ಹಾಸನ | ಅತಿಥಿ ಉಪನ್ಯಾಸಕರ ಬೇಡಿಕೆ ಈಡೇರಿಕೆಗೆ ಎಸ್‌ಎಫ್‌ಐ ಆಗ್ರಹ

Date:

Advertisements

ಅತಿಥಿ ಉಪನ್ಯಾಸಕರಿಗೆ ಉದ್ಯೋಗ ಭದ್ರತೆ, ವೇತನ ಹೆಚ್ಚಳ ಮತ್ತು ಸೇವೆ ಖಾಯಂಗೊಳಿಸುವಂತೆ  ಒತ್ತಾಯಿಸಿ ಹಾಸನ ಜಿಲ್ಲಾ ಡಿವೈಎಫ್‌ಐ ಮತ್ತು ಎಸ್‌ಎಫ್‌ಐ ನೇತೃತ್ವದಲ್ಲಿ ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ ನಡೆಸಿದರು.

ಹಾಸನ ನಗರದ ಗಂಧದ ಕೋಟಿ ಕಾಲೇಜಿನಿಂದ ಹೊರಟ ಪ್ರತಿಭಟನಾ ಮೆರವಣಿಗೆ ಜಿಲ್ಲಾಧಿಕಾರಿ ಕಚೇರಿವರೆಗೆ ತೆರಳಿ ಅಪರ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಮನವಿ ಸಲ್ಲಿಸಿದರು.

“ಕಳೆದ 15ರಿಂದ 20 ವರ್ಷಗಳಿಂದ ಯಾವುದೇ ಸೌಲಭ್ಯಗಳಿಲ್ಲದೆ, ಕಾಯಮಾತಿ ಇಲ್ಲದೆ, ತಾತ್ಕಾಲಿಕ ವ್ಯವಸ್ಥೆಯಲ್ಲೇ ಸೇವೆ ಸಲ್ಲಿಸುತ್ತಿರುವ ಅತಿಥಿ ಉಪನ್ಯಾಸಕರ ಸ್ಥಿತಿ ದುಸ್ತರವಾಗಿದೆ. ಅವರ ಕಾಯಮಾತಿ ಸೇರಿದಂತೆ ವೇತನ ಹೆಚ್ಚಳ ಮತ್ತು ಉದ್ಯೋಗ ಭದ್ರತೆಗಾಗಿ ಹಲವು ವರ್ಷಗಳಿಂದ ಹೋರಾಟ ನಡೆಸುತ್ತಾ ಬಂದಿದ್ದು, ಕಳೆದ ಹಲವು ಸರ್ಕಾರಗಳಿಗೆ ಮನವಿ ಸಲ್ಲಿಸಿದರೂ ಶಾಶ್ವತ ಪರಿಹಾರ ನೀಡದೆ ಕೇವಲ ತಾತ್ಕಾಲಿಕ ಪರಿಹಾರ ನೀಡಿ ಸರ್ಕಾರಗಳು ಮುಖ್ಯವಾದ ಬೇಡಿಕೆಗಳನ್ನು ಮರೆಮಾಚುತ್ತಾ ಬಂದಿವೆ” ಎಂದು ಪ್ರತಿಭಟನಾಕಾರರು ಆರೋಪಿಸಿದರು.

Advertisements

ಎಸ್‌ಎಫ್‌ಐ ಹೋರಾಟ

“ಪ್ರಸ್ತುತ ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರ ಕಾಯಮಾತಿಗೆ ಕಾರ್ಯಯೋಜನೆ ರೂಪಿಸಲಾಗುವುದೆಂದು ತನ್ನ ಪ್ರಣಾಳಿಕೆಯಲ್ಲಿ ಘೋಷಿಸಿದ್ದು, ಅಧಿಕಾರಕ್ಕೆ ಬಂದು ಆರು ತಿಂಗಳು ಕಳೆದರೂ ಈವರೆಗೆ ಯಾವುದೇ ತೀರ್ಮಾನ ಕೈಗೊಂಡಿಲ್ಲ. ಇದು ಅತಿಥಿ ಉಪನ್ಯಾಸಕರಿಗೆ ಮಾಡಿದ ದ್ರೋಹವಾಗಿರುತ್ತದೆ” ಎಂದು ಆಕ್ರೋಶ ವ್ಯಕ್ತಪಡಿಸಿದರು.

