಲ್‌ನಲ್ಲಿ 25 ಮೀಟರ್‌ ಗೋಚರತೆ ದಾಖಲಾದರೆ ಆಗ್ರಾದಲ್ಲಿನ ಭಾತಿನಾಡ ಹಾಗೂ ಬರೇಲಿಯಲ್ಲಿ ಗೋಚರತೆಯು ಶೂನ್ಯಕ್ಕೆ ಇಳಿದಿದೆ ಎಂದು ಹವಾಮಾನ ಇಲಾಖೆ ಪ್ರಕಟಣೆ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಿಹಾರದಂತೆಯೇ, ಇಡೀ ದೇಶ ಚುನಾವಣಾ ಕಳ್ಳತನವನ್ನು ವಿರೋಧಿಸುತ್ತದೆ: ರಾಹುಲ್ ಗಾಂಧಿ

ಬಿಹಾರದಲ್ಲಿ ತಮ್ಮ 'ಮತದಾರ ಅಧಿಕಾರ ಯಾತ್ರೆ'ಗೆ ಸಕಾರಾತ್ಮಕ ಪ್ರತಿಕ್ರಿಯೆಯನ್ನು ಸ್ವಾಗತಿಸಿದ ಲೋಕಸಭೆ...

ಗುಜರಾತ್‌ನ ಗ್ರಾಮವೊಂದರಲ್ಲಿ ಕೊನೆಗೂ ದಲಿತರಿಗೆ ಕ್ಷೌರದಂಗಡಿಗೆ ಮುಕ್ತ ಪ್ರವೇಶ: ಶತಮಾನಗಳ ಅನಿಷ್ಟ ಪದ್ದತಿಗೆ ತೆರೆ

ಗುಜರಾತ್‌ನ ಜುನಾಗಡ್‌ ಜಿಲ್ಲೆಯಲ್ಲಿ ಗಡ್ಡ ಮೀಸೆ ಬೆಳೆಸಿದ್ದಕ್ಕೆ ದಲಿತ ಯುವಕರಿಬ್ಬರ ಜಾತಿ...

ರಾಜಸ್ಥಾನ | ರಸ್ತೆ ಅಪಘಾತ: ಮಹಿಳೆ ಸೇರಿ ನಾಲ್ವರು ಕಾರ್ಮಿಕರ ಸಾವು, ಐವರಿಗೆ ಗಾಯ

ಕಾರ್ಮಿಕರನ್ನು ಕರೆದೊಯ್ಯುತ್ತಿದ್ದ ವ್ಯಾನ್‌ಗೆ ವಾಹನವೊಂದು ಡಿಕ್ಕಿ ಹೊಡೆದು ಮಹಿಳೆ ಸೇರಿ ನಾಲ್ವರು...

Download Eedina App Android / iOS

X