ವಕ್ಫ್ ಆಸ್ತಿಗಳ ಒತ್ತುವರಿ ಕುರಿತು ತಿಂಗಳಲ್ಲಿ ವರದಿ ನೀಡಲು ಸಚಿವ ಜಮೀರ್ ಅಹಮದ್ ಖಾನ್ ಗಡುವು

Date:

Advertisements

ರಾಜ್ಯದಲ್ಲಿ ವಕ್ಫ್ ಆಸ್ತಿ ಒತ್ತುವರಿಗೆ ಸಂಬಂಧಿಸಿದಂತೆ ಪ್ರತಿ ಜಿಲ್ಲೆ ಹಾಗೂ ತಾಲೂಕುಗಳ ಸಮಗ್ರ ವರದಿ ಒಂದು ತಿಂಗಳಲ್ಲಿ ಸಲ್ಲಿಸಲು ಅಲ್ಪಸಂಖ್ಯಾತರ ಕಲ್ಯಾಣ ಹಾಗೂ ವಕ್ಫ್ ಸಚಿವ ಜಮೀರ್ ಅಹಮದ್ ಖಾನ್ ಗಡುವು ನೀಡಿದ್ದಾರೆ.

ಅಲ್ಪಸಂಖ್ಯಾತರ ಕಲ್ಯಾಣ ನಿರ್ದೇಶನಾಲಯದಲ್ಲಿ ಗುರುವಾರ ಜಿಲ್ಲಾ ವಕ್ಫ್ ಅಧಿಕಾರಿಗಳ ಸಭೆ ನಡೆಸಿದ ಅವರು, “ಜಿಲ್ಲಾವಾರು ವಕ್ಫ್ ಆಸ್ತಿ ಗಳ ಸರ್ಕಾರಿ ಒತ್ತುವರಿ, ಖಾಸಗಿ ಒತ್ತುವರಿ, ನ್ಯಾಯಾಲಯದಲ್ಲಿರುವ ಪ್ರಕರಣ ಸೇರಿ ಸಮಗ್ರ ಮಾಹಿತಿ ಜಿಲ್ಲಾ ಅಧಿಕಾರಿಗಳು ಸಲ್ಲಿಸಬೇಕು” ಎಂದು ಸೂಚನೆ ನೀಡಿದರು.

“ವಕ್ಫ್ ಆಸ್ತಿಗಳ ಒತ್ತುವರಿ ಬಗ್ಗೆ ಖಾಸಗಿ ಸಂಸ್ಥೆಯಿಂದಲೂ ಪ್ರತ್ಯೇಕ ಸಮೀಕ್ಷೆ ನಡೆಸಲಾಗುತ್ತಿದೆ. ಅಧಿಕಾರಿಗಳು ನೀಡುವ ವರದಿ, ಖಾಸಗಿ ಸಂಸ್ಥೆಯ ಮಾಹಿತಿ ತಾಳೆ ಆಗಬೇಕು. ಒಂದೊಮ್ಮೆ ತಾಳೆ ಆಗದಿದ್ದರೆ ಸಂಬಂಧಪಟ್ಟ ಅಧಿಕಾರಿಗಳನ್ನು ಅಮಾನತು ಮಾಡಲಾಗುವುದು” ಎಂದು ಎಚ್ಚರಿಕೆ ನೀಡಿದರು.

Advertisements

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ₹40 ಸಾವಿರ ಕೋಟಿ ಲೂಟಿ ಆರೋಪ; ಪ್ರಧಾನಿ ಮೋದಿ ಏನು ಹೇಳುತ್ತಾರೆ?