ಅತಿಥಿ ಉಪನ್ಯಾಸಕರನ್ನು ಬೆಂಬಲಿಸಿ ಪ್ರತಿಭಟನೆ

“ಅತಿಥಿ ಉಪನ್ಯಾಸಕರಿಗೆ ಉದ್ಯೋಗದ ಭದ್ರತೆ ಒದಗಿಸಬೇಕು. ವೇತನ ಹೆಚ್ಚಳ ಮಾಡಬೇಕು ಜತೆಗೆ ಅವರ ಸೇವೆಯನ್ನು ಖಾಯಂಗೊಳಿಸುವ ಮೂಲಕ ಕೂಡಲೇ ಅತಿಥಿ ಉಪನ್ಯಾಸಕರ ಬೇಡಿಕೆಗಳನ್ನು ಈಡೇರಿಸಬೇಕು” ಎಂದು ರಾಜ್ಯ ಸರ್ಕಾರಕ್ಕೆ ಒತ್ತಾಯಿಸಿದರು.

ಈ ಸುದ್ದಿ ಓದಿದ್ದೀರಾ? ಗದಗ | ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿ ಸಭೆ; 50 ಸಾಮೂಹಿಕ ವಿವಾಹದ ತೀರ್ಮಾನ

ಪ್ರತಿಭಟನೆಯಲ್ಲಿ ಡಿವೈಎಫ್‌ಐ ಜಿಲ್ಲಾ ಕಾರ್ಯದರ್ಶಿ ಪೃಥ್ವಿ ಎಂ ಜಿ, ಎಸ್‌ಎಫ್‌ಐ ಜಿಲ್ಲಾ ಕಾರ್ಯದರ್ಶಿ ರಮೇಶ್‌ ಹಾಸನ್‌, ಡಿವೈಎಫ್‌ಐ ಜಿಲ್ಲಾಧ್ಯಕ್ಷ ವಾಸು, ಸಂಘಟನಾಕಾರುಗಳಾದ ಶಶಿ, ವಿವೇಕ್‌, ಸ್ವರೂಪ್ ಸೇರಿದಂತೆ ನೂರಾರು ವಿದ್ಯಾರ್ಥಿಗಳು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

ಯಾದಗಿರಿ | ಅತಿವೃಷ್ಟಿಯಿಂದ ಬೆಳೆ ಹಾನಿ: ರೈತರಿಗೆ ಪರಿಹಾರ ನೀಡುವಂತೆ ಆಗ್ರಹ

ಯಾದಗಿರಿ ಜಿಲ್ಲೆಯಲ್ಲಿ ಅತಿವೃಷ್ಟಿಯಿಂದ ಬೆಳೆ ಹಾನಿದ ರೈತರಿಗೆ ಸಮೀಕ್ಷೆ ನಡೆಸಿ ಶೀಘ್ರದಲ್ಲಿ...

ಗುಬ್ಬಿ | ಜನಪದ ಸಾಹಿತ್ಯ ಎಂದೆಂದಿಗೂ ಜೀವಂತ : ಡಾ.ಮೂರ್ತಿ ತಿಮ್ಮನಹಳ್ಳಿ

ಕನ್ನಡ ಸಾಹಿತ್ಯ ಲೋಕದಲ್ಲಿ ಹಲವು ಪ್ರಕಾರಗಳ ಪೈಕಿ ಜನಪದ ಸಾಹಿತ್ಯ...

Download Eedina App Android / iOS

X