ವಿಜಯಪುರ | ಸರ್ಕಾರಿ ಜಮೀನು ಕಬಳಿಕೆ; ಸೂಕ್ತ ಕ್ರಮಕ್ಕೆ ಕೆಆರ್‌ಎಸ್‌ ಆಗ್ರಹ

Date:

Advertisements

‌ಅಕ್ರಮವಾಗಿ ಕಬಳಿಸಿರುವ ಸರ್ಕಾರಿ ಜಮೀನುಗಳನ್ನು‌ ಕೂಡಲೇ ಸರ್ಕಾರದ ವಶಕ್ಕೆ ಪಡೆದುಕೊಂಡು, ಸಾರ್ವಜನಿಕ ಕೆಲಸಕ್ಕೆ ಉಪಯೋಗ ಮಾಡಿಕೊಡಬೇಕೆಂದು ಆಗ್ರಹಿಸಿ ಕೆಆರ್‌ಎಸ್ ಪಕ್ಷದ ಕಾರ್ಯಕರ್ತರು ಅಪರ ಜಿಲ್ಲಾಧಿಕಾರಿ ಹಾಗೂ ಅಪರ ಜಿಲ್ಲಾ ದಂಡಾಧಿಕಾರಿಗಳಿಗೆ ಮನವಿ‌ ಸಲ್ಲಿಸಿದರು.

“ವಿಜಯಪುರ ಜಿಲ್ಲೆ ಇಂಡಿ ತಾಲೂಕಿನ ಹಂಜಗಿ ಗ್ರಾಮದ ಜಮೀನು ಸರ್ಕಾರಿ ಮುಫತ್ ಗಾಯರಾಣ ದನಗಳ ಚಿರಾಯಿ 214 ಎಕರೆ ಜಮೀನು ಅರಣ್ಯ ಭೂಮಿಯಾಗಿದ್ದು, ಈ ಭೂಮಿಯನ್ನು ಹಲವು ಪ್ರಭಾವಿಗಳು ಅಕ್ರಮಿಸಿಕೊಂಡು, ನಕಲಿ ದಾಖಲೆಗಳನ್ನು ಸೃಷ್ಟಿಸಿ ಮೂರನೇ ವ್ಯಕ್ತಿಗಳಿಗೆ ಮಾರಾಟ ಮಾಡಿದ್ದಾರೆ” ಎಂದು ಆರೋಪಿಸಿದರು.

“ಸರ್ಕಾರಿ ಭೂಮಿ ಕಾಪಾಡಬೇಕಾದ ಆಡಳಿತವು ನಿರ್ಲಕ್ಷ್ಯ ಮಾಡುತ್ತಿದೆ. 214 ಎಕರೆ ಜಮೀನುಗಳಿಗೆ ಸಂಬಂಧಿಸಿದ ದಾಖಲೆಗಳನ್ನು ಪರಿಶೀಲಿಸಿದಾಗ ಒಂದೊಂದು ದಾಖಲೆಗಳಲ್ಲಿ ಒಂದೊಂದು ಹೆಸರುಗಳಿದ್ದು, ಇದು ನಕಲಿ ದಾಖಲೆಗಳನ್ನು ಸೃಷ್ಟಿಸಿರುವುದು ಸ್ಪಷ್ಟವಾಗಿ ಕಂಡುಬರುತ್ತಿದೆ. ಈ ವಿಚಾರವಾಗಿ ಕೂಡಲೇ ಸಿಒಡಿ ತನಿಖಾಧಿಕಾರಿಗಳ ಮುಖಾಂತರ ತನಿಖೆ ನಡೆಬೇಕು. ಈ ನಿಟ್ಟಿನಲ್ಲಿ ಸಂಬಂಧಪಟ್ಟ ಅಧಿಕಾರಿಗಳು ಸೂಕ್ತ ಕ್ರಮ ಕೈಗೊಳ್ಳಬೇಕು” ಎಂದು ಒತ್ತಾಯಿಸಿದರು.