“ಜಿಲ್ಲೆಗಳಲ್ಲಿ ಕೆಲವು ಅಧಿಕಾರಿಗಳು ನ್ಯಾಯಾಲಯದಲ್ಲಿರುವ ಪ್ರಕರಣಗಳ ಬಗ್ಗೆ ಅಧ್ಯಯನ ನಡೆಸದೆ ನ್ಯಾಯಾಲಯಕ್ಕೆ ಹಾಜಾರಾಗದೆ ಪರೋಕ್ಷವಾಗಿ ಒತ್ತುವರಿದಾರರ ಜತೆ ಶಾಮೀಲಾಗಿರುವ ಮಾಹಿತಿ ಇದೆ. ಇಂಥ ವರ್ತನೆ ಸರಿ ಪಡಿಸಿಕೊಳ್ಳದಿದ್ದರೆ ಕಠಿಣ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

“ಹಣ ಮಾಡಲು ವಕ್ಫ್ ಇಲಾಖೆಗೆ ಬರಬೇಡಿ. ಇದು ದೇವರ ಕೆಲಸ. ಆರೋಪ ಕೇಳಿ ಬಂದರೆ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು. ವಕ್ಫ್ ಅಸ್ತಿಗಳ ರಕ್ಷಣೆಗೆ ಕಾಂಪೌಂಡ್ ಗೋಡೆ ನಿರ್ಮಿಸಲು ಅಗತ್ಯ ಇರುವ ಕಡೆ ಪ್ರಸ್ತಾವನೆ ಸಲ್ಲಿಸಿ. ವಕ್ಫ್ ಆಸ್ತಿ ಎಂದು ಗುರುತಿಸುವಂತಾಗಲು ಏಕರೂಪದ ಕಾಪೌಂಡ್ ಹಾಕಬೇಕು” ಎಂದರು.

ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ವಕ್ಫ್ ಬೋರ್ಡ್ ಅಧ್ಯಕ್ಷ ಅನ್ವರ್ ಬಾಷಾ, ನಿರ್ದೇಶಕ ಮೊಕಾಶಿ ಜಿಲಾನಿ ಉಪಸ್ಥಿತರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಸ್ಥಳ | 20 ವರ್ಷಗಳ ಅಸಹಜ ಸಾವು ಪ್ರಕರಣ; ತನಿಖೆ ತೀವ್ರಗೊಳಿಸಲು ಸಮಾನ ಮನಸ್ಕರ ಆಗ್ರಹ

ಬೆಂಗಳೂರಿನ ಪ್ರಮುಖ ಸಮಾನ ಮನಸ್ಕ ಸಂಘಟನೆಗಳು ಗುರುವಾರ ಸಭೆ ಸೇರಿ ಧರ್ಮಸ್ಥಳ...

ಬ್ರಹ್ಮಾವರ | ಮಹೇಶ್ ಶೆಟ್ಟಿ ತಿಮರೋಡಿಗೆ 14 ದಿನಗಳ ಕಾಲ ನ್ಯಾಯಾಂಗ ಬಂಧನ

ಬಿಜೆಪಿ ರಾಷ್ಟ್ರೀಯ ಸಂಘಟನಾ ಕಾರ್ಯದರ್ಶಿ ಬಿಎಲ್ ಸಂತೋಷ್ ವಿರುದ್ಧ ಅವಹೇಳನಾಕಾರಿ ಹೇಳಿಕೆ...

ಚಿಕ್ಕಮಗಳೂರು l ಸಭಾಧ್ಯಕ್ಷರೇ ಮಲೆನಾಡಿನ ಸಮಸ್ಯೆ ಬಗ್ಗೆ ಚರ್ಚಿಸಲು ಅವಕಾಶ ಕಲ್ಪಿಸಿ; ಹೆಚ್.ಡಿ ತಮ್ಮಯ್ಯ

ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ...

ಧರ್ಮಸ್ಥಳ ಪ್ರಕರಣಗಳ ಸಮಗ್ರ ತನಿಖೆಗೆ ಎಡಪಕ್ಷಗಳ ಒತ್ತಾಯ

ಧರ್ಮಸ್ಥಳದಲ್ಲಿ ನಡೆದಿರುವ ವೇದವಲ್ಲಿ, ಪದ್ಮಲತಾ, ನಾರಾಯಣ, ಯಮುನಾ ಮತ್ತು ಸೌಜನ್ಯ, ಮುಂತಾದ...

Download Eedina App Android / iOS

X