Advertisements

ಈ ಸುದ್ದಿ ಓದಿದ್ದೀರಾ? ತುಮಕೂರು | ಕನ್ನಡಪರ ಸಂಘಟನೆ ಮುಖಂಡರ ಬಂಧನಕ್ಕೆ ಕರವೇ ಖಂಡನೆ

ಈ ಸಂದರ್ಭದಲ್ಲಿ ಕೆಆರ್‌ಎಸ್‌ ಪಕ್ಷದ ಪದಾಧಿಕಾರಿಗಳು, ಸೈನಿಕರು, ಜಿಲ್ಲಾಧ್ಯಕ್ಷ ಅಶೋಕ ಜಾಧವ, ವಿಜಯಪುರ ನಗರ ಘಟಕದ ಅಧ್ಯಕ್ಷ ವಿಕ್ರಮ ವಾಘೋಮೋಡೆ, ಇಂಡಿ ತಾಲೂಕು ಅಧ್ಯಕ್ಷ ಗಣಪತಿ ರಾಥೋಡ್, ಪ್ರಧಾನ ಕಾರ್ಯದರ್ಶಿ ಲಕ್ಷ್ಮಣ್ ಚಡಚಣ ಸೇರಿದಂತೆ ಇಂಡಿ ತಾಲೂಕಿನ ಸದಸ್ಯರು ಇದ್ದರು.

eedina
ಈ ದಿನ ಡೆಸ್ಕ್‌
Website |  + posts

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಳ್ಳಾರಿ | ನಶಿಸಿ ಹೋಗುತ್ತಿರುವ ತೊಗಲುಗೊಂಬೆ ಪ್ರದರ್ಶನ ಉಳಿಸಿ ಬೆಳೆಸಬೇಕು: ಜೋಳದರಾಶಿ ತಿಮ್ಮಪ್ಪ

ನಶಿಸಿ ಹೋಗುತ್ತಿರುವ ತೊಗಲು ಗೊಂಬೆ ಪ್ರದರ್ಶನ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಜವಾಬ್ದಾರಿ...

ಭಟ್ಕಳ | ಮಗಳ ಅಶ್ಲೀಲ ವಿಡಿಯೊ ವೈರಲ್ ಮಾಡುವುದಾಗಿ ಬೆದರಿಕೆ: ಮೂವರ ಬಂಧನ

ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ನಗರದ ಕಿದ್ವಾಯಿ ರಸ್ತೆಯೊಂದರ ತರಕಾರಿ ವ್ಯಾಪಾರಿಯನ್ನು...

ಮಂಗಳೂರು | ಸ್ನಾತಕೋತ್ತರದತ್ತ ಮುಖಮಾಡದ ಪದವೀಧರರು: ಪ್ರವೇಶಾತಿ ಗಡುವು ವಿಸ್ತರಣೆ

ನಾಲ್ಕು ದಶಕಗಳಷ್ಟು ಹಳೆಯದಾದ ಮಂಗಳೂರು ವಿಶ್ವವಿದ್ಯಾಲಯ(MU), ನಿರೀಕ್ಷಿತ ಸಂಖ್ಯೆಯ ಪ್ರವೇಶಗಳನ್ನು ಪಡೆಯಲು...

ತುಮಕೂರು | ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ : ಡಿಕೆಶಿ ವಿರುದ್ಧ ಕೆ. ಎನ್ ರಾಜಣ್ಣ ವಾಗ್ದಾಳಿ

ಡಿ.ಕೆ.ಶಿವಕುಮಾ‌ರ್ ಅಧಿವೇಶನದಲ್ಲಿ ಆರ್‌ಎಸ್ಎಸ್ ಗೀತೆ ಹಾಡಿದ ಬಗ್ಗೆ  ಮಾಜಿ ಸಚಿವ ಕೆ...

Download Eedina App Android / iOS

X